Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...