Homeಅಂತರಾಷ್ಟ್ರೀಯಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ಯಾವುದೇ ಬಿಕ್ಕಟ್ಟುಗಳು ಭಯೋತ್ಪಾದಕರ ಕೈಗಳನ್ನು ಬಲಪಡಿಸುತ್ತದೆ ಮತ್ತು ಸಹಕಾರದ ಬಾಗಿಲನ್ನು ಮುಚ್ಚುತ್ತದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಹೇಳಿದೆ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್ ಸೇರಿದಂತೆ ಪಶ್ಚಿಮ ಏಷ್ಯಾದ ವಿಷಯದಲ್ಲಿ ಭಾರತ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪ್ಯಾಲೆಸ್ತೀನ್ ಸಮಸ್ಯೆಗೆ ಶಾಂತಿಯುತ ಪರಿಹಾರಕ್ಕಾಗಿ ಮಾತುಕತೆ ಮುಂದುವರಿಯಬೇಕು ಎಂಬುದು ಭಾರತದ ನಿಲುವು ಎಂದು ಖಾಯಂ ಪ್ರತಿನಿಧಿ ಟಿ.ಎಸ್.ತಿರೂಮೂರ್ತಿ ಹೇಳಿದ್ದು, ಮಧ್ಯಪ್ರಾಚ್ಯದ ಪರಿಸ್ಥಿತಿ ಕುರಿತು ಭಾರತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತನ್ನ ನಿಲುವನ್ನು ಪುನರುಚ್ಚರಿಸಿತು.

ಸಂಘರ್ಷವನ್ನು ಕೊನೆಗೊಳಿಸಲು ನ್ಯಾಯಯುತ ಮತ್ತು ಸ್ವೀಕಾರಾರ್ಹ ಒಪ್ಪಂದವಾಗಿ ದ್ವಿರಾಷ್ಟ್ರ ಪರಿಹಾರವನ್ನು ಭಾರತ ಬೆಂಬಲಿಸಿದ್ದು, ಎರಡು ಕಡೆ ನೇರ ಮಾತುಕತೆಯ ಮೂಲಕ ಪರಸ್ಪರ ಒಪ್ಪಿದ ಗಡಿಗಳನ್ನು ಸಾಕಾರಗೊಳಿಸಬೇಕು ಎಂದು ಭಾರತ ಗಮನಸೆಳೆದಿದೆ.

ಇದನ್ನೂ ಓದಿ: ಸಿಂಧೂ ನದಿ ನಾಗರಿಕತೆ ನಿರ್ಮಾಣದಲ್ಲಿ ಸ್ಟೆಪ್ ಮೂಲದ ಆರ್ಯ ವೈದಿಕರ ಪಾತ್ರವಿಲ್ಲ: ಅದನ್ನು ಕಟ್ಟಿದವರು ದಕ್ಷಿಣ ಏಷಿಯನ್ನರು

ಯಾವುದೇ ಬಿಕ್ಕಟ್ಟುಗಳು ಭಯೋತ್ಪಾದಕರ ಕೈಗಳನ್ನು ಬಲಪಡಿಸುತ್ತದೆ ಮತ್ತು ಸಹಕಾರದ ಬಾಗಿಲನ್ನು ಮುಚ್ಚುತ್ತದೆ ಎಂದಿರುವ ಭಾರತ, ಇದು ಪ್ರದೇಶದ ಜನರ ಸುರಕ್ಷತೆ, ಸ್ಥಿರತೆ ಮತ್ತು ಸಮೃದ್ಧಿಗೆ ಧಕ್ಕೆ ತರುತ್ತದೆ ಎಂದು ಹೇಳಿದೆ.

ಸಂಸತ್ತು ಮತ್ತು ಅಧ್ಯಕ್ಷೀಯ ಚುನಾವಣೆ ಸೇರಿದಂತೆ ಪ್ಯಾಲೇಸ್ತೀನಿಯನ್ ರಾಷ್ಟ್ರೀಯ ಮಂಡಳಿಗೆ ಚುನಾವಣೆಗಳನ್ನು ನಡೆಸುವ ಎರಡು ಪ್ಯಾಲೇಸ್ತೀನಿಯನ್ ರಾಜಕೀಯ ಪಕ್ಷಗಳಾದ ಫತಾಹ್ ಮತ್ತು ಹಮಾಸ್ ನಡುವಿನ ಒಪ್ಪಂದವನ್ನು ಭಾರತ ಸ್ವಾಗತಿಸಿದೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಒಪ್ಪಂದವು ಗಾಜಾದ ಪರಿಸ್ಥಿತಿಯನ್ನು ಸಡಿಲಗೊಳಿಸಿದೆ, ಮಧ್ಯಂತರ ಒಪ್ಪಂದವೂ ಶಾಶ್ವತ ಕದನ ವಿರಾಮವಾಗಿ ಪರಿವರ್ತಿಸಲಾಗುವುದನ್ನು ಭಾರತ ನೀರೀಕ್ಷಿಸಿದ್ದು, ಇದು ಎರಡೂ ಕಡೆಗಳಲ್ಲಿ ಅಮೂಲ್ಯವಾದ ಮಾನವ ಜೀವಗಳನ್ನು ಉಳಿಸಬಹುದು ಮತ್ತು ಮಾತುಕತೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಭಾರತ ಸೂಚಿಸಿದೆ.

ಇದನ್ನೂ ಓದಿ: ಸರ್ವಾಧಿಕಾರಿ ಘಟಸರ್ಪಗಳು: ಅಳಿಸಲೂ, ಉಳಿಸಲೂ ನೂರೆಂಟು ನೆಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....