Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ಯಾವುದೇ ಬಿಕ್ಕಟ್ಟುಗಳು ಭಯೋತ್ಪಾದಕರ ಕೈಗಳನ್ನು ಬಲಪಡಿಸುತ್ತದೆ ಮತ್ತು ಸಹಕಾರದ ಬಾಗಿಲನ್ನು ಮುಚ್ಚುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಸೇರಿದಂತೆ ಪಶ್ಚಿಮ ಏಷ್ಯಾದ ವಿಷಯದಲ್ಲಿ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪ್ಯಾಲೆಸ್ತೀನ್ ಸಮಸ್ಯೆಗೆ ಶಾಂತಿಯುತ ಪರಿಹಾರಕ್ಕಾಗಿ ಮಾತುಕತೆ ಮುಂದುವರಿಯಬೇಕು ಎಂಬುದು ಭಾರತದ ನಿಲುವು ಎಂದು ಖಾಯಂ ಪ್ರತಿನಿಧಿ ಟಿ.ಎಸ್.ತಿರೂಮೂರ್ತಿ ಹೇಳಿದ್ದು, ಮಧ್ಯಪ್ರಾಚ್ಯದ ಪರಿಸ್ಥಿತಿ ಕುರಿತು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತನ್ನ ನಿಲುವನ್ನು ಪುನರುಚ್ಚರಿಸಿತು.

ಸಂಘರ್ಷವನ್ನು ಕೊನೆಗೊಳಿಸಲು ನ್ಯಾಯಯುತ ಮತ್ತು ಸ್ವೀಕಾರಾರ್ಹ ಒಪ್ಪಂದವಾಗಿ ದ್ವಿರಾಷ್ಟ್ರ ಪರಿಹಾರವನ್ನು ಭಾರತ ಬೆಂಬಲಿಸಿದ್ದು, ಎರಡು ಕಡೆ ನೇರ ಮಾತುಕತೆಯ ಮೂಲಕ ಪರಸ್ಪರ ಒಪ್ಪಿದ ಗಡಿಗಳನ್ನು ಸಾಕಾರಗೊಳಿಸಬೇಕು ಎಂದು ಭಾರತ ಗಮನಸೆಳೆದಿದೆ.

ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಯಾವುದೇ ಬಿಕ್ಕಟ್ಟುಗಳು ಭಯೋತ್ಪಾದಕರ ಕೈಗಳನ್ನು ಬಲಪಡಿಸುತ್ತದೆ ಮತ್ತು ಸಹಕಾರದ ಬಾಗಿಲನ್ನು ಮುಚ್ಚುತ್ತದೆ ಎಂದಿರುವ ಭಾರತ, ಇದು ಪ್ರದೇಶದ ಜನರ ಸುರಕ್ಷತೆ, ಸ್ಥಿರತೆ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ ಎಂದು ಹೇಳಿದೆ.

ಸಂಸತ್ತು ಮತ್ತು ಅಧ್ಯಕ್ಷೀಯ ಚುನಾವಣೆ ಸೇರಿದಂತೆ ಪ್ಯಾಲೇಸ್ತೀನಿಯನ್ ರಾಷ್ಟ್ರೀಯ ಮಂಡಳಿಗೆ ಚುನಾವಣೆಗಳನ್ನು ನಡೆಸುವ ಎರಡು ಪ್ಯಾಲೇಸ್ತೀನಿಯನ್ ರಾಜಕೀಯ ಪಕ್ಷಗಳಾದ ಫತಾಹ್ ಮತ್ತು ಹಮಾಸ್ ನಡುವಿನ ಒಪ್ಪಂದವನ್ನು ಭಾರತ ಸ್ವಾಗತಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಒಪ್ಪಂದವು ಗಾಜಾದ ಪರಿಸ್ಥಿತಿಯನ್ನು ಸಡಿಲಗೊಳಿಸಿದೆ, ಮಧ್ಯಂತರ ಒಪ್ಪಂದವೂ ಶಾಶ್ವತ ಕದನ ವಿರಾಮವಾಗಿ ಪರಿವರ್ತಿಸಲಾಗುವುದನ್ನು ಭಾರತ ನೀರೀಕ್ಷಿಸಿದ್ದು, ಇದು ಎರಡೂ ಕಡೆಗಳಲ್ಲಿ ಅಮೂಲ್ಯವಾದ ಮಾನವ ಜೀವಗಳನ್ನು ಉಳಿಸಬಹುದು ಮತ್ತು ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಭಾರತ ಸೂಚಿಸಿದೆ.

ಇದನ್ನೂ ಓದಿ: ಸರ್ವಾಧಿಕಾರಿ ಘಟಸರ್ಪಗಳು: ಅಳಿಸಲೂ, ಉಳಿಸಲೂ ನೂರೆಂಟು ನೆಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...