Homeಕರೋನಾ ತಲ್ಲಣದೇಶದಲ್ಲಿ ಕೊರೊನಾ ಪ್ರಕರಣಗಳ ಏರಿಕೆ: 43,509 ಮಂದಿಗೆ ಸೋಂಕು, 634 ಸಾವು

ದೇಶದಲ್ಲಿ ಕೊರೊನಾ ಪ್ರಕರಣಗಳ ಏರಿಕೆ: 43,509 ಮಂದಿಗೆ ಸೋಂಕು, 634 ಸಾವು

- Advertisement -
- Advertisement -

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ವೈರಸ್ ಪ್ರಕರಣಗಳು ಮತ್ತು 634 ಸಾವುಗಳು ದಾಖಲಾಗಿವೆ. ಕೇರಳದಲ್ಲಿ ಸತತ ಎರಡನೇ ದಿನ 22,000 ಕ್ಕೂ ಹೆಚ್ಚು ಕೇಸ್‌ಗಳು ದಾಖಲಾಗುವ ಮೂಲಕ ಸಕ್ರಿಯ ಪ್ರಕರಣಗಳು ಮತ್ತೆ ಏರಿಕೆಯಾಗಿದ್ದು 4 ಲಕ್ಷಕ್ಕಿಂತ ಹೆಚ್ಚಾಗಿದೆ. ಕೇರಳ ಒಂದರಲ್ಲೇ 1.5 ಲಕ್ಷ ಸಕ್ರಿಯ ಪ್ರಕರಣಗಳಿವೆ.

ಸರ್ಕಾರವು ಬಿಡುಗಡೆ ಮಾಡಿರುವ ರಾಜ್ಯಮಟ್ಟದ ಸಿರೊಸರ್ವೆ ಅಂಕಿಅಂಶಗಳು ಕೇರಳದ ಜನಸಂಖ್ಯೆಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟ ಶೇಕಡಾ 44 ರಷ್ಟು ಜನರು ಮಾತ್ರ ಈವರೆಗೆ ವೈರಸ್ ಸೋಂಕಿಗೆ ಒಳಗಾಗಿದ್ದಾರೆ, ಆದರೆ, ರಾಷ್ಟ್ರೀಯ ಸರಾಸರಿ ಶೇಕಡಾ 67 ಕ್ಕಿಂತ ಹೆಚ್ಚಾಗಿದೆ.

ಅಂದರೆ, ಇನ್ನೂ ಅನೇಕ ರಾಜ್ಯಗಳಿಗೆ ಹೋಲಿಸಿದರೆ ಕೇರಳ ರಾಜ್ಯದ ಜನಸಂಖ್ಯೆಯ ಹೆಚ್ಚಿನ ಭಾಗವು ಕೊರೊನಾ ಸೋಂಕಿಗೆ ಒಳಗಾಗುತ್ತದೆ. ಹೀಗಾಗಿಯೇ ಕೇರಳವು ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಮಾಡುತ್ತಿದೆ ಎಂದು ಸಿರೋಸರ್ವೆ ತಿಳಿಸಿದೆ. ಕಳೆದ ಎರಡು ದಿನಗಳಿಂದ ಕೇರಳವು 22,000 ಕ್ಕೂ ಹೆಚ್ಚು ಸೋಂಕಿತರನ್ನು ವರದಿ ಮಾಡಿದೆ, ಇದು ರಾಷ್ಟ್ರೀಯ ಎಣಿಕೆಯ ಶೇಕಡಾ 50 ಕ್ಕಿಂತ ಹೆಚ್ಚಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ಕೊರೊನಾ ಏರಿಕೆ: ವೀಕೆಂಡ್ ಲಾಕ್‌ಡೌನ್, ಕೇಂದ್ರದಿಂದ ತಂಡ ರವಾನೆ

ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ಹೊಂದಿರುವ ರಾಜ್ಯವಾದ ಮಹಾರಾಷ್ಟ್ರವು ಕಡಿಮೆ ಸೋಂಕು ಹರಡುವಿಕೆ ಹೊಂದಿದೆ. ಮಹಾರಾಷ್ಟ್ರದ ಜನಸಂಖ್ಯೆಯ ಶೇಕಡಾ 58 ರಷ್ಟು ಜನರು ಈವರೆಗೆ ಸೋಂಕಿಗೆ ಒಳಗಾಗಿದ್ದಾರೆ ಎಂದು ಸಿರೋಸರ್ವೆ ಡೇಟಾ ತಿಳಿಸುತ್ತದೆ.

ಸಿರೋಸರ್ವೆಯ ವರದಿ ಪ್ರಕಾರ ಕೊರೊನಾ ಸೋಂಕು ಹರಡುವಿಕೆಯು ಮಧ್ಯಪ್ರದೇಶದಲ್ಲಿ ಅತಿ ಹೆಚ್ಚಾಗಿತ್ತು ಎಂದು ತಿಳಿಸಿದೆ. ಮಧ್ಯಪ್ರದೇಶದಲ್ಲಿ ಸುಮಾರು 79 ಪ್ರತಿಶತದಷ್ಟು ಜನರು ಈಗಾಗಲೇ ಸೋಂಕಿಗೆ ಒಳಗಾಗದ್ದಾರೆ. ರಾಜಸ್ಥಾನದಲ್ಲಿ ಶೇ 76.2, ಬಿಹಾರದಲ್ಲಿ ಶೇ 76 ಮತ್ತು ಉತ್ತರ ಪ್ರದೇಶದಲ್ಲಿ ಶೇ 71 ರಷ್ಟು ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಸು ಸರ್ವೆ ತಿಳಿಸಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯೊಂದಿಗೆ (ಐಸಿಎಂಆರ್) ಸಮಾಲೋಚಿಸಿ ಸೋಂಕು ಹರಡುವಿಕೆ ಕುರಿತು ಜಿಲ್ಲಾ ಮಟ್ಟದ ದತ್ತಾಂಶವನ್ನು ಕಲೆಹಾಕಲು ಹೆಚ್ಚಿನ ಸಿರೋಸರ್ವೆಗಳನ್ನು ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಸೌದಿ ಅರೇಬಿಯಾ: ಭಾರತ ಸೇರಿ ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಕ್ಕೆ ಭೇಟಿ ನೀಡಿದರೆ 3 ವರ್ಷಗಳ ಪ್ರಯಾಣ ನಿಷೇಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...