Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...