Homeಸಿನಿಮಾಕ್ರೀಡೆಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ: ಹೇಗೆ?

ಇದೆಲ್ಲವೂ ಘಟಿಸಲು ಭಾರತ ತಂಡವು ತನ್ನ ಉಳಿದ ಮೂರು ಪಂದ್ಯಗಳನ್ನು ಸಾಕಷ್ಟು ಭಾರೀ ಅಂತರದಲ್ಲಿ ಗೆಲ್ಲುವುದು ಪೂರ್ವ ಷರತ್ತಾಗಿದೆ.

- Advertisement -
- Advertisement -

ಐಸಿಸಿ ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿದ್ದ ಭಾರತ ತಂಡವು ಸತತ ಎರಡು ಹೀನಾಯ ಸೋಲುಗಳಿಂದ ಕಂಗೆಟ್ಟಿದೆ. ಪಾಕ್ ವಿರುದ್ಧ 10 ವಿಕೆಟ್‌ಗಳ ಸೋಲುಂಡಿದ್ದ ಭಾರತ, ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‌ಗಳಿಂದ ಪರಾಭವಗೊಂಡಿತು. ಅಲ್ಲಿಗೆ ಸೆಮಿಫೈನಲ್ ಅವಕಾಶ ದೂರವಾಗಿದೆ ಎಂಬ ಟೀಕೆಗಳು ಕೇಳಿಬಂದಿವೆ. ಆದರೆ ಟಿ20 ವಿಶ್ವಕಪ್ ಸೆಮಿಫೈನಲ್ ತಲುಪಲು ಭಾರತಕ್ಕೆ ಇನ್ನೂ ಅವಕಾಶವಿದೆ. ಹೇಗೆ ಎಂದು ನೋಡೋಣ.

ಸದ್ಯದ ಪಾಯಿಂಟ್ಸ್ ಪಟ್ಟಿ

ಈಗ ಗ್ರೂಪ್ 2 ರ ಪಾಯಿಂಟ್ ಪಟ್ಟಿಯಲ್ಲಿ ಸತತ ಮೂರು ಗೆಲವುಗಳೊಂದಿಗೆ ಪಾಕಿಸ್ತಾನ ಅಗ್ರಸ್ಥಾನದಲ್ಲಿದೆ. ಅದು ತನ್ನ ಉಳಿದ ಎರಡು ಪಂದ್ಯಗಳಲ್ಲಿ ನಮೀಬಿಯ ಮತ್ತು ಸ್ಕಾಟ್ಲ್ಯಾಂಡ್ ವಿರುದ್ದ ಸೆಣಸಲಿದೆ. ಒಂದು ಗೆಲುವು ಪಡೆದರೂ ಅದರ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ. ಗ್ರೂಪ್ 2 ರಲ್ಲಿ ಸೆಮಿಫೈನಲ್ ತಲುಪಲು ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಆಫ್ಘಾನಿಸ್ತಾನ, ನ್ಯೂಜಿಲೆಂಡ್, ನಮೀಬಿಯಾ, ಭಾರತ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ಆ ಸ್ಥಾನದ ಮೇಲೆ ಕಣ್ಣಿಟ್ಟಿವೆ. ಇವುಗಳಲ್ಲಿ ಆಫ್ಘಾನಿಸ್ತಾನ, ನ್ಯೂಜಿಲೆಂಡ್ ಮತ್ತು ಭಾರತ ತಂಡಕ್ಕೆ ಹೆಚ್ಚಿನ ಸಾಧ್ಯತೆಗಳಿವೆ.

ಭಾರತ ಹೇಗೆ ಸೆಮಿಫೈನಲ್ ತಲುಪಬಹುದು?

ಭಾರತದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ
ನವೆಂಬರ್ 5: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬ್ 8: ನಮೀಬಿಯಾ ಎದುರು ದುಬೈನಲ್ಲಿ

ನ್ಯೂಜಿಲೆಂಡ್‌ನ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಸ್ಕಾಟ್ಲ್ಯಾಂಡ್ ಎದುರು ದುಬೈನಲ್ಲಿ
ನವೆಂಬರ್ 5: ನಮೀಬಿಯಾ ಎದುರು ಶಾರ್ಜಾದಲ್ಲಿ
ನವೆಂಬರ್ 7: ಆಫ್ಘಾನಿಸ್ತಾನ ಎದುರು ಅಬುದಾಬಿಯಲ್ಲಿ

ಆಫ್ಘಾನಿಸ್ತಾನದ ಮುಂದಿನ ಪಂದ್ಯಗಳು ಈ ರೀತಿ ಇವೆ.

