Homeಕರೋನಾ ತಲ್ಲಣ2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

ಕೊರೊನಾ ಕಾರಣಕ್ಕೆ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ

- Advertisement -
- Advertisement -

ವಿಶ್ವದಲ್ಲಿ ಈಗಾಗಲೇ ಎರಡನೇ ಅಲೆಗೆ ತುತ್ತಾದ ದೇಶಗಳಿಂದ ಪಾಠ ಕಲಿಯುವ ಮೂಲಕ ಭಾರತವು ಕೊರೊನಾ ವೈರಸ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.

“ಕೊರೊನಾ ಎರಡನೆಯ ಅಲೆ ಹೆಚ್ಚು ಭೀಕರವಾಗಿದೆ. ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ವೃದ್ಧರಲ್ಲದೆ, ವೈರಸ್ ಸೋಂಕಿತ ಯುವಕರು ಸಹ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ಅಪ್ಪಳಿಸಿದ್ದ ಇತರ ದೇಶಗಳಿಂದ ನಾವು ಪಾಠ ಕಲಿಯಬೇಕಾಗಿತ್ತು. ದೆಹಲಿಯಲ್ಲಿ ಕುಳಿತುಕೊಳ್ಳುವ ಜನರು ಇದನ್ನು ನೋಡಿ ಜನರಿಗೆ ನಿರ್ದೇಶನ ನೀಡಬೇಕು” ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದೇ ಸಂದರ್ಭಗಳಲ್ಲಿ ವಿದೇಶದಲ್ಲಿ ತಯಾರಾದ ಲಸಿಕೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವ ಅಗತ್ಯತೆ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,501 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಪ್ರಧಾನಿ ನರೇಂದ್ರ ಮೋದಿಯವರು ಲಕ್ಷಾಂತರ ಪ್ರಮಾಣದಲ್ಲಿ ಕೊರೊನಾ ವಿರೋಧಿ ಲಸಿಕೆಗಳನ್ನು ಇತರ ದೇಶಗಳಿಗೆ ಉಡುಗೊರೆಯಾಗಿ ನೀಡಿರುವುದನ್ನು ಟೀಕಿಸಿರುವ ಸಿಎಂ, “ನೀವು ರೆಮ್‌ಡೆಸಿವಿರ್ ಲಸಿಕೆಯನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದ್ದೀರಿ. ಆದರೆ, ಭಾರತದಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಲಸಿಕೆ ಹಾಕುವ ಅಗತ್ಯವಿದೆ” ಎಂದು ಹೇಳಿದ್ದಾರೆ.

’ಭಾರತದ ಲಸಿಕೆ ಆರಂಭವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ಆದರೂ ದೇಶದಲ್ಲಿ ಕೊರೊನಾ ಇಷ್ಟೊಂದು ಹರಡಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ  ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ವ್ಯಾಕ್ಸಿನೇಷನ್ ಕೊರತೆ ಎದುರಿಸುತ್ತಿವೆ. ಲಸಿಕೆ ಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತಿವೆ’ ಎಂದಿದ್ದಾರೆ.

ಸಾಂಕ್ರಾಮಿಕ ರೋಗ ಇಷ್ಟು ಹಬ್ಬಿರುವ ಮಧ್ಯೆಯು ಚುನಾವಣಾ ರ್‍ಯಾಲಿಗಳು ಮತ್ತು ಹರಿದ್ವಾರದಲ್ಲಿ ಕುಂಭಮೇಳದಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯನ್ನೂ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಟೀಕಿಸಿದ್ದಾರೆ.

ಇನ್ನು ಕೊರೊನಾ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ. “ರಾಜಕಾರಣಿಗಳು ನಮಗೆ ಆದರ್ಶಪ್ರಾಯರಾಗಿರಬೇಕು. ಕೊರೊನಾ ಕಾರಣಕ್ಕೆ ರ್‍ಯಾಲಿಗಳನ್ನು ಮಾಡುವುದಿಲ್ಲ ಎಂದು ಯಾವ ನಾಯಕರು ಹೇಳಿಲ್ಲ. ಪ್ರಧಾನಿ ಮೋದಿ ಅವರೇ ಅನೇಕ ರ್‍ಯಾಲಿಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದ್ದು, ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಭಾರತದಲ್ಲಿ ಹದಗೆಡುತ್ತಿರುವ ಮಾನವ ಹಕ್ಕುಗಳ ಪರಿಸ್ಥಿತಿ: ಕಳವಳ ವ್ಯಕ್ತಪಡಿಸಿದ ಯುರೋಪ್ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...