Homeಸಿನಿಮಾಕ್ರೀಡೆ‘ಭಾರತವೇ, ಇದು ನಿನಗಾಗಿ!’ - ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

‘ಭಾರತವೇ, ಇದು ನಿನಗಾಗಿ!’ – ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

ಭಾರತದ ಬಾಕ್ಸಿಂಗ್ ದಂತ ಕತೆ ಮೇರಿ ಕೋಮ್‌ ಅವರು, ‘ನಿಖತ್ ಜರೀನ್ ಯಾರು?’ ಎಂದು ಪ್ರಶ್ನಿಸಿದ್ದರು. ಅದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

- Advertisement -
- Advertisement -

ತೆಲಂಗಾಣದ 25 ವರ್ಷದ ‘ಬಾಕ್ಸರ್‌‌‌‌ ನಿಖತ್‌ ಜರೀನ್’ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರದಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ನಿಖತ್ ಜರೀನ್ ಅವರು 52 ಕೆಜಿ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ, ಈ ಸಾಧನೆ ಮಾಡಿದ್ದಾರೆ.

ಪಂದ್ಯದ ನಂತರ ಹೊಸ ವಿಶ್ವ ಫ್ಲೈವೇಟ್ ಚಾಂಪಿಯನ್‌ನ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಜರೀನ್ ಅವರು ತನ್ನ ಕೈಯನ್ನು ಗಾಳಿಯಲ್ಲಿ ಗುದ್ದಿ, ತನ್ನ ಎದುರಾಳಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜರೀನ್‌, ಅಂತಿಮವಾಗಿ ಇಲ್ಲಿ ತಲುಪಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಮತ್ತು ಪರಿಶ್ರಮದ ತುತ್ತತುದಿ ಇದು ಎಂದು ಹೇಳಿದ್ದು, “ಭಾರತವೇ, ಇದು ನಿನಗಾಗಿ. ನಾವಿಬ್ಬರೂ ಇದನ್ನು ಒಟ್ಟಿಗೆ ಸಾಧಿಸಿದ್ದೇವೆ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್, ಎಂ.ಸಿ. ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಗೌರವಕ್ಕೆ ನಿಖತ್‌ ಜರೀನ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

2019 ರಲ್ಲಿ, ಟೋಕಿಯೊ ಒಲಿಂಪಿಕ್ಸ್‌ನ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಿದ ನಂತರ ಭಾರತದ ದಂತಕಥೆ ಬಾಕ್ಸರ್ ಮೇರಿ ಕೋಮ್ ವಿರುದ್ಧ ನ್ಯಾಯಯುತ ವಿಚಾರಣೆಗೆ ಜರೀನ್ ಕೇಳಿದ್ದರು. ಆಗ ಅವರು “ನಿಖತ್ ಜರೀನ್ ಯಾರು?” ಎಂದು ಪ್ರಶ್ನಿಸಿದ್ದರು. ಇದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಇದಕ್ಕೂ ಮೊದಲು 2018 ರಲ್ಲಿ ಮೇರಿ ಕೋಮ್‌ ಭಾರತದ ಮೊದಲ ಚಿನ್ನವನ್ನು ಗೆದಿದ್ದರು.

ಗುರುವಾರ ತನ್ನ ಗೆಲುವಿನ ನಂತರ, ತನ್ನ ವೃತ್ತಿಜೀವನದುದ್ದಕ್ಕೂ ತನ್ನನ್ನು ಬೆಂಬಲಿಸಿದ ಎಲ್ಲಾ ದೇಶವಾಸಿಗಳಿಗೆ ಪದಕವನ್ನು ಅರ್ಪಿಸುವುದಾಗಿ ಜರೀನ್‌‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ತನ್ನ ಕನಸು ಎಂದು ಹೇಳಿದ ನಿಖತ್‌‌ ಜರೀನ್

“ನಾನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದೇನೆಯೇ? ಹಿಂದಿನಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ನನ್ನ ಕನಸಾಗಿತ್ತು. ವಿಶ್ವ ಮಟ್ಟದಲ್ಲಿ ನನ್ನ ದೇಶಕ್ಕಾಗಿ ಏನನ್ನಾದರೂ ಸಾಧಿಸುವುದು ದೊಡ್ಡ ಕನಸಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಪಟ್ಟಣದ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮುಸ್ಲಿಂ ಬಾಕ್ಸರ್ ನಿಖತ್ ಜರೀನ್‌ ಅವರು ಬಾಕ್ಸಿಂಗ್‌‌ಗೆ ಬರಲು ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Private: ಲಿವಾಕ್ ಎಂಬ ಕೊಡಗಿನ ಅತಿರೇಕವಾದಿ ಸಂಘಟನೆ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಸುಳ್ಳು ಇತಿಹಾಸ ಸೃಷ್ಟಿ

