Homeಮುಖಪುಟಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 'ವಾಕ್ ಸ್ವಾತಂತ್ರ್ಯ ಉಲ್ಲಂಘನೆ' ಪ್ರಕರಣಗಳು ದಾಖಲು: ವರದಿ

ಜನವರಿ-ಏಪ್ರಿಲ್ ನಡುವೆ ದೇಶದಲ್ಲಿ 134 ‘ವಾಕ್ ಸ್ವಾತಂತ್ರ್ಯ ಉಲ್ಲಂಘನೆ’ ಪ್ರಕರಣಗಳು ದಾಖಲು: ವರದಿ

- Advertisement -
- Advertisement -

ಬುಧವಾರ (ಮೇ 1) ಪ್ರಕಟವಾದ ಫ್ರೀ ಸ್ಪೀಚ್ ಕಲೆಕ್ಟಿವ್‌ನ ಅಧ್ಯಯನದ ಪ್ರಕಾರ, ಈ ವರ್ಷದ ಜನವರಿ ಮತ್ತು ಏಪ್ರಿಲ್ ನಡುವೆ ದೇಶದಲ್ಲಿ ಕನಿಷ್ಠ 134 ವಾಕ್ ಸ್ವಾತಂತ್ರ್ಯ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆಯ ಪ್ರಕರಣಗಳು ವರದಿಯಾಗಿವೆ.

ಫ್ರೀ ಸ್ಪೀಚ್ ಕಲೆಕ್ಟಿವ್‌ ವಾಕ್ ಸ್ವಾತಂತ್ರ್ಯದ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಗಾವಲಿಡುತ್ತದೆ. ಈ ಕುರಿತ ದಾಖಲೆಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡುತ್ತದೆ. ಅಲ್ಲದೆ, ಇದು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಎದುರಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ.

ವರದಿಯಲ್ಲಿ ಉಲ್ಲೇಖಿಸಲಾದ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಪತ್ರಕರ್ತರು, ಶಿಕ್ಷಣ ತಜ್ಞರು, ಯೂಟ್ಯೂಬರ್‌ಗಳು, ವಿದ್ಯಾರ್ಥಿಗಳು ಮತ್ತು ಇತರ ನಾಗರಿಕರ ಮೇಲಿನ ಕಿರುಕುಳ, ದಾಳಿಗಳು, ಬಂಧನಗಳು ಮತ್ತು ಸೆನ್ಸಾರ್‌ಶಿಪ್ ಸೇರಿವೆ. ವ್ಯಕ್ತಿಗಳ ವಿರುದ್ಧದ ಕಾನೂನು ಕ್ರಮ ಮತ್ತು ಬೆದರಿಕೆಗಳ ಉದಾಹರಣೆಗಳು ಮತ್ತು ಇಂಟರ್ನೆಟ್ ಸ್ಥಗಿತಗೊಳಿಸುವಿಕೆಯ ಪ್ರಕರಣಗಳು ಕೂಡ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಗಳಲ್ಲಿ ಒಳಗೊಂಡಿವೆ.

ವರದಿ ಪ್ರಕಾರ, ವರ್ಷಾರಂಭದಿಂದ ದೇಶದಲ್ಲಿ 34 ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ದಾಳಿಗೊಳಗಾದವರಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕೂಡ ಒಬ್ಬರು. ಫೆಬ್ರವರಿ 9, 2024 ರಂದು ಪುಣೆಯ ಸಾರ್ವಜನಿಕ ಸಭೆಯೊಂದಕ್ಕೆ ಕಾರ್ಯಕರ್ತ ವಿಶ್ವಂಭರ್ ಚೌಧರಿ ಮತ್ತು ಮಾನವ ಹಕ್ಕುಗಳ ವಕೀಲ ಅಸಿಮ್ ಸರೋದೆ ಅವರೊಂದಿಗೆ ತೆರಳುತ್ತಿದ್ದಾಗ ಜನರ ಗುಂಪು ಅವರನ್ನು ಬೆನ್ನಟ್ಟಿತ್ತು. ಪುಣೆಯ ಖಂಡೋಜಿ ಬಾಬಾ ಚೌಕ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ದ ಕಾರ್ಯಕರ್ತರು ಪತ್ರಕರ್ತರ ಕಾರಿಗೆ ಮಸಿ ಎರಚಿ, ಹಾನಿಗೊಳಿಸಿದ್ದರು.

ವಾಗ್ಲೆ ಮೇಲಿನ ದಾಳಿಯ ಒಂದು ದಿನದ ಮೊದಲು, ಉತ್ತರಾಖಂಡದ ಹಲ್ದ್ವಾನಿಯಲ್ಲಿ 10 ಪತ್ರಕರ್ತರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು ಎಂದು ವರದಿ ಹೇಳಿದೆ. ಅಲ್ಲಿ 2002 ರಲ್ಲಿ ನಿರ್ಮಿಸಲಾದ ಮರಿಯಂ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯ ಮದರಸವನ್ನು ಧ್ವಂಸಗೊಳಿಸಿದ ನಂತರ ಉದ್ವಿಗ್ನತೆ ಉಂಟಾಗಿತ್ತು.

ಅಮೃತ್ ವಿಚಾರ್ ಪತ್ರಿಕೆಯಲ್ಲಿ ಫೋಟೊ ಜರ್ನಲಿಸ್ಟ್ ಆಗಿರುವ 48 ವರ್ಷದ ಸಂಜಯ್ ಕನೇರಾ ಅವರು ಹಲ್ದ್ವಾನಿಯಲ್ಲಿ “ತಲೆಯ ಮೇಲೆ ಚೂಪಾದ ವಸ್ತುವಿನಿಂದ” ದಾಳಿಗೊಳಗಾದ ನಂತರ ತೀವ್ರವಾಗಿ ಗಾಯಗೊಂಡಿದ್ದರು.

