Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...