“ನಾನು ಕಷ್ಟಪಟ್ಟು ಕೆಲಸ ಮಾಡಬೇಕಾಗಿತ್ತು. ಬಾಕ್ಸಿಂಗ್ ಮಹಿಳೆಯರಿಗಾಗಿ ಅಲ್ಲ ಎಂಬ ಮಾತು ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಬೇಕಾಗಿತ್ತು. ನನ್ನ ಮುಖಕ್ಕೆ ಏನೂ ಆಗುವುದಿಲ್ಲ ಮತ್ತು ನನ್ನ ಸೌಂದರ್ಯವು ಹಾಗೇ ಇರುತ್ತದೆ ಎಂದು ನಾನು ಜನರಿಗೆ ಹೇಳಬೇಕಾಗಿತ್ತು” ಎಂದು ಅವರು ಕಳೆದ ವರ್ಷ ಕ್ರೀಡಾ ವಸ್ತುಗಳ ಬ್ರಾಂಡ್‌‌ ಅಡಿಡಾಸ್‌ನ ಅಭಿಯಾನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಹೇಳಿದ್ದರು.

“ಈ ಮಾತುಗಳು ನನಗೆ ಸವಾಲಾಗಿದೆ. ನಾನು ಅಲ್ಲಿಗೆ ಹೋಗಿ, ಬಾಕ್ಸಿಂಗ್‌‌ ಎಂಬ ಆಟವು ನೀವು ಪುರುಷನೊ ಅಥವಾ ಮಹಿಳೆಯೊ ಎಂಬುದನ್ನು ಲೆಕ್ಕಿಸುವುದಿಲ್ಲ ಎಂದು ಸಾಬೀತುಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ಜರೀನ್ 2010 ರಲ್ಲಿ 13 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಸೇರಿದರು. ಆರು ತಿಂಗಳೊಳಗೆ ಅವರು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದರು. ಅದಾಗಿ ಕೇವಲ ಒಂದು ವರ್ಷದ ನಂತರ, ಅವರು ಟರ್ಕಿಯ ಅಂಟಲ್ಯದಲ್ಲಿ ಬಾಲಕಿಯರಿಗಾಗಿ 2011 ರ ವಿಶ್ವ ಜೂನಿಯರ್ ಮತ್ತು ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನವನ್ನು ಗೆದ್ದರು.

ಗುರುವಾರ ಮತ್ತೊಮ್ಮೆ ಟರ್ಕಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ ಐತಿಹಾಸಿಕ ಗೆಲುವಿನಿಂದ ಜರೀನ್ ಅವರ ಕುಟುಂಬ ಹರ್ಷಗೊಂಡಿದೆ.

“ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವುದು ಮುಸ್ಲಿಂ ಹುಡುಗಿಯರಿಗೆ ಮತ್ತು ದೇಶದ ಪ್ರತಿಯೊಬ್ಬ ಹುಡುಗಿಯರಿಗೂ ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ನೀಡುತ್ತದೆ. ಒಂದು ಮಗು, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ತನ್ನದೇ ಆದ ದಾರಿಯನ್ನು ಆರಿಸಿಕೊಳ್ಳಬೇಕು. ನಿಖತ್ ಕೂಡಾ ತನ್ನದೇ ಆದ ದಾರಿಯನ್ನು ಆರಿಸಿಕೊಂಡಿದ್ದಾರೆ” ಎಂದು ಜರೀನ್ ಅವರ ತಂದೆ ಜಮೀಲ್ ಅಹ್ಮದ್ ಹೇಳಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಪ್ರಧಾನಿ ಮೋದಿ ಕೂಡಾ ಟ್ವೀಟ್‌ನಲ್ಲಿ ಜರೀನ್ ಅವರನ್ನು ಶ್ಲಾಘಿಸಿದ್ದಾರೆ. “ನಮ್ಮ ಬಾಕ್ಸರ್‌ಗಳು ನಮಗೆ ಹೆಮ್ಮೆ ತಂದಿದ್ದಾರೆ! ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತವಾದ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿಖತ್ ಜರೀನ್‌ಗೆ ಅಭಿನಂದನೆಗಳು” ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

“ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇತಿಹಾಸ ಪುಸ್ತಕಗಳಿಗೆ ಇದು ಒಂದು” ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಟ್ವೀಟ್ ಮಾಡಿದ್ದು, ನಿಖತ್ ಜರೀನ್ ತನ್ನ ಚಿನ್ನದ ಸರಣಿಯನ್ನು ಮುಂದುವರೆಸಿದ್ದಾಳೆ…ವೆಲ್‌ಡನ್‌ ವಿಶ್ವ ಚಾಂಪಿಯನ್” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...