ಫ್ರೀ ಸ್ಪೀಚ್ ಕಲೆಕ್ಟಿವ್‌ನ ವರದಿಯು, ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಸೌತ್ ಏಷ್ಯಾ ಬ್ಯೂರೋ ಮುಖ್ಯಸ್ಥೆ ಅವನಿ ಡಯಾಸ್ ಪ್ರಕರಣವನ್ನು ಒಳಗೊಂಡಂತೆ ಸುದ್ದಿ ಮಾಧ್ಯಮದ ಮೇಲಿನ ಸೆನ್ಸಾರ್‌ಶಿಪ್‌ನ 12 ಉದಾಹರಣೆಗಳನ್ನು ಪಟ್ಟಿ ಮಾಡಿದೆ.

ಎಪ್ರಿಲ್ 23 ರಂದು ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಡಯಾಸ್ ಅವರು, “ಎರಡು ವರ್ಷಗಳ ಕಾಲ ದೇಶದಲ್ಲಿ ನೆಲೆಸಿದ ಬಳಿಕ ಹಠಾತ್ತನೆ ಭಾರತವನ್ನು ತೊರೆಯಬೇಕಾಯಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನನ್ನ ವರದಿಯು ‘ಮಿತಿ ದಾಟಿದೆ’ ಎಂಬ ಕಾರಣ ನೀಡಿ ವೀಸಾ ವಿಸ್ತರಣೆಗೆ ನಿರಾಕರಿಸಿದೆ” ಎಂದು ಹೇಳಿದ್ದರು.

ಕೆನಡಾದ ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಸುದ್ದಿಯನ್ನು ಭಾರತದಲ್ಲಿ ಪ್ರಸಾರ ಮಾಡುವುದಕ್ಕೆ ಆಸ್ಟ್ರೇಲಿಯನ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್‌ನ ಯೂಟ್ಯೂಬ್‌ಗೆ ನಿರ್ಬಂಧ ವಿಧಿಸಿದ ವಾರಗಳ ನಂತರ ಅವನಿ ಡಯಾಸ್ ಅವರಿಗೆ ವೀಸಾ ನಿರಾಕರಿಸಲಾಗಿದೆ ಎಂದು ವರದಿ ತಿಳಿಸಿದೆ.

ಒಟ್ಟಾರೆಯಾಗಿ, ಜನವರಿಯಿಂದ ದೇಶದಲ್ಲಿ ಸಾಮಾಜಿಕ ಮಾಧ್ಯಮ, ಸುದ್ದಿ ಮಾಧ್ಯಮ, ಶೈಕ್ಷಣಿಕ ಮತ್ತು ಮನರಂಜನಾ ಕ್ಷೇತ್ರವನ್ನು ಒಳಗೊಂಡಿರುವ ಸೆನ್ಸಾರ್‌ಶಿಪ್‌ನ 46 ಪ್ರಕರಣಗಳು ವರದಿಯಾಗಿವೆ.

ಜನವರಿ 22 ರಂದು ರಾಮ ಮಂದಿರದ ಉದ್ಘಾಟನೆಗೆ ಮುಂಚಿತವಾಗಿ, ಸುಮಾರು 100 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ವರದಿ ಹೇಳಿದೆ.

1992ರ ಬಾಬ್ರಿ ಮಸೀದಿ ಧ್ವಂಸ ಕುರಿತ ಪೋಸ್ಟರ್ ಅನ್ನು ಕ್ಯಾಂಪಸ್‌ನಲ್ಲಿ ಪ್ರದರ್ಶಿಸಿದ್ದಕ್ಕಾಗಿ ಜನವರಿ 24 ರಂದು, ಪುಣೆಯ ಫಿಲ್ಮ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಏಳು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿತ್ತು. ಹಿಂದುತ್ವದ ಗುಂಪೊಂದು ಕ್ಯಾಂಪಸ್‌ಗೆ ನುಗ್ಗಿ, ಘೋಷಣೆಗಳನ್ನು ಕೂಗಿ, “ಸಂವಿಧಾನದ ಸಾವನ್ನು ನೆನಪಿಸಿಕೊಳ್ಳಿ” ಎಂಬ ಬ್ಯಾನರ್‌ಗೆ ಬೆಂಕಿ ಹಚ್ಚಿದ ಒಂದು ದಿನದ ನಂತರ ಇದು ಸಂಭವಿಸಿತ್ತು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಕಪ್ ನೊಕ್ವೊಹಮ್, ಪ್ರಧಾನ ಕಾರ್ಯದರ್ಶಿ ಸಯಂತನ್ ಚಕ್ರವರ್ತಿ ಮತ್ತು ಒಬ್ಬ ವಿದ್ಯಾರ್ಥಿನಿ ಸೇರಿದಂತೆ ಇತರ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ರಾಮ ಮಂದಿರ ಉದ್ಘಾಟನೆಯ ಬಳಿಕ ಹಲವು ರಾಜ್ಯಗಳಲ್ಲಿ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶಕ್ಕೆ ಅಡ್ಡಿಪಡಿಸಲಾಗಿದೆ ಎಂದು ವರದಿಯು ಗಮನಸೆಳೆದಿದೆ. ‘ರಾಮ್ ಕೆ ನಾಮ್’ ಅಯೋಧ್ಯೆಯಲ್ಲಿ ಹಿಂದಿನ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಹಿಂದುತ್ವ ಗುಂಪುಗಳ ಪ್ರಚಾರದ ಕುರಿತು ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ 1992ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...