Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...