Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...