Homeಮುಖಪುಟಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

ಪ್ಯಾಲೆಸ್ತೀನ್‌ಗೆ ಭಾರತದಿಂದ 2ನೇ ಹಂತದ ಪರಿಹಾರ ಸಾಮಾಗ್ರಿ ರವಾನೆ

- Advertisement -
- Advertisement -

ಯುದ್ದ ಪೀಡಿತ ಪ್ಯಾಲೆಸ್ತೀನ್‌ಗೆ ಭಾರತ ಭಾನುವಾರ 2ನೇ ಹಂತದ ಪರಿಹಾರ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದೆ.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್, ನಾವು ಪ್ಯಾಲೆಸ್ತೀನ್‌ ಜನರಿಗೆ ಮಾನವೀಯ ನೆರವು ನೀಡುವುದನ್ನು ಮುಂದುವರಿಸುತ್ತೇವೆ. 32 ಟನ್‌ಗಳ ಪರಿಹಾರ ಸಾಮಾಗ್ರಿಗನ್ನು ಹೊತ್ತ 2ನೇ ಭಾರತೀಯ ವಾಯುಪಡೆಯ C17 ವಿಮಾನವು ಈಜಿಪ್ಟ್‌ನ ಎಲ್-ಅರಿಶ್ ವಿಮಾನ ನಿಲ್ದಾಣಕ್ಕೆ ಹೊರಡಲಿದೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ.

ಅ.22ರಂದು ಭಾರತವು ಪ್ಯಾಲೆಸ್ತೀನ್‌ಗೆ ವೈದ್ಯಕೀಯ ಮತ್ತು ವಿಪತ್ತು ಪರಿಹಾರ ಸೇರಿದಂತೆ ಮೊದಲ ನೆರವನ್ನು ಕಳುಹಿಸಿಕೊಟ್ಟಿತ್ತು.

ಗಾಝಾ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದ ಬಳಿಕ ಈವೆರೆಗೆ ಪ್ಯಾಲೆಸ್ತೀನ್‌ನಲ್ಲಿ  ಆಕ್ರಮಣದಿಂದ 12,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಮೃತರಲ್ಲಿ  5,000 ಕ್ಕೂ ಹೆಚ್ಚು ಮಕ್ಕಳು ಮತ್ತು 3,300 ಮಹಿಳೆಯರು ಸೇರಿದ್ದಾರೆ, 30,000 ಮಂದಿ ಗಾಯಗೊಂಡಿದ್ದಾರೆ ಎಂದು ಪ್ಯಾಲೆಸ್ತೀನ್ ಸರಕಾರಿ ಮಾದ್ಯಮ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ವರದಿಯ ಪ್ರಕಾರ 1,800 ಮಕ್ಕಳು ಸೇರಿದಂತೆ ಸುಮಾರು 3,750 ಜನರು ಇನ್ನೂ ಪತ್ತೆಯಾಗಿಲ್ಲ. ಮೃತರಲ್ಲಿ ಒಟ್ಟು 200 ವೈದ್ಯರು, 22 ಸಿವಿಲ್ ಡಿಫೆನ್ಸ್ ಸಿಬ್ಬಂದಿ ಮತ್ತು 51 ಪತ್ರಕರ್ತರು ಕೂಡ ಸೇರಿದ್ದಾರೆ.

ಇಸ್ರೇಲ್‌ ಆಕ್ರಮಣದಿಂದ 25 ಆಸ್ಪತ್ರೆಗಳು ಮತ್ತು 52 ಆರೋಗ್ಯ ಕೇಂದ್ರಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದೆ. ಇದಲ್ಲದೆ 55 ಆಂಬ್ಯುಲೆನ್ಸ್‌ಗಳನ್ನು ಇಸ್ರೇಲ್‌ ಪಡೆಗಳು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇಸ್ರೇಲ್‌ ದಾಳಿಯಲ್ಲಿ ಆಸ್ಪತ್ರೆಗಳು, ಮಸೀದಿಗಳು ಮತ್ತು ಚರ್ಚ್‌ಗಳು ಸೇರಿದಂತೆ ಸಾವಿರಾರು ಕಟ್ಟಡಗಳು ಧ್ವಂಸಗೊಂಡಿದೆ.

ಇಸ್ರೇಲ್‌ ಗಾಝಾದ ಅತಿದೊಡ್ಡ ಆಸ್ಪತ್ರೆ ಅಲ್-ಶಿಫಾ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಆಸ್ಪತ್ರೆಯಿಂದ ಜನರನ್ನು ತೆರವುಗೊಳಿಸುವಂತೆ ಇಸ್ರೇಲ್ ಸೇನೆ ಶನಿವಾರ ಆದೇಶಿಸಿದ ಬಳಿಕ ಆಸ್ಪತ್ರೆಯಲ್ಲಿದ್ದ ರೋಗಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಆಸ್ಪತ್ರೆಯಲ್ಲಿ ಆಶ್ರಯ ಪಡೆದಿದ್ದವರು ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ಮಧ್ಯೆ ತೀವ್ರ ಅನಾರೋಗ್ಯಗೊಂಡಿರುವ ಸುಮಾರು 450 ರೋಗಿಗಳು ಆಸ್ಪತ್ರೆಯಲ್ಲೇ ಉಳಿದಿದ್ದಾರೆ ಎಂದು ವರದಿಯಾಗಿದೆ.

ಅಲ್-ಶಿಫಾ ಆಸ್ಪತ್ರೆಯಡಿಯಲ್ಲಿ ಹಮಾಸ್‍ನ ಕಾರ್ಯಾಚರಣಾ ನೆಲೆಯಿದೆ ಎಂದು ಇಸ್ರೇಲ್ ಹೇಳಿದ್ದು, ಇದನ್ನು ಹಮಾಸ್ ತಳ್ಳಿಹಾಕಿದೆ. ನಿನ್ನೆ ಗಾಝಾ ನಗರದಲ್ಲಿ ಲೌಡ್ ಸ್ಪೀಕರ್ಗಳ ಮೂಲಕ ಘೋಷಣೆ ಮಾಡಿದ ಇಸ್ರೇಲ್ ಸೇನೆ ಒಂದು ಗಂಟೆಯೊಳಗೆ ಆಸ್ಪತ್ರೆಯನ್ನು ತೆರವುಗೊಳಿಸುವಂತೆ ಆದೇಶಿಸಿತ್ತು.

ಇದಲ್ಲದೆ ಬಾಂಗ್ಲಾದೇಶ ಸಹಿತ 5 ದೇಶಗಳು ಇಸ್ರೇಲ್-ಹಮಾಸ್ ಯುದ್ಧದ ಬಗ್ಗೆ ಅಂತರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ಗೆ ತನಿಖೆಗೆ ಆಗ್ರಹಿಸಿವೆ. ಐಸಿಸಿ ಸದಸ್ಯರಾದ ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಬೊಲಿವಿಯಾ, ಕೊಮೊರೊಸ್ ಮತ್ತು ಜಿಬೌಟಿ ದೇಶಗಳು ಫೆಲೆಸ್ತೀನ್ ದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ತನಿಖೆಗೆ ಆಗ್ರಹಿಸಿವೆ ಎಂದು ಐಸಿಸಿ ಮುಖ್ಯ ಪ್ರಾಸಿಕ್ಯೂಟರ್ ಕರೀಮ್ ಖಾನ್ ಹೇಳಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...