Homeಕ್ರೀಡೆಕ್ರಿಕೆಟ್ಅಕ್ಟೋಬರ್ 23 ರಂದು ಪಾಕ್ ಎದುರು ಸೆಣಸಲಿರುವ ಭಾರತ: ತಂಡ ಸೇರಿಕೊಂಡ ಶಮಿ, ಸಿರಾಜ್, ಶಾರ್ದೂಲ್

ಅಕ್ಟೋಬರ್ 23 ರಂದು ಪಾಕ್ ಎದುರು ಸೆಣಸಲಿರುವ ಭಾರತ: ತಂಡ ಸೇರಿಕೊಂಡ ಶಮಿ, ಸಿರಾಜ್, ಶಾರ್ದೂಲ್

- Advertisement -
- Advertisement -

ಅಕ್ಟೋಬರ್ 16ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 23ರಂದು ಎದುರಿಸಲಿದೆ. ಈ ಸಂದರ್ಭದಲ್ಲಿಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಸುದ್ದಿಯೊಂದು ಅಪ್ಪಳಿಸಿದೆ. ಜಸ್ಪ್ರಿತ್ ಬೂಮ್ರ ಸ್ಥಾನಕ್ಕೆ ಆಯ್ಕೆಯಾಗಿದ್ದ ಭಾರತದ ವೇಗದ ಬೌಲರ್ ದೀಪಕ್ ಚಹರ್ ಸಹ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ದೀಪಕ್ ಚಹರ್ ಫಿಟ್ ಆಗಲು ಮತ್ತಷ್ಟು ಸಮಯ ಬೇಕು. ಅವರ ಹಿಮ್ಮಡಿ ಗಾಯ ಗುಣಮುಖವಾಗಿದೆ. ಆದರೆ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದೆ. ಅದರಿಂದ ಅವರು ಟೂರ್ನಿಯಿಂದ ಹೊರಗುಳಿಯುವುದು ಅನಿವಾರ್ಯ ಎನ್ನಲಾಗಿದೆ. ಹಾಗಾಗಿ ಭಾರತದ ವಿಶ್ವಕಪ್ ತಂಡಕ್ಕೆ ವೇಗದ ಬೌಲರ್‌ಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ ಮತ್ತು ಶಾರ್ದೂಲ್ ಠಾಕೂರ್ ಜೊತೆಗೂಡಿದ್ದಾರೆ.

ಬೂಮ್ರ ಗಾಯದ ಕಾರಣದಿಂದಾಗಿ ಏಷ್ಯಾಕಪ್‌ನಲ್ಲಿಯೂ ಕಣಕ್ಕಿಳಿದಿರಲಿಲ್ಲ. ಏಷ್ಯಾ ಕಪ್‌ನಲ್ಲಿ ಭಾರತದ ಬೌಲಿಂಗ್ ಕೊರತೆಯಿಂದಾಗಿಯೇ ಭಾರತವು ಫೈನಲ್‌ ತಲುಪಲು ಸಾಧ್ಯವಾಗಿರಲಿಲ್ಲ. ಆನಂತರ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳನ್ನು ಬೂಮ್ರ ಆಡಿದ್ದರು. ಯಾರ್ಕರ್‌ಗಳಿಗೆ ಖ್ಯಾತಿಯಾಗಿರುವ ಬೂಮ್ರ ಭಾರತದ ಬೌಲಿಂಗ್ ಬೆನ್ನೆಲುಬು ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಿಂಚ್‌ ಅವರನ್ನು ಯಾರ್ಕರ್‌ ಬೌಲ್ ಹಾಕಿ ಬೌಲ್ಡ್ ಮಾಡಿದಾಗ ಸ್ವತಃ ಫಿಂಚ್ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದ್ದರು.

ಅಂತಿಮ ಓವರ್‌ಗಳಲ್ಲಿ ಕಳಪೆ ಬೌಲಿಂಗ್ ಪ್ರದರ್ಶನವು ಭಾರತ ತಂಡವನ್ನು ಕಾಡುತ್ತಿದೆ. ಭುವನೇಶ್ವರ್ ಕುಮಾರ್ ಅಂತಿಮ ಓವರ್‌ಗಳಲ್ಲಿ ವಿಫಲರಾಗಿದ್ದಾರೆ. ಕೆಲವೊಮ್ಮೆ ಹರ್ಷಲ್ ಪಟೇಲ್ ಸಹ ದುಬಾರಿಯೆನಿಸಿದ್ದಾರೆ. ಇದು ತಂಡದ ನಾಯಕ ರೋಹಿತ್ ಶರ್ಮಾರನ್ನು ಚಿಂತೆಗೀಡುಮಾಡಿದೆ. ಕಳೆದ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ವಿಫಲವಾಗಿದ್ದರೆ ಈಗ ಸದ್ಯ ಅಂತಿಮ ಓವರ್‌ಗಳ ಬೌಲಿಂಗ್ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಡುವೆಯ ಭರವಸೆಯ ಆಟಗಾರರಾದ ಜಸ್ಪ್ರಿತ್ ಬೂಮ್ರ ಮತ್ತು ದೀಪಕ್ ಚಹರ್ ಹೊರಗುಳಿದಿದ್ದಾರೆ. ಅವರ ಸ್ಥಾನವನ್ನು ಉಳಿದ ವೇಗದ ಬೌಲರ್‌ಗಳು ಹೇಗೆ ನಿಭಾಯಿಸುತ್ತಾರೆ ನೋಡಬೇಕಿದೆ.

ಇದನ್ನೂ ಓದಿ: ಕ್ರಿಕೆಟ್, ಕಾಮೆಂಟ್ರಿ ಮತ್ತು ಭಾಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...