Homeಮುಖಪುಟಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

ಮುಗ್ಗರಿಸಿದ ಭಾರತ: ಭರ್ಜರಿ ಜಯದೊಂದಿಗೆ ಫೈನಲ್‌ ಲಗ್ಗೆಯಿಟ್ಟ ಇಂಗ್ಲೆಂಡ್

- Advertisement -
- Advertisement -

ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಇಂಗ್ಲೆಂಡ್ ಫೈನಲ್ ತಲುಪಿತು. ಅಲೆಕ್ಸ್ ಹೇಲ್ಸ್ (86 ರನ್) ಮತ್ತು ಜೋಸ್ ಬಟ್ಲರ್‌ರವರ (80 ರನ್) ಆಕ್ರಮಣಕಾರಿ ಬ್ಯಾಟಿಂಗ್‌ ಬಲದಿಂದ ಸುಲಭ ಜಯ ಕಂಡಿತು. ಬೌಲಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡಿದ ಭಾರತ ತಂಡ ಈ ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿತು.

ಇಂಗ್ಲೆಂಡ್‌ನ ಈ ಇಬ್ಬರೂ ಆರಂಭಿಕ ಬ್ಯಾಟ್ಸ್‌ಮನ್‌ಗಳು ಭಾರತದ ಬೌಲರ್‌ಗಳ ಬೆವರಿಳಿಸಿದರು. ಚೆಂಡನ್ನು ಅಂಗಳದ ಮೂಲೆ ಮೂಲೆ ಅಟ್ಟುವ ಮೂಲಕ ಅಧಿಕಾರಯುತ ಗೆಲುವು ಪಡೆದರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡ ನವೆಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಪ್ರಶಸ್ತಿಗಾಗಿ ಸೆಣಸಲಿದೆ.

2010ರಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿದ್ದ ಇಂಗ್ಲೆಂಡ್, 2016ರಲ್ಲಿ ವೆಸ್ಟ್ ಇಂಡೀಸ್ ಎದುರು ಫೈನಲ್‌ನಲ್ಲಿ ಮುಗ್ಗಿರಿಸಿತ್ತು. ಈಗ ಫೈನಲ್ ತಲುಪಿದ್ದು ಎರಡನೇ ಬಾರಿ ಚಾಂಪಿಯನ್ ಆಗುವ ತವಕದಲ್ಲಿದೆ. ಅದೇ ರೀತಿ 2007 ರಲ್ಲಿ ಫೈನಲ್‌ನಲ್ಲಿ ಭಾರತದ ವಿರುದ್ಧ ಮುಗ್ಗರಿಸಿದ್ದ ಪಾಕ್, 2009 ರಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಈಗ ಎರಡನೆ ಬಾರಿ ಕಪ್ ಜಯಿಸುವ ಕನಸಿನಲ್ಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ಕಳದುಕೊಂಡು 168 ರನ್ ಗಳಿಸುವ ಮೂಲಕ ಸವಾಲಿನ ಮೊತ್ತ ಪೇರಿಸಿತು. ವಿರಾಟ್ ಕೊಹ್ಲಿಯ ಸೊಗಸಾದ ಮತ್ತು ಹಾರ್ದಿಕ್ ಪಾಂಡ್ಯರವರ ಬಿರುಸಿನ ಅರ್ಧಶಕತಗಳಿಂದ ಭಾರತ ತಂಡ ಇಂಗ್ಲೆಂಡ್ ಗೆಲುವಿನ 169 ರನ್‌ಗಳ ಗುರಿ ನೀಡಿತ್ತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರೀಕ್ಷೆಯಂತೆ ವೋಕ್ಸ್ ಕೆ.ಎಲ್ ರಾಹುಲ್ ವಿಕೆಟ್ ತೆಗೆದು ಶುಭಾರಂಭ ಮಾಡಿದರು. ನಂತರ ವಿರಾಟ್ ಕೊಹ್ಲಿ ಮತ್ತು ನಾಯಕ ರೋಹಿತ್ ಶರ್ಮಾ ಅಲ್ಪ ಜೊತೆಯಾಟ ನೀಡಿದರೂ ಶರ್ಮಾ ಬೇಗನೆ ನಿರ್ಗಮಿಸುವ ಮೂಲಕ ನಿರಾಸೆ ಮೂಡಿಸಿದರು. ಇನ್ನೂ ಸಿಕ್ಸ್‌ ಬಾರಿಗೆ ಭರವಸೆ ಮೂಡಿಸಿದ್ದ ಸೂರ್ಯಕುಮಾರ್ ಯಾದವ್ ಆಟವೂ ಹೆಚ್ಚು ಹೊತ್ತು ನಡೆಯಲಿಲ್ಲ. ಪರಿಣಾಮ ಭಾರತ ಒಂದು ಹಂತದಲ್ಲಿ 9 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 60 ಅಷ್ಟೇ ಗಳಿಸಿತ್ತು.

ಆದರೆ, ನಾಲ್ಕನೇ ವಿಕೆಟ್‌ಗೆ ಜೊತೆಯಾದ ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ ಜೊತೆಯಾಟಕ್ಕೆ ಮುಂದಾದರು. 4 ಬೌಂಡರಿ 1 ಸಿಕ್ಸರ್ ಸಹಾಯದಿಂದ ವಿರಾಟ್ ಕೊಹ್ಲಿ 40 ಎಸೆತಕ್ಕೆ 50 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 4 ಬೌಂಡರಿ 5 ಸಿಕ್ಸರ್ ಸಹಾಯದಿಂದ 33 ಎಸೆತಕ್ಕೆ ಬಿರುಸಿನ 63 ರನ್ ಬಾರಿಸಿದರು.

ಆದರೆ ಭಾರತದ ಬೌಲರ್‌ಗಳು ಯಾವುದೇ ಹಂತದಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡಲಿಲ್ಲ. ಇಂಗ್ಲೆಂಡ್‌ನ ಒಂದೂ ವಿಕೆಟ್ ಪಡೆಯಲು ವಿಫಲರಾದರು. ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಆಟಗಾರರು ಇನ್ನು 24 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ಗುರಿ ಮುಟ್ಟಿದರು.

ಇದನ್ನೂ ಓದಿ: ಗುಜರಾತ್ ಚುನಾವಣೆ: ಹಾರ್ದಿಕ್ ಪಟೇಲ್‌, ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...