Homeಮುಖಪುಟಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

- Advertisement -
- Advertisement -

ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ.

ಭಾರತದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್(RAW)ನ ಮಾಜಿ ಅಧಿಕಾರಿ ವಿಕ್ರಮ್ ಯಾದವ್, ಅಮೆರಿಕದಲ್ಲಿ ನೆಲೆಸಿದ್ದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ವರದಿಯನ್ನು  ‘ಆಧಾರರಹಿತ’ ಎಂದು ಕರೆದಿದ್ದಾರೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದಾರೆ.

2022ರ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಹೇಳಿಕೊಂಡಿತ್ತು. ಪ್ರಕರಣದಲ್ಲಿ ಭಾರತದ ಕೈವಾಡದ ಬಗ್ಗೆ ಹೇಳಿತ್ತು.

ಈ ಕುರಿತು ಮ್ಯಾನ್‌ಹ್ಯಾಟನ್ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಹೆಸರಿತ್ತು. ಆತನ ಬಂಧನವೂ ನಡೆದಿತ್ತು. ಇದೀಗ ವಿಕ್ರಮ್ ಯಾದವ್ ಪನ್ನುನ್‌ ಹತ್ಯೆಗೆ  ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್‌ ಟನ್‌ ಪೋಸ್ಟ್ ವರದಿ ಹೇಳಿದೆ. ಇದಲ್ಲದೆ ಮೋದಿಯ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ತಿಳಿದಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತವು ಈ ಆರೋಪಗಳನ್ನು ಬಲವಾಗಿ ತಿರಸ್ಕರಿಸಿದೆ ಮತ್ತು ಸರ್ಕಾರದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಭಾರತದ ಮೇಲಿನ ಆರೋಪಗಳ ಬಗ್ಗೆ ತನಿಖೆ ಮಾಡಲು ನವೆಂಬರ್ 2023ರಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಈ ಕುರಿತ ತನಿಖೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳು ಕೂಡ ಇದೆ ಎಂದು ಹೇಳಿದ್ದರು. ಬಿಡೆನ್ ಆಡಳಿತವು ವಿಕ್ರಮ್ ಯಾದವ್ ವಿರುದ್ಧ ಆರೋಪ ಮಾಡುವುದನ್ನು ತಪ್ಪಿಸಿದೆ ಎಂದು ಕೂಡ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಭಾರತ ಸರ್ಕಾರವು ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ಶ್ವೇತಭವನ ಹೇಳಿದೆ.

ಇದು ಗಂಭೀರ ವಿಷಯವಾಗಿದೆ ಮತ್ತು ನಾವು ಅದನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವ ಬಗ್ಗೆ ಭಾರತ ಸರ್ಕಾರವು ನಮ್ಮೊಂದಿಗೆ ಸ್ಪಷ್ಟವಾಗಿ ಹೇಳಿದೆ.  ನಾವು ನಮ್ಮ ಕಳವಳಗಳನ್ನು ನೇರವಾಗಿ ಭಾರತ ಸರ್ಕಾರದೊಂದಿಗೆ ವ್ಯಕ್ತಪಡಿಸುವುದನ್ನು ಮುಂದುವರಿಸಲಿದ್ದೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...