Homeರಾಷ್ಟ್ರೀಯಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ...

ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

- Advertisement -
- Advertisement -

ಕೊರೊನಾ ಸಾಂಕ್ರಮಿಕದ ನಡುವೆಯು ವಿಶ್ವದಾದ್ಯಂತ ಸೈನ್ಯಗಳಿಗೆ ಮಾಡಿರುವ ಖರ್ಚು 2021ರಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತವನ್ನು ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ. ಈ ಮೊತ್ತವು 2.1 ಟ್ರಿಲಿಯನ್‌ ಡಾಲರ್‌‌ ಎಂದು ಅದು ಹೇಳಿದೆ. ವಿಶ್ವದಲ್ಲಿ ಸೈನ್ಯಕ್ಕೆ ಅತೀ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಅಮೆರಿಕಾ, ಚೀನಾ ನಂತರ ಭಾರತವು ಮೂರನೇ ಸ್ಥಾನದಲ್ಲಿ ಇದೆ ಎಂದು SIPRI ಹೇಳಿದೆ.

“ಒಟ್ಟು ಜಾಗತಿಕ ಮಿಲಿಟರಿ ವೆಚ್ಚವು 2021 ರಲ್ಲಿ 0.7% ದಷ್ಟು ಹೆಚ್ಚಾಗಿದ್ದು, 2113 ಬಿಲಿಯನ್‌ ಅಮೆರಿಕನ್‌ ಡಾಲರ್‌ ತಲುಪಿದೆ. ಅಮೆರಿಕಾ, ಚೀನಾ, ಭಾರತ, ಇಂಗ್ಲೇಂಡ್‌ ಮತ್ತು ರಷ್ಯಾ 2021 ರಲ್ಲಿ ಸೈನ್ಯದ ಮೇಲೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳಾಗಿವೆ. ಈ ಐದು ದೇಶಗಳು ಒಟ್ಟಾಗಿ 62% ದಷ್ಟು ಖರ್ಚು ಮಾಡಿವೆ” ಸ್ಟಾಕ್‌ಹೋಮ್ ತನ್ನ ಹೇಳಿಕೆಯಲ್ಲಿ ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಆರ್ಥಿಕ ಕುಸಿತದ ನಡುವೆಯೂ, ವಿಶ್ವ ಮಿಲಿಟರಿ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿದೆ” ಎಂದು SIPRI ಯ ಮಿಲಿಟರಿ ವೆಚ್ಚ ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ಕಾರ್ಯಕ್ರಮದ ಹಿರಿಯ ಸಂಶೋಧಕ ಡಾ ಡಿಯಾಗೋ ಲೋಪೆಸ್ ಡಾ ಸಿಲ್ವಾ ಹೇಳಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

2021 ರಲ್ಲಿ ಅಮೇರಿಕಾ ತನ್ನ ಸೈನ್ಯಕ್ಕೆ 801 ಬಿಲಿಯನ್‌‌ ಡಾಲರ್‌‌‌ ಖರ್ಚು ಮಾಡಿದ್ದು, 2020 ಕ್ಕೆ ಹೋಲಿಸಿದರೆ ಇದು 1.4% ದಷ್ಟು ಕಡಿಮೆಯಾಗಿದೆ ಎಂದು ಹೇಳಿಕೆ ತಿಳಿಸಿದೆ. 2012 ರಿಂದ 2021 ರ ಅವಧಿಯಲ್ಲಿ, ಅಮೆರಿಕಾ ಮಿಲಿಟರಿ ಸಂಶೋಧನೆ ಮತ್ತು ಅಭಿವೃದ್ಧಿಗೆ 24% ದಷ್ಟು ಹಣವನ್ನು ಹೆಚ್ಚಿಸಿದೆ. ಶಸ್ತ್ರಾಸ್ತ್ರ ಖರೀದಿಯ ಮೇಲಿನ ವೆಚ್ಚವನ್ನು 6.4% ದಷ್ಟು ಕಡಿಮೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡನೇ ಸ್ಥಾನದಲ್ಲಿರುವ ಚೀನಾಕ್ಕೆ 293 ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡಿದೆ. 2020 ಹೋಲಿಸಿದರೆ 4.7% ಹೆಚ್ಚಳವಾಗಿದೆ.

ಭಾರತದ ಮಿಲಿಟರಿ ವೆಚ್ಚವು ಕಳೆದ ವರ್ಷ 7,660 ಕೋಟಿ ಡಾಲರ್‌ ಇದ್ದು ಮೂರನೇ ಸ್ಥಾನದಲ್ಲಿದೆ. 2020 ಕ್ಕೆ ಹೋಲಿಸಿದರೆ ಈ ಮೊತ್ತವು 0.9% ಹೆಚ್ಚಳವಾಗಿದೆ.

ಇದನ್ನೂ ಓದಿ: ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಸ್ಟಾಕ್‌ಹೋಮ್ ಮೂಲದ ಸಂಸ್ಥೆಯ ಪ್ರಕಾರ, 7,660 ಕೋಟಿ ಡಾಲರ್‌ ಭಾರತದ ಸೈನ್ಯದ ವೆಚ್ಚವು ವಿಶ್ವದಲ್ಲೇ ಮೂರನೇ ಅತ್ಯಧಿಕ ಸ್ಥಾನದಲ್ಲಿದೆ. ಇದು 2020 ರಿಂದ 0.9% ರಷ್ಟು ಮತ್ತು 2012 ರಿಂದ 33% ರಷ್ಟು ಹೆಚ್ಚಾಗಿದೆ. ಸ್ಥಳೀಯ ಶಸ್ತ್ರಾಸ್ತ್ರ ಉದ್ಯಮವನ್ನು ಬಲಪಡಿಸುವ ಪ್ರಯತ್ನದಲ್ಲಿರುವ ಭಾರತವು, 2021 ರ ಮಿಲಿಟರಿ ಬಜೆಟ್‌ನಲ್ಲಿ 64% ಬಂಡವಾಳವನ್ನು ದೇಶೀಯವಾಗಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳ ಸ್ವಾಧೀನಕ್ಕೆ ಮೀಸಲಿಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...