Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...