Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...