Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...