ನವೆಂಬರ್ 3: ಭಾರತದ ಎದುರು ಅಬುದಾಬಿಯಲ್ಲಿ
ನವೆಂಬರ್ 7: ನ್ಯೂಜಿಲೆಂಡ್‌ ಎದುರು ಅಬುದಾಬಿಯಲ್ಲಿ

ಭಾರತವು ತನ್ನ ಮುಂದಿನ ಮೂರು ಪಂದ್ಯಗಳನ್ನು ಭಾರೀ ಅಂತರದಿಂದ ಗೆದ್ದಲ್ಲಿ 6 ಪಾಯಿಂಟ್‌ಗಳ ಜೊತೆಗೆ ಉತ್ತಮ ನೆಟ್ ರನ್ ರೇಟ್ ಆಧಾರದಲ್ಲಿ ಸೆಮಿಫೈನಲ್ ತಲುಪಬಹುದು. ಸದ್ಯಕ್ಕೆ -1.609 ರ ಕಡಿಮೆ ರನ್‌ರೇಟ್ ಭಾರತಕ್ಕಿದೆ. ಆದರೆ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳು ಉಳಿದ ತಂಡಗಳ ಎದುರು ಸೋಲುವುದು ಕೂಡ ಭಾರತಕ್ಕೆ ಅತೀ ಅಗತ್ಯವಾಗಿದೆ.

ಭಾರತ 8 ಪಾಯಿಂಟ್‌ಗಳನ್ನು ಗಳಿಸುವುದು ಸಾಧ್ಯವಿಲ್ಲ. ಆದರೆ ಆ ಸಾಧ್ಯತೆ ಆಫ್ಘಾನಿಸ್ತಾನ ತಂಡಕ್ಕಿದೆ. ಏಕೆಂದರೆ ಅದು ಈಗಾಗಲೇ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದು 4 ಪಾಯಿಂಟ್ ಗಳಿಸಿಕೊಂಡಿದೆ. ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಅದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಒಂದನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ನ್ಯೂಜಿಲೆಂಡ್‌ ತಂಡಕ್ಕೂ ಸಹ ಆ ಅವಕಾಶವಿದೆ. ಅದು ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದು 2 ಪಾಯಿಂಟ್ ಗಳಿಸಿದೆ. ಉಳಿದ ಮೂರು ಪಂದ್ಯಗಳಲ್ಲಿ ಮೂರನ್ನು ಗೆದ್ದು 8 ಪಾಯಿಂಟ್ ಪಡೆದು ಸೆಮಿಫೈನಲ್ ತಲುಪಬಹುದು. ಅಥವಾ ಎರಡನ್ನು ಭಾರೀ ಅಂತರದಿಂದ ಗೆದ್ದು ಹೆಚ್ಚು ರನ್ ರೇಟ್ ಇದ್ದಲ್ಲಿ ಅದರ ಹಾದಿ ಸುಗಮ.

ಈ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಅಬುದಾಬಿಯಲ್ಲಿ ನಡೆಯಲಿದರು ಆಫ್ಘಾನಿಸ್ತಾನ ಎದುರಿನ ನ್ಯೂಜಿಲೆಂಡ್ ಪಂದ್ಯಕ್ಕೆ ಭಾರೀ ಮಹತ್ವ ಬಂದಿದೆ.

ಸನ್ನಿವೇಶ 1

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ಅದೇ ರೀತಿ ಆಫ್ಘಾನಿಸ್ತಾನವು ನ್ಯೂಜಿಲೆಂಡ್ ಎದರು ಭಾರೀ ಅಂತರದಿಂದ ಗೆದ್ದಲ್ಲಿ ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ.

