Homeಕರೋನಾ ತಲ್ಲಣದೇಶದಲ್ಲಿ ಏರಿಕೆಯಾದ ಕೊರೊನಾ ಪ್ರಕರಣಗಳು: ಕೇರಳದ ಪಾಲು 75% ಕ್ಕೂ ಅಧಿಕ

ದೇಶದಲ್ಲಿ ಏರಿಕೆಯಾದ ಕೊರೊನಾ ಪ್ರಕರಣಗಳು: ಕೇರಳದ ಪಾಲು 75% ಕ್ಕೂ ಅಧಿಕ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 47,029 ಕೊರೊನಾ ವೈರಸ್ ಪ್ರಕರಣಗಳು ಮತ್ತು 509 ಸಾವುಗಳು ವರದಿಯಾಗಿವೆ. ಇದರಲ್ಲಿ ಕೇರಳದಲ್ಲಿ 32,803 ಹೊಸ ಪ್ರಕರಣಗಳು ಮತ್ತು 173 ಸಾವುಗಳು ವರದಿಯಾಗಿವೆ. ಈ ಮೂಲಕ ಒಟ್ಟು ಕೊರೊನಾ ಪ್ರಕರಣಗಳು 3,28,57,937 (3.28 ಕೋಟಿ) ಕ್ಕೆ ಏರಿಕೆಯಾಗಿದೆ.

ಒಟ್ಟು ಸಾವಿನ ಸಂಖ್ಯೆ 4.39 ಲಕ್ಷಕ್ಕೆ (4,39,529) ಹೆಚ್ಚಾಗಿದೆ. ಪ್ರಸ್ತುತ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3.89 ಲಕ್ಷ (3,89,583) ಆಗಿದೆ.

ಕೊರೊನಾ ವೈರಸ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿರುವ ಕಾರಣ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ (BMC) ಯುರೋಪ್, ಚೀನಾ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಚೀನಾ ಮತ್ತು ಮಧ್ಯಪ್ರಾಚ್ಯದಿಂದ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಸೆಪ್ಟೆಂಬರ್ 3 ರಿಂದ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ತರಲು ತಿಳಿಸಿದೆ.

ಇದನ್ನೂ ಓದಿ: ‘ನಮ್ಮದು ಕೊರೊನಾ ವಿರೋಧಿ ಸರ್ಕಾರವೇ ಹೊರತು, ಹಿಂದೂ ವಿರೋಧಿಯಲ್ಲ’ – BJP ಗೆ ತಿರುಗೇಟು ನೀಡಿದ ಉದ್ದವ್‌ ಠಾಕ್ರೆ

ಕೊರೊನಾ ಎರಡನೇ ಅಲೆಯಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಕಂಗಟ್ಟಿದ್ದ ಕಾರಣ ದೆಹಲಿ ಸರ್ಕಾರವು ಆರೋಗ್ಯ ಕೇಂದ್ರಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಮತ್ತು ಕ್ರಯೋಜೆನಿಕ್ ಟ್ಯಾಂಕರ್‌ಗಳನ್ನು ಖರೀದಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 16.

ಕೇರಳದಿಂದ ರಾಜ್ಯಕ್ಕೆ ಪ್ರವೇಶಿಸುವ ಜನರಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಾಂಸ್ಥಿಕ ಕ್ವಾರಂಟೈನ್‌ ಅನ್ನು ಕಡ್ಡಾಯಗೊಳಿಸಿದೆ. ಕೇರಳದ ಪ್ರಯಾಣಿಕರು ಅಲ್ಲಿ ಒಂದು ವಾರದವರೆಗೆ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಲಸಿಕೆ ಹಾಕಿದ ಮತ್ತು ಆರ್‌ಟಿ-ಪಿಸಿಆರ್ ನಗೆಟಿವ್‌‌ ಪರೀಕ್ಷಾ ವರದಿಯನ್ನು ಹೊಂದಿರುವವರಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ಕರ್ನಾಟಕ ಆರೋಗ್ಯ ಸಚಿವ ಕೆ ಸುಧಾಕರ್ ಇತ್ತಿಚೆಗೆ ಹೇಳಿದ್ದರು.

ಕೇರಳದಿಂದ ವಿಮಾನದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ. ಸಾಂಸ್ಥಿಕ ಕ್ವಾರಂಟೈನ್‌‌ಗೆ ಗೊತ್ತುಪಡಿಸಲಾಗಿರುವ ತಮ್ಮ ಆಯ್ಕೆಯ ಹೋಟೆಲ್ ಅನ್ನು ಈ ಪ್ರಯಾಣಿಕರು ಆಯ್ಕೆ ಮಾಡಿಕೊಳ್ಳಬಹುದು ಎಂದು ಸುಧಾಕರ್ ಹೇಳಿದ್ದರು.


ಇದನ್ನೂ ಓದಿ: ಕೇರಳ: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ 3 ಲಕ್ಷ ರೂ. ಆರ್ಥಿಕ ನೆರವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...