Homeಕರೋನಾ ತಲ್ಲಣ2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

ಕೊರೊನಾ ಕಾರಣಕ್ಕೆ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ

- Advertisement -
- Advertisement -

ವಿಶ್ವದಲ್ಲಿ ಈಗಾಗಲೇ ಎರಡನೇ ಅಲೆಗೆ ತುತ್ತಾದ ದೇಶಗಳಿಂದ ಪಾಠ ಕಲಿಯುವ ಮೂಲಕ ಭಾರತವು ಕೊರೊನಾ ವೈರಸ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.

“ಕೊರೊನಾ ಎರಡನೆಯ ಅಲೆ ಹೆಚ್ಚು ಭೀಕರವಾಗಿದೆ. ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ವೃದ್ಧರಲ್ಲದೆ, ವೈರಸ್ ಸೋಂಕಿತ ಯುವಕರು ಸಹ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ಅಪ್ಪಳಿಸಿದ್ದ ಇತರ ದೇಶಗಳಿಂದ ನಾವು ಪಾಠ ಕಲಿಯಬೇಕಾಗಿತ್ತು. ದೆಹಲಿಯಲ್ಲಿ ಕುಳಿತುಕೊಳ್ಳುವ ಜನರು ಇದನ್ನು ನೋಡಿ ಜನರಿಗೆ ನಿರ್ದೇಶನ ನೀಡಬೇಕು” ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದೇ ಸಂದರ್ಭಗಳಲ್ಲಿ ವಿದೇಶದಲ್ಲಿ ತಯಾರಾದ ಲಸಿಕೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವ ಅಗತ್ಯತೆ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,501 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಪ್ರಧಾನಿ ನರೇಂದ್ರ ಮೋದಿಯವರು ಲಕ್ಷಾಂತರ ಪ್ರಮಾಣದಲ್ಲಿ ಕೊರೊನಾ ವಿರೋಧಿ ಲಸಿಕೆಗಳನ್ನು ಇತರ ದೇಶಗಳಿಗೆ ಉಡುಗೊರೆಯಾಗಿ ನೀಡಿರುವುದನ್ನು ಟೀಕಿಸಿರುವ ಸಿಎಂ, “ನೀವು ರೆಮ್‌ಡೆಸಿವಿರ್ ಲಸಿಕೆಯನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದ್ದೀರಿ. ಆದರೆ, ಭಾರತದಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಲಸಿಕೆ ಹಾಕುವ ಅಗತ್ಯವಿದೆ” ಎಂದು ಹೇಳಿದ್ದಾರೆ.

’ಭಾರತದ ಲಸಿಕೆ ಆರಂಭವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ಆದರೂ ದೇಶದಲ್ಲಿ ಕೊರೊನಾ ಇಷ್ಟೊಂದು ಹರಡಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ  ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ವ್ಯಾಕ್ಸಿನೇಷನ್ ಕೊರತೆ ಎದುರಿಸುತ್ತಿವೆ. ಲಸಿಕೆ ಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತಿವೆ’ ಎಂದಿದ್ದಾರೆ.

ಸಾಂಕ್ರಾಮಿಕ ರೋಗ ಇಷ್ಟು ಹಬ್ಬಿರುವ ಮಧ್ಯೆಯು ಚುನಾವಣಾ ರ್‍ಯಾಲಿಗಳು ಮತ್ತು ಹರಿದ್ವಾರದಲ್ಲಿ ಕುಂಭಮೇಳದಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯನ್ನೂ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಟೀಕಿಸಿದ್ದಾರೆ.

ಇನ್ನು ಕೊರೊನಾ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ. “ರಾಜಕಾರಣಿಗಳು ನಮಗೆ ಆದರ್ಶಪ್ರಾಯರಾಗಿರಬೇಕು. ಕೊರೊನಾ ಕಾರಣಕ್ಕೆ ರ್‍ಯಾಲಿಗಳನ್ನು ಮಾಡುವುದಿಲ್ಲ ಎಂದು ಯಾವ ನಾಯಕರು ಹೇಳಿಲ್ಲ. ಪ್ರಧಾನಿ ಮೋದಿ ಅವರೇ ಅನೇಕ ರ್‍ಯಾಲಿಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದ್ದು, ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಭಾರತದಲ್ಲಿ ಹದಗೆಡುತ್ತಿರುವ ಮಾನವ ಹಕ್ಕುಗಳ ಪರಿಸ್ಥಿತಿ: ಕಳವಳ ವ್ಯಕ್ತಪಡಿಸಿದ ಯುರೋಪ್ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...