Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...