Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...