Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...