Homeರಾಷ್ಟ್ರೀಯಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ...

ಕೊರೊನಾ ನಡುವೆಯು ಸೈನ್ಯದ ಮೇಲೆ 7,660 ಕೋಟಿ ಡಾಲರ್‌ ಖರ್ಚು ಮಾಡಿದ ಭಾರತ; ವಿಶ್ವದಲ್ಲೆ 3ನೇ ಸ್ಥಾನ!

- Advertisement -
- Advertisement -

ಕೊರೊನಾ ಸಾಂಕ್ರಮಿಕದ ನಡುವೆಯು ವಿಶ್ವದಾದ್ಯಂತ ಸೈನ್ಯಗಳಿಗೆ ಮಾಡಿರುವ ಖರ್ಚು 2021ರಲ್ಲಿ ಸಾರ್ವಕಾಲಿಕ ಗರಿಷ್ಠ ಮೊತ್ತವನ್ನು ತಲುಪಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ಸೋಮವಾರ ಹೇಳಿದೆ. ಈ ಮೊತ್ತವು 2.1 ಟ್ರಿಲಿಯನ್‌ ಡಾಲರ್‌‌ ಎಂದು ಅದು ಹೇಳಿದೆ. ವಿಶ್ವದಲ್ಲಿ ಸೈನ್ಯಕ್ಕೆ ಅತೀ ಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಅಮೆರಿಕಾ, ಚೀನಾ ನಂತರ ಭಾರತವು ಮೂರನೇ ಸ್ಥಾನದಲ್ಲಿ ಇದೆ ಎಂದು SIPRI ಹೇಳಿದೆ.

“ಒಟ್ಟು ಜಾಗತಿಕ ಮಿಲಿಟರಿ ವೆಚ್ಚವು 2021 ರಲ್ಲಿ 0.7% ದಷ್ಟು ಹೆಚ್ಚಾಗಿದ್ದು, 2113 ಬಿಲಿಯನ್‌ ಅಮೆರಿಕನ್‌ ಡಾಲರ್‌ ತಲುಪಿದೆ. ಅಮೆರಿಕಾ, ಚೀನಾ, ಭಾರತ, ಇಂಗ್ಲೇಂಡ್‌ ಮತ್ತು ರಷ್ಯಾ 2021 ರಲ್ಲಿ ಸೈನ್ಯದ ಮೇಲೆ ಅತೀ ಹೆಚ್ಚು ಖರ್ಚು ಮಾಡಿರುವ ದೇಶಗಳಾಗಿವೆ. ಈ ಐದು ದೇಶಗಳು ಒಟ್ಟಾಗಿ 62% ದಷ್ಟು ಖರ್ಚು ಮಾಡಿವೆ” ಸ್ಟಾಕ್‌ಹೋಮ್ ತನ್ನ ಹೇಳಿಕೆಯಲ್ಲಿ ಹೇಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕೊರೊನಾ ಆರ್ಥಿಕ ಕುಸಿತದ ನಡುವೆಯೂ, ವಿಶ್ವ ಮಿಲಿಟರಿ ವೆಚ್ಚವು ದಾಖಲೆಯ ಮಟ್ಟವನ್ನು ತಲುಪಿದೆ” ಎಂದು SIPRI ಯ ಮಿಲಿಟರಿ ವೆಚ್ಚ ಮತ್ತು ಶಸ್ತ್ರಾಸ್ತ್ರ ಉತ್ಪಾದನಾ ಕಾರ್ಯಕ್ರಮದ ಹಿರಿಯ ಸಂಶೋಧಕ ಡಾ ಡಿಯಾಗೋ ಲೋಪೆಸ್ ಡಾ ಸಿಲ್ವಾ ಹೇಳಿದ್ದಾರೆ.

