Homeಕರೋನಾ ತಲ್ಲಣಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

- Advertisement -
- Advertisement -

ಬಿಹಾರ ತನ್ನ ಕೋವಿಡ್ ಸಾವುಗಳ ಕುರಿತು ಪರಿಷ್ಕೃತ ವರದಿ ನೀಡಿದ್ದು, ಕೋವಿಡ್‍ ಸಾವುಗಳ ಸಂಖ್ಯೆ 9 ಸಾವಿರಕ್ಕಿಂತ ಹೆಚ್ಚಿದೆ ಎಂದು ತಿಳಿಸಿದೆ. ಇದು ಈಗ ವಿವಾದಾತ್ಮಕವಾಗಿದೆ,  ಅಂದರೆ ಕಳೆದ ವರ್ಷದಿಂದ ಅದು ಸಾವಿನ ಪ್ರಮಾಣವನ್ನು ಮುಚ್ಚಿಡುತ್ತ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಅದು ಮೊದಲು ಹೇಳುತ್ತ ಬಂದಿದ್ದ ಸಾವಿನ ಸಂಖ್ಯೆಗಿಂತ ಈಗ ನೀಡಿರುವ ಸಾವಿನ ಸಂಖ್ಯೆ ಶೇಕಡಾ 72 ರಷ್ಟು ಹೆಚ್ಚಿದೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಬಿಹಾರದ ಈ ಪರಿಷ್ಕೃತ ವರದಿಯಿಂದಾಗಿ, ಭಾರತವು ಇಂದು 6,148 ಹೊಸ ಸಾವುಗಳನ್ನು ವರದಿ ಮಾಡಿದೆ, ಇದು ಇದುವರೆಗಿನ ಏಕದಿನದಲ್ಲಿ ಅತಿ ಗರಿಷ್ಠ! ಇದಕ್ಕೆ ಕಾರಣ, ಬಿಹಾರದಲ್ಲಿ ಮರೆಮಾಚಿದ್ದ ಕೋವಿಡ್‍ ಸಾವುಗಳ ಸಂಖ್ಯೆ ಈಗ ಸೇರ್ಪಡೆಯಾಗಿರುವುದಾಗಿದೆ.

ಸಾಂಕ್ರಾಮಿಕ ರೋಗದಲ್ಲಿ ರಾಜ್ಯಾದ್ಯಂತ ಒಟ್ಟು ಸಾವಿನ ಸಂಖ್ಯೆ 9,429 ಎಂದು ನಿತೀಶ್ ಕುಮಾರ್ ನೇತೃತ್ವದ ಎನ್‍ಡಿಎ ಸರ್ಕಾರ ಬುಧವಾರ ವರದಿ ಮಾಡಿದೆ. ಮೊದಲು ಇದನ್ನು  5,424 ಎಂದು ತಿಳಿಸಲಾಗಿತ್ತು.

ರಾಜ್ಯದಲ್ಲಿ ಸೋಂಕುಗಳು ಮತ್ತು ಸಾವುಗಳ ಪ್ರಮಾಣವನ್ನು ಬಿಹಾರ ಸರ್ಕಾರ ಮರೆಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದರಿಂದ, ಪಾಟ್ನಾ ಹೈಕೋರ್ಟ್ ಏಪ್ರಿಲ್-ಮೇ  ಅವಧಿಯ ಎರಡನೇ ಅಲೆಯಲ್ಲಿ ಸಾವುನೋವುಗಳ ಲೆಕ್ಕಪರಿಶೋಧನೆ (ಆಡಿಟ್‍) ಮಾಡಲು ಸೂಚಿಸಿತ್ತು.

ಕಳೆದ ತಿಂಗಳು ಬಕ್ಸಾರ್ ಬಳಿ ನದಿಯಲ್ಲಿ ಶವಗಳು ತೇಲುತ್ತಿರುವ ಆಘಾತಕಾರಿ ದೃಶ್ಯಗಳು ಪ್ರತಿಪಕ್ಷಗಳ ಆರೋಪವನ್ನು ಬಲಪಡಿಸಿದ್ದವು.

