Homeರಾಷ್ಟ್ರೀಯಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ...

ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

- Advertisement -
- Advertisement -

ಕೊರೊನಾ ಸಾಂಕ್ರಮಿಕದ ನಡುವೆಯು ವಿಶ್ವದಾದ್ಯಂತ ಸೈನ್ಯಗಳಿಗೆ ಮಾಡಿರುವ ಖರ್ಚು 2021ರಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತವನ್ನು ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ. ಈ ಮೊತ್ತವು 2.1 ಟ್ರಿಲಿಯನ್‌ ಡಾಲರ್‌‌ ಎಂದು ಅದು ಹೇಳಿದೆ. ವಿಶ್ವದಲ್ಲಿ ಸೈನ್ಯಕ್ಕೆ ಅತೀ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಅಮೆರಿಕಾ, ಚೀನಾ ನಂತರ ಭಾರತವು ಮೂರನೇ ಸ್ಥಾನದಲ್ಲಿ ಇದೆ ಎಂದು SIPRI ಹೇಳಿದೆ.

“ಒಟ್ಟು ಜಾಗತಿಕ ಮಿಲಿಟರಿ ವೆಚ್ಚವು 2021 ರಲ್ಲಿ 0.7% ದಷ್ಟು ಹೆಚ್ಚಾಗಿದ್ದು, 2113 ಬಿಲಿಯನ್‌ ಅಮೆರಿಕನ್‌ ಡಾಲರ್‌ ತಲುಪಿದೆ. ಅಮೆರಿಕಾ, ಚೀನಾ, ಭಾರತ, ಇಂಗ್ಲೇಂಡ್‌ ಮತ್ತು ರಷ್ಯಾ 2021 ರಲ್ಲಿ ಸೈನ್ಯದ ಮೇಲೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳಾಗಿವೆ. ಈ ಐದು ದೇಶಗಳು ಒಟ್ಟಾಗಿ 62% ದಷ್ಟು ಖರ್ಚು ಮಾಡಿವೆ” ಸ್ಟಾಕ್‌ಹೋಮ್ ತನ್ನ ಹೇಳಿಕೆಯಲ್ಲಿ ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಆರ್ಥಿಕ ಕುಸಿತದ ನಡುವೆಯೂ, ವಿಶ್ವ ಮಿಲಿಟರಿ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿದೆ” ಎಂದು SIPRI ಯ ಮಿಲಿಟರಿ ವೆಚ್ಚ ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ಕಾರ್ಯಕ್ರಮದ ಹಿರಿಯ ಸಂಶೋಧಕ ಡಾ ಡಿಯಾಗೋ ಲೋಪೆಸ್ ಡಾ ಸಿಲ್ವಾ ಹೇಳಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

2021 ರಲ್ಲಿ ಅಮೇರಿಕಾ ತನ್ನ ಸೈನ್ಯಕ್ಕೆ 801 ಬಿಲಿಯನ್‌‌ ಡಾಲರ್‌‌‌ ಖರ್ಚು ಮಾಡಿದ್ದು, 2020 ಕ್ಕೆ ಹೋಲಿಸಿದರೆ ಇದು 1.4% ದಷ್ಟು ಕಡಿಮೆಯಾಗಿದೆ ಎಂದು ಹೇಳಿಕೆ ತಿಳಿಸಿದೆ. 2012 ರಿಂದ 2021 ರ ಅವಧಿಯಲ್ಲಿ, ಅಮೆರಿಕಾ ಮಿಲಿಟರಿ ಸಂಶೋಧನೆ ಮತ್ತು ಅಭಿವೃದ್ಧಿಗೆ 24% ದಷ್ಟು ಹಣವನ್ನು ಹೆಚ್ಚಿಸಿದೆ. ಶಸ್ತ್ರಾಸ್ತ್ರ ಖರೀದಿಯ ಮೇಲಿನ ವೆಚ್ಚವನ್ನು 6.4% ದಷ್ಟು ಕಡಿಮೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡನೇ ಸ್ಥಾನದಲ್ಲಿರುವ ಚೀನಾಕ್ಕೆ 293 ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡಿದೆ. 2020 ಹೋಲಿಸಿದರೆ 4.7% ಹೆಚ್ಚಳವಾಗಿದೆ.

ಭಾರತದ ಮಿಲಿಟರಿ ವೆಚ್ಚವು ಕಳೆದ ವರ್ಷ 7,660 ಕೋಟಿ ಡಾಲರ್‌ ಇದ್ದು ಮೂರನೇ ಸ್ಥಾನದಲ್ಲಿದೆ. 2020 ಕ್ಕೆ ಹೋಲಿಸಿದರೆ ಈ ಮೊತ್ತವು 0.9% ಹೆಚ್ಚಳವಾಗಿದೆ.

ಇದನ್ನೂ ಓದಿ: ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಸ್ಟಾಕ್‌ಹೋಮ್ ಮೂಲದ ಸಂಸ್ಥೆಯ ಪ್ರಕಾರ, 7,660 ಕೋಟಿ ಡಾಲರ್‌ ಭಾರತದ ಸೈನ್ಯದ ವೆಚ್ಚವು ವಿಶ್ವದಲ್ಲೇ ಮೂರನೇ ಅತ್ಯಧಿಕ ಸ್ಥಾನದಲ್ಲಿದೆ. ಇದು 2020 ರಿಂದ 0.9% ರಷ್ಟು ಮತ್ತು 2012 ರಿಂದ 33% ರಷ್ಟು ಹೆಚ್ಚಾಗಿದೆ. ಸ್ಥಳೀಯ ಶಸ್ತ್ರಾಸ್ತ್ರ ಉದ್ಯಮವನ್ನು ಬಲಪಡಿಸುವ ಪ್ರಯತ್ನದಲ್ಲಿರುವ ಭಾರತವು, 2021 ರ ಮಿಲಿಟರಿ ಬಜೆಟ್‌ನಲ್ಲಿ 64% ಬಂಡವಾಳವನ್ನು ದೇಶೀಯವಾಗಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳ ಸ್ವಾಧೀನಕ್ಕೆ ಮೀಸಲಿಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...