ಇದನ್ನೂ ಓದಿ: ನವವಿವಾಹಿತ ದಲಿತ ದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಣೆ; ಅರ್ಚಕನ ಬಂಧನ

2021 ರಲ್ಲಿ ಅಮೇರಿಕಾ ತನ್ನ ಸೈನ್ಯಕ್ಕೆ 801 ಬಿಲಿಯನ್‌‌ ಡಾಲರ್‌‌‌ ಖರ್ಚು ಮಾಡಿದ್ದು, 2020 ಕ್ಕೆ ಹೋಲಿಸಿದರೆ ಇದು 1.4% ದಷ್ಟು ಕಡಿಮೆಯಾಗಿದೆ ಎಂದು ಹೇಳಿಕೆ ತಿಳಿಸಿದೆ. 2012 ರಿಂದ 2021 ರ ಅವಧಿಯಲ್ಲಿ, ಅಮೆರಿಕಾ ಮಿಲಿಟರಿ ಸಂಶೋಧನೆ ಮತ್ತು ಅಭಿವೃದ್ಧಿಗೆ 24% ದಷ್ಟು ಹಣವನ್ನು ಹೆಚ್ಚಿಸಿದೆ. ಶಸ್ತ್ರಾಸ್ತ್ರ ಖರೀದಿಯ ಮೇಲಿನ ವೆಚ್ಚವನ್ನು 6.4% ದಷ್ಟು ಕಡಿಮೆ ಮಾಡಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡನೇ ಸ್ಥಾನದಲ್ಲಿರುವ ಚೀನಾಕ್ಕೆ 293 ಶತಕೋಟಿ ಡಾಲರ್‌ಗಳನ್ನು ಖರ್ಚು ಮಾಡಿದೆ. 2020 ಹೋಲಿಸಿದರೆ 4.7% ಹೆಚ್ಚಳವಾಗಿದೆ.

ಭಾರತದ ಮಿಲಿಟರಿ ವೆಚ್ಚವು ಕಳೆದ ವರ್ಷ 7,660 ಕೋಟಿ ಡಾಲರ್‌ ಇದ್ದು ಮೂರನೇ ಸ್ಥಾನದಲ್ಲಿದೆ. 2020 ಕ್ಕೆ ಹೋಲಿಸಿದರೆ ಈ ಮೊತ್ತವು 0.9% ಹೆಚ್ಚಳವಾಗಿದೆ.

ಇದನ್ನೂ ಓದಿ: ಉರ್ದು ಭಾಷೆ ಬಾರದೆ ಇದ್ದಿದ್ದು ಚಂದ್ರು ಕೊಲೆಗೆ ಕಾರಣವಲ್ಲ: ಗುಪ್ತಚರ ಇಲಾಖೆ ವರದಿ

ಸ್ಟಾಕ್‌ಹೋಮ್ ಮೂಲದ ಸಂಸ್ಥೆಯ ಪ್ರಕಾರ, 7,660 ಕೋಟಿ ಡಾಲರ್‌ ಭಾರತದ ಸೈನ್ಯದ ವೆಚ್ಚವು ವಿಶ್ವದಲ್ಲೇ ಮೂರನೇ ಅತ್ಯಧಿಕ ಸ್ಥಾನದಲ್ಲಿದೆ. ಇದು 2020 ರಿಂದ 0.9% ರಷ್ಟು ಮತ್ತು 2012 ರಿಂದ 33% ರಷ್ಟು ಹೆಚ್ಚಾಗಿದೆ. ಸ್ಥಳೀಯ ಶಸ್ತ್ರಾಸ್ತ್ರ ಉದ್ಯಮವನ್ನು ಬಲಪಡಿಸುವ ಪ್ರಯತ್ನದಲ್ಲಿರುವ ಭಾರತವು, 2021 ರ ಮಿಲಿಟರಿ ಬಜೆಟ್‌ನಲ್ಲಿ 64% ಬಂಡವಾಳವನ್ನು ದೇಶೀಯವಾಗಿ ಉತ್ಪಾದಿಸಿದ ಶಸ್ತ್ರಾಸ್ತ್ರಗಳ ಸ್ವಾಧೀನಕ್ಕೆ ಮೀಸಲಿಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...