Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...