ಸನ್ನಿವೇಶ 2

ಭಾರತವು ಭಾರೀ ಅಂತರದಿಂದ ಆಫ್ಘಾನಿಸ್ತಾನದ ಎದುರು ಗೆಲ್ಲುತ್ತದೆ. ನ್ಯೂಜಿಲೆಂಡ್ ಸಹ ಆಫ್ಘಾನಿಸ್ತಾನ ಎದುರು ಗೆದ್ದಲ್ಲಿ ಆಫ್ಘಾನಿಸ್ತಾನ ಕೇವಲ 04 ಪಾಯಿಂಟ್‌ಗಳಿಗೆ ಸೀಮಿತವಾಗುತ್ತದೆ. ಅದರ ಸೆಮಿಫೈನಲ್ ಹಾದಿ ಮುಚ್ಚಿಹೋಗುತ್ತದೆ. ಎರಡೂ ತಂಡಗಳು 6 ಪಾಯಿಂಟ್‌ಗೆ ಬಂದು ನಿಂತರೆ ನೆಟ್ ರನ್ ರೇಟ್ ಆಧಾರ ಮುಖ್ಯವಾಗುತ್ತದೆ. ಒಂದು ವೇಳೆ ನ್ಯೂಜಿಲೆಂಡ್ ತಂಡವು ನಮೀಬಿಯಾ ಅಥವಾ ಸ್ಕಾಟ್ಲ್ಯಾಂಡ್ ಎದುರಿನ ಒಂದು ಪಂದ್ಯ ಸೋತರೂ ಭಾರತದ ನೆಟ್‌ ರನ್ ರೇಟ್ ಉತ್ತಮವಾಗಿದ್ದಲ್ಲಿ ಭಾರತಕ್ಕೆ ಅವಕಾಶ ತೆರೆದುಕೊಳ್ಳುತ್ತದೆ.

ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಭಾರತಕ್ಕೆ ಸಹಾಯ ಮಾಡಬಲ್ಲವೇ?

ಭಾರತಕ್ಕೆ ಸೆಮಿಫೈನಲ್ ತಲುಪಲು ಬೇರೆ ದಾರಿಗಳು ಸಹ ಇವೆ. ಭಾರತವು ಆಫ್ಘಾನಿಸ್ತಾನ, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ಎದುರು ಗೆಲ್ಲಲೇಬೇಕು. ನಂತರ ಈ ಎರಡು ತಂಡಗಳು ಪಾಕಿಸ್ತಾನದ ಎದುರು ಸೆಣೆಸುತ್ತಿವೆ. ಅಲ್ಲಿ ಅವರೆಡೂ ಭಾರೀ ಅಂತರದಿಂದ ಗೆದ್ದಲ್ಲಿ ಪಾಕಿಸ್ತಾನವೇ ಹೊರಹೋಗುವ ಸಾಧ್ಯತೆ ಸಹ ಇದೆ. ಆದರೆ ಭಾರೀ ಅಂತರದಿಂದ ಗೆಲ್ಲಬೇಕು ಮತ್ತು ಭಾರತ ಪಾಕಿಸ್ತಾನಕ್ಕಿಂತ ಉತ್ತಮ ನೆಟ್‌ ರನ್ ರೇಟ್ ಹೊಂದಿರಬೇಕಾಗುತ್ತದೆ.

ಇನ್ನೊಂದು ರೀತಿಯಲ್ಲಿ ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ತಂಡಗಳು ನ್ಯೂಜಿಲೆಂಡ್ ವಿರುದ್ಧವೂ ದೊಡ್ಡ ಜಯ ಪಡೆದರೆ ಅದು ಭಾರತಕ್ಕೆ ವರದಾನವಾಗುತ್ತದೆ. ಆಗ ನ್ಯೂಜಿಲೆಂಡ್ ಆಫ್ಘಾನಿಸ್ತಾನದ ಎದುರು ಗೆದ್ದಿರಬೇಕು ಮತ್ತು ಭಾರತ ನಮೀಬಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರಬೇಕಾಗುತ್ತದೆ.. ಭಾರತದ ಪಾಲಿಗೆ ಅತಿ ದೊಡ್ಡ ಸವಾಲು ಇದಾಗಿದೆ. ಅದು ಪುಟಿದೆದ್ದು ಆಡಬೇಕಿದೆ ಮತ್ತು ಭಾರೀ ಅಂತರ ಮೂರು ಪಂದ್ಯಗಳನ್ನು ಗೆಲ್ಲಬೇಕಿದೆ. ಆಗಷ್ಟೇ ಉಳಿದ ಸನ್ನಿವೇಶಗಳಿಗೆ ಜೀವ ಬರುತ್ತದೆ. ಏನಾಗುತ್ತದೆ ಕಾದು ನೋಡೋಣ..


ಇದನ್ನೂ ಓದಿ: ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...