Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...