Homeಸಿನಿಮಾಕ್ರೀಡೆ‘ಭಾರತವೇ, ಇದು ನಿನಗಾಗಿ!’ - ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

‘ಭಾರತವೇ, ಇದು ನಿನಗಾಗಿ!’ – ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಬಾಕ್ಸರ್‌‌‌‌ ‘ನಿಖತ್‌ ಜರೀನ್‌‌’

ಭಾರತದ ಬಾಕ್ಸಿಂಗ್ ದಂತ ಕತೆ ಮೇರಿ ಕೋಮ್‌ ಅವರು, ‘ನಿಖತ್ ಜರೀನ್ ಯಾರು?’ ಎಂದು ಪ್ರಶ್ನಿಸಿದ್ದರು. ಅದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

- Advertisement -
- Advertisement -

ತೆಲಂಗಾಣದ 25 ವರ್ಷದ ‘ಬಾಕ್ಸರ್‌‌‌‌ ನಿಖತ್‌ ಜರೀನ್’ ಅವರು ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಐದನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುರುವಾರದಂದು ಟರ್ಕಿಯ ಇಸ್ತಾನ್‌ಬುಲ್‌ನಲ್ಲಿ ನಡೆದ ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ನಲ್ಲಿ ನಿಖತ್ ಜರೀನ್ ಅವರು 52 ಕೆಜಿ ಫ್ಲೈವೇಟ್ ವಿಭಾಗದಲ್ಲಿ ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ಅವರನ್ನು ಸೋಲಿಸಿ, ಈ ಸಾಧನೆ ಮಾಡಿದ್ದಾರೆ.

ಪಂದ್ಯದ ನಂತರ ಹೊಸ ವಿಶ್ವ ಫ್ಲೈವೇಟ್ ಚಾಂಪಿಯನ್‌ನ ಹೆಸರನ್ನು ಘೋಷಣೆ ಮಾಡುತ್ತಿದ್ದಂತೆ, ಜರೀನ್ ಅವರು ತನ್ನ ಕೈಯನ್ನು ಗಾಳಿಯಲ್ಲಿ ಗುದ್ದಿ, ತನ್ನ ಎದುರಾಳಿಯನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿರುವ ಜರೀನ್‌, ಅಂತಿಮವಾಗಿ ಇಲ್ಲಿ ತಲುಪಿದೆ. ಹಲವು ವರ್ಷಗಳ ಕಠಿಣ ಪರಿಶ್ರಮ ಮತ್ತು ಪರಿಶ್ರಮದ ತುತ್ತತುದಿ ಇದು ಎಂದು ಹೇಳಿದ್ದು, “ಭಾರತವೇ, ಇದು ನಿನಗಾಗಿ. ನಾವಿಬ್ಬರೂ ಇದನ್ನು ಒಟ್ಟಿಗೆ ಸಾಧಿಸಿದ್ದೇವೆ” ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಮಾಜಿ ಜೂನಿಯರ್ ವಿಶ್ವ ಚಾಂಪಿಯನ್, ಎಂ.ಸಿ. ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌‌ಎಲ್ ಮತ್ತು ಲೇಖಾ ಕೆಸಿ ನಂತರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಗೌರವಕ್ಕೆ ನಿಖತ್‌ ಜರೀನ್ ಪಾತ್ರರಾಗಿದ್ದಾರೆ.

ಇದನ್ನೂ ಓದಿ: ಕೆಲವು ಕ್ರೀಡೆಗಳು ಸೃಷ್ಟಿಸುವ ಹೈಪರ್ ನ್ಯಾಷನಲಿಸಂ ಮತ್ತು ಕ್ರೀಡಾಪಟುಗಳ ಜಾತಿನಿಂದನೆ – ಇವುಗಳ ನಡುವೆ ಸಂಭ್ರಮಿಸುವುದಾದರೂ ಹೇಗೆ?

2019 ರಲ್ಲಿ, ಟೋಕಿಯೊ ಒಲಿಂಪಿಕ್ಸ್‌ನ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ಅವಕಾಶ ನಿರಾಕರಿಸಿದ ನಂತರ ಭಾರತದ ದಂತಕಥೆ ಬಾಕ್ಸರ್ ಮೇರಿ ಕೋಮ್ ವಿರುದ್ಧ ನ್ಯಾಯಯುತ ವಿಚಾರಣೆಗೆ ಜರೀನ್ ಕೇಳಿದ್ದರು. ಆಗ ಅವರು “ನಿಖತ್ ಜರೀನ್ ಯಾರು?” ಎಂದು ಪ್ರಶ್ನಿಸಿದ್ದರು. ಇದಾಗಿ ಮೂರು ವರ್ಷಗಳ ನಂತರ, ಜರೀನ್ ವಿಶ್ವ ಚಾಂಪಿಯನ್ ಆಗಿದ್ದಾರೆ.