ಮೂರು ವಾರಗಳ ಲೆಕ್ಕಪರಿಶೋಧನೆಯ ನಂತರದ ಹೊಸ ಅಂಕಿ ಅಂಶಗಳು ಬಿಡುಗಡೆಯಾಗಿವೆ. ಮಾರ್ಚ್ 2020 ಮತ್ತು 2021 ರ ನಡುವೆ ಬಿಹಾರದಲ್ಲಿ ಕೋವಿಡ್‌ನಿಂದ 1,600 ಜನರು ಸಾವನ್ನಪ್ಪಿದ್ದರೆ, ಈ ವರ್ಷ ಏಪ್ರಿಲ್‌ನಿಂದ ಜೂನ್ 7 ರವರೆಗೆ ಸಾವಿನ ಸಂಖ್ಯೆ 7,775 ರಷ್ಟಿದೆ. ಇದು ಸುಮಾರು ಆರು ಪಟ್ಟು ಹೆಚ್ಚು!

ಎಲ್ಲಾ ಜಿಲ್ಲೆಗಳ ಪರಿಶೀಲನೆಯ ನಂತರ ಶೇಕಡಾ 72 ರಷ್ಟು ಹೆಚ್ಚಿನ ಸಾವುಗಳನ್ನು ಈಗ ಅಧಿಕೃತವಾಗಿ ಸೇರಿಸಲಾಗಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ. ಇದು 38 ಜಿಲ್ಲೆಗಳಿಂದ ದಾಖಲಾದ ಒಟ್ಟು ಕೋವಿಡ್‍ ಸಾವುಗಳ ವಿವರವಾಗಿದೆ. ಆದರೆ ಈ ‘ಹೆಚ್ಚುವರಿ’ ಸಾವುಗಳು ಯಾವಾಗ ಸಂಭವಿಸಿದವು ಎಂಬುದನ್ನು ನಿರ್ದಿಷ್ಟವಾಗಿ ಹೇಳಿಲ್ಲ. ಇದು ಕೂಡ ಅನುಮಾನಕ್ಕೆ ಎಡೆ ಮಾಡಿದೆ.

ಹೊಸ ಅಂಕಿಅಂಶಗಳ ಪ್ರಕಾರ, ಹೆಚ್ಚಿನ ಸಾವುಗಳು (2,303 ಸಾವು) ರಾಜ್ಯ ರಾಜಧಾನಿ ಪಾಟ್ನಾದಲ್ಲಿ ಸಂಭವಿಸಿವೆ. ಪರಿಶೀಲನೆಯ ನಂತರ ವರದಿಯಾದ ಹೆಚ್ಚುವರಿ ಸಾವುಗಳು ಪಾಟ್ನಾಕ್ಕೆ ಸಂಬಂಧಿಸಿವೆ.

ಆದರೆ ಪಾಟ್ನಾದಲ್ಲಿ ಸರ್ಕಾರ ನಡೆಸುತ್ತಿರುವ ಮೂರು ಶವಾಗಾರ ಕೇಂದ್ರಗಳ ದಾಖಲೆಗಳು 3,243 “ಕೋವಿಡ್ ದಹನ”ಗಳನ್ನು ದೃಢಪಡಿಸುತ್ತವೆ! ಈ ಹೊಸ ವ್ಯತ್ಯಾಸವು ಕೂಡ  ಇನ್ನಷ್ಟು ವಿವಾದಾತ್ಮಕ ವಿಷಯವಾಗುತ್ತಿದೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪ್ರತ್ಯಯ ಅಮೃತ್,  ‘ಪಾಟ್ನಾದಲ್ಲಿ ಬೇರೆ ಜಿಲ್ಲೆಯ ವ್ಯಕ್ತಿಯೊಬ್ಬರು ಮೃತಪಟ್ಟರೆ ಮತ್ತು ಇಲ್ಲಿ ಅವರ ಅಂತ್ಯಸಂಸ್ಕಾರ ಮಾಡಿದರೆ, ಸಾವನ್ನು ಸಂತ್ರಸ್ತರ ಸ್ಥಳೀಯ ಜಿಲ್ಲೆಯ ಅಂಕಿಸಂಖ್ಯೆಯಲ್ಲಿಯೇ ಪರಿಗಣಿಸಲಾಗುತ್ತದೆಯೇ ಹೊರತು ಪಾಟ್ನಾದ ಅಂಕಿಸಂಖ್ಯೆಯಲ್ಲಿ ಅಲ್ಲ’ ಎಂದಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ತವರು ಜಿಲ್ಲೆ ನಳಂದಾದಲ್ಲಿ ಹೊಸದಾಗಿ 222 ಸಾವುಗಳನ್ನು ವರದಿಯಲ್ಲಿ ಸೇರಿಸಲಾಗಿದೆ

