Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...