Homeಮುಖಪುಟಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಭೀಕರ ಹಿಂಸೆ ಎದುರಿಸುತ್ತಿರುವಾಗ ಭಾರತ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

ಇಸ್ರೇಲ್‌ ಆಕ್ರಮಿತ ಪ್ಯಾಲೆಸ್ತೀನ್‌ನ ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಮತ್ತೆ ತಟಸ್ಥವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಭಾರತ ಮತದಾನದಿಂದ ತಟಸ್ಥವಾಗಿದೆ. ಮೋದಿ ನೇತೃತ್ವದ ಸರ್ಕಾರದ ಈ ನಿರ್ಧಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗಾಜಾ ಸಂಘರ್ಷದಲ್ಲಿ

ಈ ಬಗ್ಗೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಮ್ಮ ವಿದೇಶಾಂಗ ನೀತಿಯು ಈಗ ಹೆಚ್ಚು ಹೆಚ್ಚು ಶಿಥಿಲಗೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ. ಬಹುಶಃ, ಪ್ರಧಾನಿ ಮೋದಿ ಈಗ ತಮ್ಮ ವಿದೇಶಾಂಗ ಸಚಿವರ ಪುನರಾವರ್ತಿತ ತಪ್ಪುಗಳನ್ನು ಪರಿಗಣಿಸಿ ಕೆಲವು ಹೊಣೆಗಾರಿಕೆಯನ್ನು ಹೊಂದಿಸಬೇಕು.” ಎಂದು ಹೇಳಿದ್ದಾರೆ.

“ಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯಕ್ಕೆ 149 ದೇಶಗಳು ಮತ ಹಾಕಿದವು. ಮತದಾನದಿಂದ ದೂರವಿದ್ದ 19 ದೇಶಗಳಲ್ಲಿ ಭಾರತ ಕೂಡಾ ಒಂದಾಗಿದೆ. ಈ ಹೆಜ್ಜೆಯಿಂದ ನಾವು ವಾಸ್ತವಿಕವಾಗಿ ಒಂಟಿಯಾಗಿ ನಿಂತಿದ್ದೇವೆ.” ಎಂದು ಅವರು ಹೇಳಿದ್ದಾರ ಎ.

ಅಕ್ಟೋಬರ್ 8, 2023 ರಂದು, ಇಸ್ರೇಲ್ ಜನರ ಮೇಲೆ ಪ್ಯಾಲೆಸ್ತೀನಿ ಹೋರಾಟಗಾರರಾದ ಹಮಾಸ್ ನಡೆಸಿದ ಕ್ರೂರ ದಾಳಿಯನ್ನು ಕಾಂಗ್ರೆಸ್ ಖಂಡಿಸಿತ್ತು ಎಂದು ಹೇಳಿರುವ ಅವರು, “ಗಾಝಾದ ದಿಗ್ಭಂಧನ ಮತ್ತು ಅದರ ಮೇಲಿನ ಬಾಂಬ್ ದಾಳಿಗಳನ್ನು ಒಳಗೊಂಡಂತೆ ವಿವೇಚನಾರಹಿತ ಕೃತ್ಯಗಳನ್ನು ನಾವು ನಿರಂತರವಾಗಿ ಖಂಡಿಸಿದ್ದೇವೆ” ಎಂದು ಹೇಳಿದ್ದಾರೆ.

ಈ ದಾಳಿಯಲ್ಲಿ 60,000 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಮತ್ತು ಭಯಾನಕ ಮಾನವೀಯ ಬಿಕ್ಕಟ್ಟು ಇದೆ. ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ, ಶಾಂತಿ ಮತ್ತು ಮಾತುಕತೆಗಾಗಿ ಪ್ರತಿಪಾದಿಸುವ ಭಾರತದ ಈ ಹಿಂದಿನ ನಿಲುವನ್ನು ನಾವು ಕೈಬಿಟ್ಟಿದ್ದೇವೆಯೇ? ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ.

“ಭಾರತದ ಈ ನಿಲುವು ನಮ್ಮ ದೀರ್ಘಕಾಲದ ಅಲಿಪ್ತತೆ ಮತ್ತು ನೈತಿಕ ರಾಜತಾಂತ್ರಿಕತೆಯ ಸಂಪ್ರದಾಯದಲ್ಲಿ ತೀವ್ರವಾಗಿ ಬೇರೂರಿದೆ. ಅದರ ಮೂಲಕ ಭಾರತವು ಅಂತರರಾಷ್ಟ್ರೀಯ ಸಂಘರ್ಷಗಳಲ್ಲಿ ಯಾವಾಗಲೂ ನ್ಯಾಯ ಮತ್ತು ಶಾಂತಿಯನ್ನು ಪ್ರತಿಪಾದಿಸಿದೆ.” ಎಂದು ಹೇಳಿದ್ದಾರೆ.

“ಅಕ್ಟೋಬರ್ 19, 2023 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತಕ್ಷಣದ ಕದನ ವಿರಾಮಕ್ಕೆ ಮತ್ತು ಗಾಝಾದ ಸಂಕಷ್ಟಕ್ಕೊಳಗಾದ ಮತ್ತು ಹೊರದಬ್ಬಲ್ಪಟ್ಟ ಜನರಿಗೆ ಮಾನವೀಯ ನೆರವು ನೀಡುವಂತೆ ಕರೆ ನೀಡಿತ್ತು. ಈ ಪ್ರದೇಶವು ಭೀಕರ ಹಿಂಸೆ, ಮಾನವೀಯ ದುರಂತ ಮತ್ತು ಹೆಚ್ಚುತ್ತಿರುವ ಅಸ್ಥಿರತೆಯನ್ನು ಎದುರಿಸುತ್ತಿರುವಾಗ ಭಾರತ ಮೌನವಾಗಿ ಅಥವಾ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ. ಗಾಜಾ ಸಂಘರ್ಷದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...