ಇದಕ್ಕೂ ಮೊದಲು 2018 ರಲ್ಲಿ ಮೇರಿ ಕೋಮ್‌ ಭಾರತದ ಮೊದಲ ಚಿನ್ನವನ್ನು ಗೆದಿದ್ದರು.

ಗುರುವಾರ ತನ್ನ ಗೆಲುವಿನ ನಂತರ, ತನ್ನ ವೃತ್ತಿಜೀವನದುದ್ದಕ್ಕೂ ತನ್ನನ್ನು ಬೆಂಬಲಿಸಿದ ಎಲ್ಲಾ ದೇಶವಾಸಿಗಳಿಗೆ ಪದಕವನ್ನು ಅರ್ಪಿಸುವುದಾಗಿ ಜರೀನ್‌‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ತನ್ನ ಕನಸು ಎಂದು ಹೇಳಿದ ನಿಖತ್‌‌ ಜರೀನ್

“ನಾನು ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗಿದ್ದೇನೆಯೇ? ಹಿಂದಿನಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್ ಆಗುವುದು ನನ್ನ ಕನಸಾಗಿತ್ತು. ವಿಶ್ವ ಮಟ್ಟದಲ್ಲಿ ನನ್ನ ದೇಶಕ್ಕಾಗಿ ಏನನ್ನಾದರೂ ಸಾಧಿಸುವುದು ದೊಡ್ಡ ಕನಸಾಗಿದೆ” ಎಂದು ಅವರು ಹೇಳಿದ್ದಾರೆ.

ತೆಲಂಗಾಣದ ನಿಜಾಮಾಬಾದ್ ಪಟ್ಟಣದ ಮಧ್ಯಮ ವರ್ಗದ ಕುಟುಂಬದಿಂದ ಬಂದಿರುವ ಮುಸ್ಲಿಂ ಬಾಕ್ಸರ್ ನಿಖತ್ ಜರೀನ್‌ ಅವರು ಬಾಕ್ಸಿಂಗ್‌‌ಗೆ ಬರಲು ಹಲವಾರು ಅಡೆತಡೆಗಳನ್ನು ಎದುರಿಸಬೇಕಾಯಿತು ಎಂದು ಹೇಳಿದ್ದಾರೆ.

ಇದನ್ನೂ ಓದಿ: Private: ಲಿವಾಕ್ ಎಂಬ ಕೊಡಗಿನ ಅತಿರೇಕವಾದಿ ಸಂಘಟನೆ ಮತ್ತು ಟಿಪ್ಪುಸುಲ್ತಾನ್ ಬಗ್ಗೆ ಸುಳ್ಳು ಇತಿಹಾಸ ಸೃಷ್ಟಿ

“ನಾನು ಕಷ್ಟಪಟ್ಟು ಕೆಲಸ ಮಾಡಬೇಕಾಗಿತ್ತು. ಬಾಕ್ಸಿಂಗ್ ಮಹಿಳೆಯರಿಗಾಗಿ ಅಲ್ಲ ಎಂಬ ಮಾತು ಸೇರಿದಂತೆ ಹಲವು ಅಡೆತಡೆಗಳನ್ನು ನಿವಾರಿಸಬೇಕಾಗಿತ್ತು. ನನ್ನ ಮುಖಕ್ಕೆ ಏನೂ ಆಗುವುದಿಲ್ಲ ಮತ್ತು ನನ್ನ ಸೌಂದರ್ಯವು ಹಾಗೇ ಇರುತ್ತದೆ ಎಂದು ನಾನು ಜನರಿಗೆ ಹೇಳಬೇಕಾಗಿತ್ತು” ಎಂದು ಅವರು ಕಳೆದ ವರ್ಷ ಕ್ರೀಡಾ ವಸ್ತುಗಳ ಬ್ರಾಂಡ್‌‌ ಅಡಿಡಾಸ್‌ನ ಅಭಿಯಾನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಹೇಳಿದ್ದರು.

