Homeಮುಖಪುಟಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

ಟ್ರಂಪ್ ಎಚ್ಚರಿಕೆ ನಡುವೆಯೂ ರಷ್ಯಾ ತೈಲ ಆಮದು ಮುಂದುವರಿಕೆ: ಭಾರತೀಯ ಹಿರಿಯ ಅಧಿಕಾರಿಗಳು

- Advertisement -
- Advertisement -

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ಮುಂದುವರಿಸಲಿದೆ ಎಂದು ಭಾರತ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಷಯದ ಸೂಕ್ಷ್ಮತೆಯ ಕಾರಣದಿಂದ ಈ ಮೂಲದ ಅಧಿಕಾರಿಗಳು ತಮ್ಮ ಹೆಸರನ್ನು ಬಹಿರಂಗಪಡಿಸಲು ಅವರು ಬಯಸಿಲ್ಲವೆನ್ನಲಾಗಿದೆ.

“ಇವು ದೀರ್ಘಕಾಲೀನ ತೈಲ ಒಪ್ಪಂದಗಳು. ಒಂದೇ ದಿನದಲ್ಲಿ ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದು ಸುಲಭವಲ್ಲ” ಎಂದು ಸರಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ಟ್ರಂಪ್ ಅವರು, ರಷ್ಯಾ ಶಸ್ತ್ರಾಸ್ತ್ರ ಮತ್ತು ತೈಲವನ್ನು ಖರೀದಿಸುವ ಭಾರತದ ಮೇಲೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಸೂಚಿಸಿದ್ದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಭಾರತವು ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುತ್ತಿಲ್ಲ ಎಂದು ತಾನು ಕೇಳಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ತದ್ವಿರುದ್ಧವಾಗಿ, ಶನಿವಾರದಂದು ನ್ಯೂಯಾರ್ಕ್ ಟೈಮ್ಸ್ ಇಬ್ಬರು ಅನಾಮಧೇಯ ಹಿರಿಯ ಭಾರತೀಯ ಅಧಿಕಾರಿಗಳನ್ನು ಉಲ್ಲೇಖಿಸಿ, ಭಾರತ ಸರ್ಕಾರದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ವರದಿ ಮಾಡಿದೆ. ರಷ್ಯಾದಿಂದ ಆಮದುಗಳನ್ನು ಕಡಿಮೆ ಮಾಡಲು ಭಾರತ ಸರ್ಕಾರ ತೈಲ ಕಂಪನಿಗಳಿಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದೇ ವಾರ ರಾಯಿಟರ್ಸ್ ವರದಿ ಮಾಡಿದಂತೆ, ಜುಲೈನಲ್ಲಿ ರಷ್ಯಾ ತೈಲದ ರಿಯಾಯಿತಿ ಕಡಿಮೆಯಾದ ನಂತರ ಭಾರತದ ಸರ್ಕಾರಿ ಸ್ವಾಮ್ಯದ ರಿಫೈನರಿಗಳು ಕಳೆದ ವಾರ ರಷ್ಯಾ ತೈಲ ಖರೀದಿ ನಿಲ್ಲಿಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ನಮ್ಮ ಇಂಧನ ಅವಶ್ಯಕತೆಗಳಿಗಾಗಿ ಲಭ್ಯವಿರುವ ಮಾರುಕಟ್ಟೆಗಳು, ಕೊಡುಗೆಗಳು ಹಾಗೂ ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಪರಿಗಣಿಸುತ್ತೇವೆ” ಎಂದು ಶುಕ್ರವಾರದ ನಿಯಮಿತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಜೈಸ್ವಾಲ್ ಅವರು, ಭಾರತವು ರಷ್ಯಾದೊಂದಿಗೆ “ಸ್ಥಿರ ಮತ್ತು ಕಾಲಾತೀತ ಪಾಲುದಾರಿಕೆ”ಯನ್ನು ಹೊಂದಿದೆ ಮತ್ತು ವಿವಿಧ ರಾಷ್ಟ್ರಗಳೊಂದಿಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮೂರನೇ ದೇಶದ ದೃಷ್ಟಿಕೋನದಿಂದ ನೋಡಬಾರದು ಎಂದು ಹೇಳಿದರು.

ವಾಷಿಂಗ್ಟನ್‌ನ ಶ್ವೇತಭವನ ಈ ಕುರಿತು ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿಯಾಯಿತಿ ಕಡಿಮೆ ಆದ ಕಾರಣ ಖರೀದಿ ನಿಲುಗಡೆ

