Homeಕರೋನಾ ತಲ್ಲಣ2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

ಕೊರೊನಾ ಕಾರಣಕ್ಕೆ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ

- Advertisement -
- Advertisement -

ವಿಶ್ವದಲ್ಲಿ ಈಗಾಗಲೇ ಎರಡನೇ ಅಲೆಗೆ ತುತ್ತಾದ ದೇಶಗಳಿಂದ ಪಾಠ ಕಲಿಯುವ ಮೂಲಕ ಭಾರತವು ಕೊರೊನಾ ವೈರಸ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.

“ಕೊರೊನಾ ಎರಡನೆಯ ಅಲೆ ಹೆಚ್ಚು ಭೀಕರವಾಗಿದೆ. ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ವೃದ್ಧರಲ್ಲದೆ, ವೈರಸ್ ಸೋಂಕಿತ ಯುವಕರು ಸಹ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ಅಪ್ಪಳಿಸಿದ್ದ ಇತರ ದೇಶಗಳಿಂದ ನಾವು ಪಾಠ ಕಲಿಯಬೇಕಾಗಿತ್ತು. ದೆಹಲಿಯಲ್ಲಿ ಕುಳಿತುಕೊಳ್ಳುವ ಜನರು ಇದನ್ನು ನೋಡಿ ಜನರಿಗೆ ನಿರ್ದೇಶನ ನೀಡಬೇಕು” ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದೇ ಸಂದರ್ಭಗಳಲ್ಲಿ ವಿದೇಶದಲ್ಲಿ ತಯಾರಾದ ಲಸಿಕೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವ ಅಗತ್ಯತೆ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,501 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಪ್ರಧಾನಿ ನರೇಂದ್ರ ಮೋದಿಯವರು ಲಕ್ಷಾಂತರ ಪ್ರಮಾಣದಲ್ಲಿ ಕೊರೊನಾ ವಿರೋಧಿ ಲಸಿಕೆಗಳನ್ನು ಇತರ ದೇಶಗಳಿಗೆ ಉಡುಗೊರೆಯಾಗಿ ನೀಡಿರುವುದನ್ನು ಟೀಕಿಸಿರುವ ಸಿಎಂ, “ನೀವು ರೆಮ್‌ಡೆಸಿವಿರ್ ಲಸಿಕೆಯನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದ್ದೀರಿ. ಆದರೆ, ಭಾರತದಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಲಸಿಕೆ ಹಾಕುವ ಅಗತ್ಯವಿದೆ” ಎಂದು ಹೇಳಿದ್ದಾರೆ.

’ಭಾರತದ ಲಸಿಕೆ ಆರಂಭವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ಆದರೂ ದೇಶದಲ್ಲಿ ಕೊರೊನಾ ಇಷ್ಟೊಂದು ಹರಡಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ  ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ವ್ಯಾಕ್ಸಿನೇಷನ್ ಕೊರತೆ ಎದುರಿಸುತ್ತಿವೆ. ಲಸಿಕೆ ಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತಿವೆ’ ಎಂದಿದ್ದಾರೆ.

ಸಾಂಕ್ರಾಮಿಕ ರೋಗ ಇಷ್ಟು ಹಬ್ಬಿರುವ ಮಧ್ಯೆಯು ಚುನಾವಣಾ ರ್‍ಯಾಲಿಗಳು ಮತ್ತು ಹರಿದ್ವಾರದಲ್ಲಿ ಕುಂಭಮೇಳದಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯನ್ನೂ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಟೀಕಿಸಿದ್ದಾರೆ.

ಇನ್ನು ಕೊರೊನಾ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ. “ರಾಜಕಾರಣಿಗಳು ನಮಗೆ ಆದರ್ಶಪ್ರಾಯರಾಗಿರಬೇಕು. ಕೊರೊನಾ ಕಾರಣಕ್ಕೆ ರ್‍ಯಾಲಿಗಳನ್ನು ಮಾಡುವುದಿಲ್ಲ ಎಂದು ಯಾವ ನಾಯಕರು ಹೇಳಿಲ್ಲ. ಪ್ರಧಾನಿ ಮೋದಿ ಅವರೇ ಅನೇಕ ರ್‍ಯಾಲಿಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದ್ದು, ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಭಾರತದಲ್ಲಿ ಹದಗೆಡುತ್ತಿರುವ ಮಾನವ ಹಕ್ಕುಗಳ ಪರಿಸ್ಥಿತಿ: ಕಳವಳ ವ್ಯಕ್ತಪಡಿಸಿದ ಯುರೋಪ್ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...