Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...