Homeಸಿನಿಮಾಕ್ರೀಡೆ‘ಭಾರತವೇ, ಇದು ನಿನಗಾಗಿ!’ - ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

‘ಭಾರತವೇ, ಇದು ನಿನಗಾಗಿ!’ – ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

ಭಾರತದ ಬಾಕ್ಸಿಂಗ್ ದಂತ ಕತೆ ಮೇರಿ ಕೋಮ್‌ ಅವರು, ‘ನಿಖತ್ ಜರೀನ್ ಯಾರು?’ ಎಂದು ಪ್ರಶ್ನಿಸಿದ್ದರು. ಅದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

- Advertisement -
- Advertisement -

ತೆಲಂಗಾಣದ 25 ವರ್ಷದ ‘ಬಾಕ್ಸರ್‌‌‌‌ ನಿಖತ್‌ ಜರೀನ್’ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರದಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ನಿಖತ್ ಜರೀನ್ ಅವರು 52 ಕೆಜಿ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ, ಈ ಸಾಧನೆ ಮಾಡಿದ್ದಾರೆ.

ಪಂದ್ಯದ ನಂತರ ಹೊಸ ವಿಶ್ವ ಫ್ಲೈವೇಟ್ ಚಾಂಪಿಯನ್‌ನ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಜರೀನ್ ಅವರು ತನ್ನ ಕೈಯನ್ನು ಗಾಳಿಯಲ್ಲಿ ಗುದ್ದಿ, ತನ್ನ ಎದುರಾಳಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜರೀನ್‌, ಅಂತಿಮವಾಗಿ ಇಲ್ಲಿ ತಲುಪಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಮತ್ತು ಪರಿಶ್ರಮದ ತುತ್ತತುದಿ ಇದು ಎಂದು ಹೇಳಿದ್ದು, “ಭಾರತವೇ, ಇದು ನಿನಗಾಗಿ. ನಾವಿಬ್ಬರೂ ಇದನ್ನು ಒಟ್ಟಿಗೆ ಸಾಧಿಸಿದ್ದೇವೆ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್, ಎಂ.ಸಿ. ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಗೌರವಕ್ಕೆ ನಿಖತ್‌ ಜರೀನ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

2019 ರಲ್ಲಿ, ಟೋಕಿಯೊ ಒಲಿಂಪಿಕ್ಸ್‌ನ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಿದ ನಂತರ ಭಾರತದ ದಂತಕಥೆ ಬಾಕ್ಸರ್ ಮೇರಿ ಕೋಮ್ ವಿರುದ್ಧ ನ್ಯಾಯಯುತ ವಿಚಾರಣೆಗೆ ಜರೀನ್ ಕೇಳಿದ್ದರು. ಆಗ ಅವರು “ನಿಖತ್ ಜರೀನ್ ಯಾರು?” ಎಂದು ಪ್ರಶ್ನಿಸಿದ್ದರು. ಇದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಇದಕ್ಕೂ ಮೊದಲು 2018 ರಲ್ಲಿ ಮೇರಿ ಕೋಮ್‌ ಭಾರತದ ಮೊದಲ ಚಿನ್ನವನ್ನು ಗೆದಿದ್ದರು.

ಗುರುವಾರ ತನ್ನ ಗೆಲುವಿನ ನಂತರ, ತನ್ನ ವೃತ್ತಿಜೀವನದುದ್ದಕ್ಕೂ ತನ್ನನ್ನು ಬೆಂಬಲಿಸಿದ ಎಲ್ಲಾ ದೇಶವಾಸಿಗಳಿಗೆ ಪದಕವನ್ನು ಅರ್ಪಿಸುವುದಾಗಿ ಜರೀನ್‌‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ತನ್ನ ಕನಸು ಎಂದು ಹೇಳಿದ ನಿಖತ್‌‌ ಜರೀನ್

“ನಾನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದೇನೆಯೇ? ಹಿಂದಿನಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ನನ್ನ ಕನಸಾಗಿತ್ತು. ವಿಶ್ವ ಮಟ್ಟದಲ್ಲಿ ನನ್ನ ದೇಶಕ್ಕಾಗಿ ಏನನ್ನಾದರೂ ಸಾಧಿಸುವುದು ದೊಡ್ಡ ಕನಸಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಪಟ್ಟಣದ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮುಸ್ಲಿಂ ಬಾಕ್ಸರ್ ನಿಖತ್ ಜರೀನ್‌ ಅವರು ಬಾಕ್ಸಿಂಗ್‌‌ಗೆ ಬರಲು ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Private: ಲಿವಾಕ್ ಎಂಬ ಕೊಡಗಿನ ಅತಿರೇಕವಾದಿ ಸಂಘಟನೆ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಸುಳ್ಳು ಇತಿಹಾಸ ಸೃಷ್ಟಿ