ರಾಜ್ಯದ ಚೇತರಿಕೆಯ ಪ್ರಮಾಣವನ್ನು ಶೇ. 98.70 ರಿಂದ 97.65ಕ್ಕೆ ಇಳಿದಿದೆ ಎಂದು ಪರಿಷ್ಕೃತ ವರದಿ ತಿಳಿಸಿದೆ.

ಕೋವಿಡ್‍ ಬಿಕ್ಕಟ್ಟನ್ನು ನಿಭಾಯಿಸುವಲ್ಲಿನ ವೈಫಲ್ಯವನ್ನು ಮರೆಮಾಚಲು ಬಿಹಾರದಲ್ಲಿ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ತಿರುಚುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತ ಬಂದಿದ್ದವು. ಈಗ ಹೈಕೋರ್ಟ್ ಸೂಚನೆ ಪ್ರಕಾರ ತಯಾರಿಸಿದ ಆಡಿಟ್‍ ವರದಿ ಇದನ್ನು ಪುಷ್ಟೀಕರಿಸಿದೆ. ಅಂಕಿಅಂಶಗಳನ್ನು ಮತ್ತೆ ಪರಿಷ್ಕರಿಸಬಹುದಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ನಿಜವಾದ ಸಾವಿನ ಸಂಖ್ಯೆ ಇಪ್ಪತ್ತು ಪಟ್ಟು ಹೆಚ್ಚಾಗಿದೆ ಎಂದು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಟ್ವೀಟ್ ಮಾಡಿದ್ದಾರೆ.

“ಜನರು ತಮ್ಮ ಕುಟುಂಬ ಸದಸ್ಯರು ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆಂದು ಸಾಬೀತುಪಡಿಸಲು ನಿಜವಾದ ದಾಖಲೆಯೊಂದಿಗೆ  ಮುಂದೆ ಬಂದರೆ ಅಂಕಿಅಂಶಗಳನ್ನು ಪರಿಷ್ಕರಿಸಲು ನಾವು ಮುಕ್ತರಾಗಿದ್ದೇವೆ. ಸಹಾಯ ಮಾಡುವುದು ನಮ್ಮ ನಿಜವಾದ ಉದ್ದೇಶವೇ ಹೊರತು ವಿಷಯವನ್ನು  ಮರೆಮಾಡುವುದಲ್ಲ. ಇನ್ನೂ ಕಾಣೆಯಾಗಿರುವ ಕೆಲವು ಹೆಸರುಗಳನ್ನು ನಾವು ತಳ್ಳಿಹಾಕುತ್ತಿಲ್ಲ” ಎಂದು ಬಿಹಾರ ಆರೋಗ್ಯ ಸಚಿವ ಮಂಗಲ್ ಪಾಂಡೆ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರ ಚರ್ಚೆ: ‘ಸಾಯುವವರೆಗೂ ಬಿಜೆಪಿ ಸೇರಲಾರೆ’ ಎಂದ ಕಪಿಲ್‍ ಸಿಬಲ್‍

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...