Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...