“ನಾನು ಕಷ್ಟಪಟ್ಟು ಕೆಲಸ ಮಾಡಬೇಕಾಗಿತ್ತು. ಬಾಕ್ಸಿಂಗ್ ಮಹಿಳೆಯರಿಗಾಗಿ ಅಲ್ಲ ಎಂಬ ಮಾತು ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಬೇಕಾಗಿತ್ತು. ನನ್ನ ಮುಖಕ್ಕೆ ಏನೂ ಆಗುವುದಿಲ್ಲ ಮತ್ತು ನನ್ನ ಸೌಂದರ್ಯವು ಹಾಗೇ ಇರುತ್ತದೆ ಎಂದು ನಾನು ಜನರಿಗೆ ಹೇಳಬೇಕಾಗಿತ್ತು” ಎಂದು ಅವರು ಕಳೆದ ವರ್ಷ ಕ್ರೀಡಾ ವಸ್ತುಗಳ ಬ್ರಾಂಡ್‌‌ ಅಡಿಡಾಸ್‌ನ ಅಭಿಯಾನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಹೇಳಿದ್ದರು.

“ಈ ಮಾತುಗಳು ನನಗೆ ಸವಾಲಾಗಿದೆ. ನಾನು ಅಲ್ಲಿಗೆ ಹೋಗಿ, ಬಾಕ್ಸಿಂಗ್‌‌ ಎಂಬ ಆಟವು ನೀವು ಪುರುಷನೊ ಅಥವಾ ಮಹಿಳೆಯೊ ಎಂಬುದನ್ನು ಲೆಕ್ಕಿಸುವುದಿಲ್ಲ ಎಂದು ಸಾಬೀತುಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ಜರೀನ್ 2010 ರಲ್ಲಿ 13 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಸೇರಿದರು. ಆರು ತಿಂಗಳೊಳಗೆ ಅವರು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದರು. ಅದಾಗಿ ಕೇವಲ ಒಂದು ವರ್ಷದ ನಂತರ, ಅವರು ಟರ್ಕಿಯ ಅಂಟಲ್ಯದಲ್ಲಿ ಬಾಲಕಿಯರಿಗಾಗಿ 2011 ರ ವಿಶ್ವ ಜೂನಿಯರ್ ಮತ್ತು ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನವನ್ನು ಗೆದ್ದರು.

ಗುರುವಾರ ಮತ್ತೊಮ್ಮೆ ಟರ್ಕಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ ಐತಿಹಾಸಿಕ ಗೆಲುವಿನಿಂದ ಜರೀನ್ ಅವರ ಕುಟುಂಬ ಹರ್ಷಗೊಂಡಿದೆ.

“ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವುದು ಮುಸ್ಲಿಂ ಹುಡುಗಿಯರಿಗೆ ಮತ್ತು ದೇಶದ ಪ್ರತಿಯೊಬ್ಬ ಹುಡುಗಿಯರಿಗೂ ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ನೀಡುತ್ತದೆ. ಒಂದು ಮಗು, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ತನ್ನದೇ ಆದ ದಾರಿಯನ್ನು ಆರಿಸಿಕೊಳ್ಳಬೇಕು. ನಿಖತ್ ಕೂಡಾ ತನ್ನದೇ ಆದ ದಾರಿಯನ್ನು ಆರಿಸಿಕೊಂಡಿದ್ದಾರೆ” ಎಂದು ಜರೀನ್ ಅವರ ತಂದೆ ಜಮೀಲ್ ಅಹ್ಮದ್ ಹೇಳಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಪ್ರಧಾನಿ ಮೋದಿ ಕೂಡಾ ಟ್ವೀಟ್‌ನಲ್ಲಿ ಜರೀನ್ ಅವರನ್ನು ಶ್ಲಾಘಿಸಿದ್ದಾರೆ. “ನಮ್ಮ ಬಾಕ್ಸರ್‌ಗಳು ನಮಗೆ ಹೆಮ್ಮೆ ತಂದಿದ್ದಾರೆ! ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತವಾದ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿಖತ್ ಜರೀನ್‌ಗೆ ಅಭಿನಂದನೆಗಳು” ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

“ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇತಿಹಾಸ ಪುಸ್ತಕಗಳಿಗೆ ಇದು ಒಂದು” ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಟ್ವೀಟ್ ಮಾಡಿದ್ದು, ನಿಖತ್ ಜರೀನ್ ತನ್ನ ಚಿನ್ನದ ಸರಣಿಯನ್ನು ಮುಂದುವರೆಸಿದ್ದಾಳೆ…ವೆಲ್‌ಡನ್‌ ವಿಶ್ವ ಚಾಂಪಿಯನ್” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....