Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...