“ಈ ಮಾತುಗಳು ನನಗೆ ಸವಾಲಾಗಿದೆ. ನಾನು ಅಲ್ಲಿಗೆ ಹೋಗಿ, ಬಾಕ್ಸಿಂಗ್‌‌ ಎಂಬ ಆಟವು ನೀವು ಪುರುಷನೊ ಅಥವಾ ಮಹಿಳೆಯೊ ಎಂಬುದನ್ನು ಲೆಕ್ಕಿಸುವುದಿಲ್ಲ ಎಂದು ಸಾಬೀತುಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ತಮಿಳು ಸಿನಿಮಾಗಳು ಐತಿಹಾಸಿಕ ಪ್ರತಿರೋಧ ತೋರಿವೆ: ಕೋಟಗಾನಹಳ್ಳಿ ರಾಮಯ್ಯ

ಜರೀನ್ 2010 ರಲ್ಲಿ 13 ನೇ ವಯಸ್ಸಿನಲ್ಲಿ ಬಾಕ್ಸಿಂಗ್ ಸೇರಿದರು. ಆರು ತಿಂಗಳೊಳಗೆ ಅವರು ರಾಜ್ಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದರು. ಅದಾಗಿ ಕೇವಲ ಒಂದು ವರ್ಷದ ನಂತರ, ಅವರು ಟರ್ಕಿಯ ಅಂಟಲ್ಯದಲ್ಲಿ ಬಾಲಕಿಯರಿಗಾಗಿ 2011 ರ ವಿಶ್ವ ಜೂನಿಯರ್ ಮತ್ತು ಯೂತ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನವನ್ನು ಗೆದ್ದರು.

ಗುರುವಾರ ಮತ್ತೊಮ್ಮೆ ಟರ್ಕಿಯಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನ ಐತಿಹಾಸಿಕ ಗೆಲುವಿನಿಂದ ಜರೀನ್ ಅವರ ಕುಟುಂಬ ಹರ್ಷಗೊಂಡಿದೆ.

“ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆಲ್ಲುವುದು ಮುಸ್ಲಿಂ ಹುಡುಗಿಯರಿಗೆ ಮತ್ತು ದೇಶದ ಪ್ರತಿಯೊಬ್ಬ ಹುಡುಗಿಯರಿಗೂ ಜೀವನದಲ್ಲಿ ದೊಡ್ಡ ಸಾಧನೆ ಮಾಡುವ ಸ್ಫೂರ್ತಿಯನ್ನು ನೀಡುತ್ತದೆ. ಒಂದು ಮಗು, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ತನ್ನದೇ ಆದ ದಾರಿಯನ್ನು ಆರಿಸಿಕೊಳ್ಳಬೇಕು. ನಿಖತ್ ಕೂಡಾ ತನ್ನದೇ ಆದ ದಾರಿಯನ್ನು ಆರಿಸಿಕೊಂಡಿದ್ದಾರೆ” ಎಂದು ಜರೀನ್ ಅವರ ತಂದೆ ಜಮೀಲ್ ಅಹ್ಮದ್ ಹೇಳಿದ್ದಾರೆಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಪ್ರಧಾನಿ ಮೋದಿ ಕೂಡಾ ಟ್ವೀಟ್‌ನಲ್ಲಿ ಜರೀನ್ ಅವರನ್ನು ಶ್ಲಾಘಿಸಿದ್ದಾರೆ. “ನಮ್ಮ ಬಾಕ್ಸರ್‌ಗಳು ನಮಗೆ ಹೆಮ್ಮೆ ತಂದಿದ್ದಾರೆ! ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತವಾದ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ನಿಖತ್ ಜರೀನ್‌ಗೆ ಅಭಿನಂದನೆಗಳು” ಎಂದು ಮೋದಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

“ಇದೇ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕಾಗಿ ಮನೀಶಾ ಮೌನ್ ಮತ್ತು ಪರ್ವೀನ್ ಹೂಡಾ ಅವರನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

“ಇತಿಹಾಸ ಪುಸ್ತಕಗಳಿಗೆ ಇದು ಒಂದು” ಎಂದು ಭಾರತೀಯ ಬಾಕ್ಸಿಂಗ್ ಫೆಡರೇಶನ್ ಟ್ವೀಟ್ ಮಾಡಿದ್ದು, ನಿಖತ್ ಜರೀನ್ ತನ್ನ ಚಿನ್ನದ ಸರಣಿಯನ್ನು ಮುಂದುವರೆಸಿದ್ದಾಳೆ…ವೆಲ್‌ಡನ್‌ ವಿಶ್ವ ಚಾಂಪಿಯನ್” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...