ರಷ್ಯಾ ತೈಲದ ರಿಯಾಯಿತಿ 2022ರಿಂದಲೇ ಇಳಿದಿದ್ದು, ಇದು ಪಾಶ್ಚಿಮಾತ್ಯ ನಿರ್ಬಂಧಗಳು ಹೇರಿದಾಗಿನಿಂದಲೇ ಅತ್ಯಂತ ಕಡಿಮೆ ಮಟ್ಟಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ರಷ್ಯನ್ ರಫ್ತು ಮತ್ತು ಸ್ಥಿರ ಬೇಡಿಕೆಯಿಂದಾಗಿ ಈ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ, ದೇಶದ ಸರ್ಕಾರಿ ರಿಫೈನರಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (HPCL), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ (BPCL) ಮತ್ತು ಮಂಗಳೂರು ರಿಫೈನರಿ ಪೆಟ್ರೋಕೆಮಿಕಲ್ ಲಿಮಿಟೆಡ್ (MRPL), ಕಳೆದ ಒಂದು ವಾರದಿಂದ ರಷ್ಯಾ ಕಚ್ಚಾ ತೈಲ ಖರೀದಿಗೆ ಮುಂದಾಗಿಲ್ಲ ಎಂದು ರಿಫೈನರಿಗಳ ಖರೀದಿ ಯೋಜನೆಗಳ ಬಗ್ಗೆ ತಿಳಿದಿರುವ ನಾಲ್ಕು ಮೂಲಗಳು ರಾಯಿಟರ್ಸ್‌ಗೆ ತಿಳಿಸಿವೆ.

ಭಾರತದ ಅಗ್ರ ತೈಲ ಪೂರೈಕೆದಾರ

ಜುಲೈ 14ರಂದು, ರಷ್ಯಾ ಉಕ್ರೇನ್‌ನೊಂದಿಗೆ ಶಾಂತಿ ಒಪ್ಪಂದಕ್ಕೆ ಬರದಿದ್ದರೆ ರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ 100% ಸುಂಕ ವಿಧಿಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದರು. ಭಾರತಕ್ಕೆ ರಷ್ಯಾ ಪ್ರಮುಖ ತೈಲ ಪೂರೈಕೆದಾರ ರಾಷ್ಟ್ರವಾಗಿದ್ದು, ಭಾರತದ ಒಟ್ಟು ತೈಲ ಪೂರೈಕೆಯಲ್ಲಿ ಶೇಕಡಾ 35ರಷ್ಟು ಪಾಲು ಹೊಂದಿದೆ.

2025ರ ಮೊದಲ ಆರು ತಿಂಗಳಲ್ಲಿ, ರಷ್ಯಾ ಭಾರತಕ್ಕೆ ಅಗ್ರ ತೈಲ ಪೂರೈಕೆದಾರನಾಗಿ ಮುಂದುವರಿದಿದ್ದು, ಇರಾಕ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಂತರದ ಸ್ಥಾನಗಳಲ್ಲಿವೆ. ಈ ವರ್ಷದ ಜನವರಿ-ಜೂನ್ ಅವಧಿಯಲ್ಲಿ ಭಾರತವು ಪ್ರತಿದಿನ ಸುಮಾರು 1.75 ದಶಲಕ್ಷ ಬ್ಯಾರೆಲ್‌ ರಷ್ಯಾ ತೈಲ ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 1% ಹೆಚ್ಚಳವಾಗಿದೆ ಎಂದು ರಾಯಿಟರ್ಸ್‌ಗೆ ಲಭ್ಯವಾದ ದತ್ತಾಂಶಗಳು ತೋರಿಸುತ್ತವೆ.

ರಷ್ಯಾ ತೈಲದ ಪ್ರಮುಖ ಖರೀದಿದಾರನಾದ ನಯಾರಾ ಎನರ್ಜಿ (Nayara Energy) ಇತ್ತೀಚೆಗೆ ಯುರೋಪಿಯನ್ ಯೂನಿಯನ್ (EU) ನಿಂದ ನಿರ್ಬಂಧಗಳಿಗೆ ಒಳಗಾಗಿದೆ. ಏಕೆಂದರೆ ಈ ರಿಫೈನರಿ ರಷ್ಯಾದ ತೈಲ ಸಂಸ್ಥೆಯಾದ ರೋಸ್ನೆಫ್ಟ್ (Rosneft) ಸೇರಿದಂತೆ ರಷ್ಯನ್ ಸಂಸ್ಥೆಗಳ ಬಹುಪಾಲು ಒಡೆತನದಲ್ಲಿದೆ. ಕಳೆದ ತಿಂಗಳು, ಇಯೂ ನಿರ್ಬಂಧಗಳ ನಂತರ ನಯಾರಾ ಎನರ್ಜಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ರಾಜೀನಾಮೆ ನೀಡಿದ್ದು, ಕಂಪನಿಯ ಹಿರಿಯ ಅಧಿಕಾರಿಯಾದ ಸೆರ್ಗೆ ಡೆನಿಸೊವ್ (Sergey Denisov) ಅವರನ್ನು ಸಿಇಒ ಆಗಿ ನೇಮಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಇದೇ ತಿಂಗಳ ಕೊನೆಯಲ್ಲಿ, ಹೊಸ ಇಯೂ ನಿರ್ಬಂಧಗಳಿಂದಾಗಿ ನಯಾರಾ ಎನರ್ಜಿಯಿಂದ ಹೊರಬಿದ್ದ ತೈಲ ಉತ್ಪನ್ನಗಳನ್ನು ಹೊತ್ತ ಮೂರು ಹಡಗುಗಳು ಇನ್ನೂ ತಮ್ಮ ಸರಕುಗಳನ್ನು ಇಳಿಸಲು ಸಾಧ್ಯವಾಗಿಲ್ಲ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಜ್ಮೀರ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ದರ್ಗಾ ಪ್ರದೇಶದ 150ಕ್ಕೂ ಹೆಚ್ಚು ಅನಧಿಕೃತ ಮಳಿಗೆಗಳು ನೆಲಸಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...