Homeಮುಖಪುಟ25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪು ಕೋಟೆಯ ಆವರಣದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದರು.

ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವಿ.ಡಿ.ಸಾವರ್ಕರ್, ಭಗತ್ ಸಿಂಗ್, ಜವಾಹರಲಾಲ್ ನೆಹರೂ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಗ್ಯಾಲಕ್ಸಿಗೆ ಮೋದಿ ನಮನ ಸಲ್ಲಿಸಿದರು.

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ಅಂಶಗಳು

  • ನಮ್ಮ ತ್ರಿವರ್ಣ ಧ್ವಜವು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದ ಮೂಲೆ ಮೂಲೆಗಳಲ್ಲಿ ವೈಭವಯುತವಾಗಿ ಹಾರಾಡುತ್ತಿದೆ.
  • ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿದ್ದು, ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ಸಮಯ ಇದಾಗಿದೆ.
  • ನಮ್ಮ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಕ್ರೌರ್ಯವನ್ನು ಎದುರಿಸದ ಒಂದು ವರ್ಷವೂ ಇರಲಿಲ್ಲ. ಇಂದು ನಾವು ಅವರಿಗೆ ಗೌರವ ಸಲ್ಲಿಸುವಾಗ, ನಾವು ಅವರ ದೂರದೃಷ್ಟಿ ಮತ್ತು ಭಾರತಕ್ಕಾಗಿ ಅವರು ಕಂಡ ಕನಸನ್ನು ನೆನಪಿಸಿಕೊಳ್ಳಬೇಕಾಗಿದೆ.
  • ಮಹಿಳೆಯರಿಗೆ ನೀಡುವ ಗೌರವ ಭಾರತದ ಬೆಳವಣಿಗೆಗೆ ಪ್ರಮುಖ ಆಧಾರಸ್ತಂಭವಾಗಿರುತ್ತದೆ. ನಮ್ಮ “ನಾರಿ ಶಕ್ತಿ”ಗೆ ನಾವು ಬೆಂಬಲ ನೀಡಬೇಕು.
  • 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಮುಂದಿನ 25 ವರ್ಷಗಳನ್ನು ದೇಶದ ಅಭಿವೃದ್ಧಿಗಾಗಿ ಮುಡಿಪಾಗಿಡಬೇಕೆಂದು ದೇಶದ ಯುವಕರನ್ನು ನಾನು ಒತ್ತಾಯಿಸುತ್ತೇನೆ. ನಾವು ಸಂಪೂರ್ಣ ಮಾನವೀಯತೆಯ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ.
  • ನಾವು ಇತರರಂತೆ ಆಗಲು ಪ್ರಯತ್ನಿಸಬಾರದು, ನಮ್ಮ ಮನಸ್ಥಿತಿಯಲ್ಲಿ ಗುಲಾಮಗಿರಿಯ ಕುರುಹು ಇರಬಾರದು. ಕೆಲವೊಮ್ಮೆ ಭಾಷೆಯ ಅಡೆತಡೆಗಳಿಂದ ನಮ್ಮ ಪ್ರತಿಭೆಯನ್ನು ನಿರ್ಬಂಧಿಸಲಾಗುತ್ತದೆ. ನಮ್ಮ ದೇಶದ ಪ್ರತಿಯೊಂದು ಭಾಷೆಯ ಬಗ್ಗೆ ನಾವು ಹೆಮ್ಮೆಪಡಬೇಕು. ನಾವು ಹೆಮ್ಮೆಯ ರಾಷ್ಟ್ರವಾಗಿ ನಮ್ಮ ಗುರುತನ್ನು ಉಳಿಸಿಕೊಳ್ಳಬೇಕು.
  • ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ನಾವು ನಮ್ಮ ಬೇರುಗಳೊಂದಿಗೆ ಸಂಪರ್ಕದ್ದಲ್ಲಿದ್ದರೆ ಮಾತ್ರ ಎತ್ತರಕ್ಕೆ ಹಾರಬಹುದು. ನಾವು ಎತ್ತರಕ್ಕೆ ಹಾರಿದಾಗ, ನಾವು ಇಡೀ ಜಗತ್ತಿಗೆ ಪರಿಹಾರಗಳನ್ನು ಒದಗಿಸಬಲ್ಲೆವು.

ಇದನ್ನೂ ಓದಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಭಗ್ನ ಭರವಸೆಗಳು ಮತ್ತು ಛಲದ ಹೋರಾಟಗಳು

  • ರಾಷ್ಟ್ರದ ಉನ್ನತಿಗೆ ಶ್ರಮಿಸಲು ನಾವೆಲ್ಲ ಒಂದಾಗಿರಬೇಕು. ಭಾರತದ ಪ್ರಗತಿಗೆ ಸಮಾನತೆ ಮೂಲಾಧಾರ. “ಭಾರತ ಮೊದಲು” ಎಂಬ ಮಂತ್ರದ ಮೂಲಕ ನಾವು ಒಂದಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು.
  • ವಿದ್ಯುತ್, ನೀರು ಉಳಿಸುವುದು ಜನರ ಕರ್ತವ್ಯ. ನಾವು ಇದನ್ನು ಅನುಸರಿಸಿದರೆ, ನಾವು ಬಯಸಿದ ಫಲಿತಾಂಶಗಳನ್ನು ಸಮಯಕ್ಕೆ ಮುಂಚಿತವಾಗಿ ತಲುಪಬಹುದು. ಈ ಕರ್ತವ್ಯಗಳುಪ್ರ ಧಾನಿ ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾರತದ ಎಲ್ಲಾ ನಾಗರಿಕರಿಗೆ ಅನ್ವಯಿಸುತ್ತವೆ.

ವರ್ಣರಂಜಿತ ಪೇಟ

ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ವರ್ಣರಂಜಿತ ಪೇಟಗಳನ್ನು ಧರಿಸುವ ಸಂಪ್ರದಾಯಕ್ಕೆ ಪ್ರಧಾನಿ ಮೋದಿ ಹೆಸರುವಾಸಿಯಾಗಿದ್ದಾರೆ. 2014ರಿಂದಲೂ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈ ವರ್ಷ ಕೇಸರಿ, ಬಿಳಿ, ಹಸಿರು ಬಣ್ಣದ ಪಟ್ಟಿಗಳನ್ನು ಹೊಂದಿರುವ ಬಿಳಿ ಪೇಟವನ್ನು ಮೋದಿ ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಮೂವರು ಅಧಿಕಾರಕ್ಕೆ ಬಂದ ದಿನದಿಂದಲೂಇದೀ ಭಾಷಣ ಮಾಡುತ್ತಿದ್ದಾರೆ ,ಯಾವ ಅಭಿವೃದ್ಧಿ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....