Homeಅಂತರಾಷ್ಟ್ರೀಯಗಾಝಾದಲ್ಲಿ ಪತ್ರಕರ್ತರ ಹತ್ಯೆ 'ಆಘಾತಕಾರಿ' ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

ಗಾಝಾದಲ್ಲಿ ಪತ್ರಕರ್ತರ ಹತ್ಯೆ ‘ಆಘಾತಕಾರಿ’ ಎಂದ ಭಾರತ: ನಾಗರಿಕರ ನರಮೇಧಕ್ಕೆ ಖಂಡನೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲಿ ಪಡೆಗಳು ನಡೆಸಿದ ಎರಡು ದಾಳಿಗಳಲ್ಲಿ ಐವರು ಪತ್ರಕರ್ತರು ಹತ್ಯೆಯಾಗಿರುವುದನ್ನು ಭಾರತ ಬುಧವಾರ (ಆಗಸ್ಟ್ 27, 2025) ‘ಆಘಾತಕಾರಿ’ ಮತ್ತು ‘ತೀವ್ರ ವಿಷಾದಕರ’ ಎಂದು ಬಣ್ಣಿಸಿದೆ.

ಸೋಮವಾರ (ಆ.25) ಗಾಝಾದ ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ ಕನಿಷ್ಠ 20 ಜನರಲ್ಲಿ ಐವರು ಪತ್ರಕರ್ತರೂ ಸೇರಿದ್ದಾರೆ.

‘ಪತ್ರಕರ್ತರ ಹತ್ಯೆ ಆಘಾತಕಾರಿ ಮತ್ತು ತೀವ್ರ ವಿಷಾದಕರ’ ಎಂದು ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

“ಭಾರತವು ಯಾವಾಗಲೂ ಸಂಘರ್ಷದಲ್ಲಿ ನಾಗರಿಕರ ಜೀವಹಾನಿಯನ್ನು ಖಂಡಿಸಿದೆ. ಇಸ್ರೇಲಿ ಅಧಿಕಾರಿಗಳು ಈಗಾಗಲೇ ತನಿಖೆಯನ್ನು ಆರಂಭಿಸಿದ್ದಾರೆ ಎಂದು ನಮಗೆ ಗೊತ್ತಾಗಿದೆ” ಎಂದಿದ್ದಾರೆ.

ಖಾನ್ ಯೂನಿಸ್‌ನಲ್ಲಿರುವ ನಾಸರ್ ಆಸ್ಪತ್ರೆಗೆ ಇಸ್ರೇಲ್‌ನ ಎರಡು ಕ್ಷಿಪಣಿಗಳು ಅಪ್ಪಳಿಸಿವೆ ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ. ಹುಸಾಮ್ ಅಲ್-ಮಸ್ರಿ, ಮರಿಯಂ ಅಬೂ ದಗ್ಗಾ, ಮೋಝ್ ಅಬೂ ತಾಹಾ, ಮೊಹಮ್ಮದ್ ಸಲಾಮಾ ಮತ್ತು ಅಹ್ಮದ್ ಅಬೂ ಅಝೀಝ್ ಕೊಲ್ಲಲ್ಪಟ್ಟ ಪತ್ರಕರ್ತರು. ಇವರು ರಾಯಿಟರ್ಸ್ ಮತ್ತು ಅಸೋಸಿಯೇಟೆಡ್ ಪ್ರೆಸ್ ಸೇರಿದಂತೆ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಇಸ್ರೇಲ್-ಹಮಾಸ್ ಯುದ್ಧವು ಮಾಧ್ಯಮ ಕಾರ್ಯಕರ್ತರಿಗೆ ಅತ್ಯಂತ ರಕ್ತಸಿಕ್ತ ಸಂಘರ್ಷಗಳಲ್ಲಿ ಒಂದಾಗಿದೆ. 22 ತಿಂಗಳ ಸಂಘರ್ಷದಲ್ಲಿ ಗಾಝಾದಲ್ಲಿ ಕನಿಷ್ಠ 192 ಪತ್ರಕರ್ತರು ಸಾವನ್ನಪ್ಪಿದ್ದಾರೆ ಎಂದು ‘ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್'(ಸಿಪಿಜೆ) ತಿಳಿಸಿದೆ. ಅದೇ ರೀತಿ, ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಇದುವರೆಗೆ 18 ಪತ್ರಕರ್ತರು ಸಾವನ್ನಪ್ಪಿದ್ದಾರೆ ಎಂದು ಸಿಪಿಜೆ ಹೇಳಿದೆ.

ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...