Homeಕರೋನಾ ತಲ್ಲಣ2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

2ನೇ ಅಲೆಗೆ ತುತ್ತಾಗಿದ್ದ ದೇಶಗಳಿಂದ ಭಾರತ ಪಾಠ ಕಲಿಯಲಿಲ್ಲ- ಛತ್ತೀಸ್‌ಗಢ ಸಿಎಂ

ಕೊರೊನಾ ಕಾರಣಕ್ಕೆ ಬಂಗಾಳದಲ್ಲಿ ನಡೆಯಲಿದ್ದ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ

- Advertisement -
- Advertisement -

ವಿಶ್ವದಲ್ಲಿ ಈಗಾಗಲೇ ಎರಡನೇ ಅಲೆಗೆ ತುತ್ತಾದ ದೇಶಗಳಿಂದ ಪಾಠ ಕಲಿಯುವ ಮೂಲಕ ಭಾರತವು ಕೊರೊನಾ ವೈರಸ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸಬಹುದಿತ್ತು ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಹೇಳಿದ್ದಾರೆ.

“ಕೊರೊನಾ ಎರಡನೆಯ ಅಲೆ ಹೆಚ್ಚು ಭೀಕರವಾಗಿದೆ. ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ವೃದ್ಧರಲ್ಲದೆ, ವೈರಸ್ ಸೋಂಕಿತ ಯುವಕರು ಸಹ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಎರಡನೇ ಅಲೆ ಅಪ್ಪಳಿಸಿದ್ದ ಇತರ ದೇಶಗಳಿಂದ ನಾವು ಪಾಠ ಕಲಿಯಬೇಕಾಗಿತ್ತು. ದೆಹಲಿಯಲ್ಲಿ ಕುಳಿತುಕೊಳ್ಳುವ ಜನರು ಇದನ್ನು ನೋಡಿ ಜನರಿಗೆ ನಿರ್ದೇಶನ ನೀಡಬೇಕು” ಎಂದು ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಎನ್‌ಡಿಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದೇ ಸಂದರ್ಭಗಳಲ್ಲಿ ವಿದೇಶದಲ್ಲಿ ತಯಾರಾದ ಲಸಿಕೆಗಳಿಗೆ ಶೀಘ್ರವಾಗಿ ಅನುಮೋದನೆ ನೀಡುವ ಅಗತ್ಯತೆ ಇದೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,501 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ಎರಡನೆ ಅಲೆಗೆ ವೇದಿಕೆ ಒದಗಿಸಿದ್ದು ಮೋದಿ ಸರ್ಕಾರದ ಅಪಕ್ವ ನಿರ್ಧಾರಗಳು, ಕಣ್ಕಟ್ಟು ಅಂಕಿಅಂಶಗಳು

ಪ್ರಧಾನಿ ನರೇಂದ್ರ ಮೋದಿಯವರು ಲಕ್ಷಾಂತರ ಪ್ರಮಾಣದಲ್ಲಿ ಕೊರೊನಾ ವಿರೋಧಿ ಲಸಿಕೆಗಳನ್ನು ಇತರ ದೇಶಗಳಿಗೆ ಉಡುಗೊರೆಯಾಗಿ ನೀಡಿರುವುದನ್ನು ಟೀಕಿಸಿರುವ ಸಿಎಂ, “ನೀವು ರೆಮ್‌ಡೆಸಿವಿರ್ ಲಸಿಕೆಯನ್ನು ವಿವಿಧ ದೇಶಗಳಿಗೆ ಕಳುಹಿಸುತ್ತಿದ್ದೀರಿ. ಆದರೆ, ಭಾರತದಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೂ ಲಸಿಕೆ ಹಾಕುವ ಅಗತ್ಯವಿದೆ” ಎಂದು ಹೇಳಿದ್ದಾರೆ.

’ಭಾರತದ ಲಸಿಕೆ ಆರಂಭವು ವಿಶ್ವ ಆರೋಗ್ಯ ಸಂಸ್ಥೆ ಸೇರಿದಂತೆ ಜಾಗತಿಕ ಸಮುದಾಯದ ಪ್ರಶಂಸೆಯನ್ನು ಪಡೆಯಿತು. ಆದರೂ ದೇಶದಲ್ಲಿ ಕೊರೊನಾ ಇಷ್ಟೊಂದು ಹರಡಿದೆ. ಅತಿ ಹೆಚ್ಚು ಹಾನಿಗೊಳಗಾಗಿರುವ  ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ವ್ಯಾಕ್ಸಿನೇಷನ್ ಕೊರತೆ ಎದುರಿಸುತ್ತಿವೆ. ಲಸಿಕೆ ಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತಿವೆ’ ಎಂದಿದ್ದಾರೆ.

ಸಾಂಕ್ರಾಮಿಕ ರೋಗ ಇಷ್ಟು ಹಬ್ಬಿರುವ ಮಧ್ಯೆಯು ಚುನಾವಣಾ ರ್‍ಯಾಲಿಗಳು ಮತ್ತು ಹರಿದ್ವಾರದಲ್ಲಿ ಕುಂಭಮೇಳದಲ್ಲಿ ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆಯನ್ನೂ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಟೀಕಿಸಿದ್ದಾರೆ.

ಇನ್ನು ಕೊರೊನಾ ಕಾರಣಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಎಲ್ಲಾ ಸಾರ್ವಜನಿಕ ರ್‍ಯಾಲಿಗಳನ್ನು ಸ್ಥಗಿತಗೊಳಿಸಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಛತ್ತೀಸ್‌ಗಢ ಸಿಎಂ ಶ್ಲಾಘಿಸಿದ್ದಾರೆ. “ರಾಜಕಾರಣಿಗಳು ನಮಗೆ ಆದರ್ಶಪ್ರಾಯರಾಗಿರಬೇಕು. ಕೊರೊನಾ ಕಾರಣಕ್ಕೆ ರ್‍ಯಾಲಿಗಳನ್ನು ಮಾಡುವುದಿಲ್ಲ ಎಂದು ಯಾವ ನಾಯಕರು ಹೇಳಿಲ್ಲ. ಪ್ರಧಾನಿ ಮೋದಿ ಅವರೇ ಅನೇಕ ರ್‍ಯಾಲಿಗಳನ್ನು ಮಾಡುತ್ತಿದ್ದಾರೆ” ಎಂದಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,61,500 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಪ್ರತಿ ದಿನ 2 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ನಾಲ್ಕನೆ ದಿನ ಇದಾಗಿದ್ದು, ಕಳೆದ ಒಂದು ವಾರದಲ್ಲಿ 12 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ಭಾರತದಲ್ಲಿ ಹದಗೆಡುತ್ತಿರುವ ಮಾನವ ಹಕ್ಕುಗಳ ಪರಿಸ್ಥಿತಿ: ಕಳವಳ ವ್ಯಕ್ತಪಡಿಸಿದ ಯುರೋಪ್ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...