Homeಕ್ರೀಡೆಕ್ರಿಕೆಟ್ಅಕ್ಟೋಬರ್ 23 ರಂದು ಪಾಕ್ ಎದುರು ಸೆಣಸಲಿರುವ ಭಾರತ: ತಂಡ ಸೇರಿಕೊಂಡ ಶಮಿ, ಸಿರಾಜ್, ಶಾರ್ದೂಲ್

ಅಕ್ಟೋಬರ್ 23 ರಂದು ಪಾಕ್ ಎದುರು ಸೆಣಸಲಿರುವ ಭಾರತ: ತಂಡ ಸೇರಿಕೊಂಡ ಶಮಿ, ಸಿರಾಜ್, ಶಾರ್ದೂಲ್

- Advertisement -
- Advertisement -

ಅಕ್ಟೋಬರ್ 16ರಿಂದ ಆರಂಭವಾಗುವ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 23ರಂದು ಎದುರಿಸಲಿದೆ. ಈ ಸಂದರ್ಭದಲ್ಲಿಯೇ ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಸುದ್ದಿಯೊಂದು ಅಪ್ಪಳಿಸಿದೆ. ಜಸ್ಪ್ರಿತ್ ಬೂಮ್ರ ಸ್ಥಾನಕ್ಕೆ ಆಯ್ಕೆಯಾಗಿದ್ದ ಭಾರತದ ವೇಗದ ಬೌಲರ್ ದೀಪಕ್ ಚಹರ್ ಸಹ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಟಿ20 ವಿಶ್ವಕಪ್ ಕ್ರಿಕೆಟ್‌ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ದೀಪಕ್ ಚಹರ್ ಫಿಟ್ ಆಗಲು ಮತ್ತಷ್ಟು ಸಮಯ ಬೇಕು. ಅವರ ಹಿಮ್ಮಡಿ ಗಾಯ ಗುಣಮುಖವಾಗಿದೆ. ಆದರೆ ಬೆನ್ನು ನೋವಿನ ಸಮಸ್ಯೆ ಹೆಚ್ಚಾಗಿದೆ. ಅದರಿಂದ ಅವರು ಟೂರ್ನಿಯಿಂದ ಹೊರಗುಳಿಯುವುದು ಅನಿವಾರ್ಯ ಎನ್ನಲಾಗಿದೆ. ಹಾಗಾಗಿ ಭಾರತದ ವಿಶ್ವಕಪ್ ತಂಡಕ್ಕೆ ವೇಗದ ಬೌಲರ್‌ಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ ಮತ್ತು ಶಾರ್ದೂಲ್ ಠಾಕೂರ್ ಜೊತೆಗೂಡಿದ್ದಾರೆ.

ಬೂಮ್ರ ಗಾಯದ ಕಾರಣದಿಂದಾಗಿ ಏಷ್ಯಾಕಪ್‌ನಲ್ಲಿಯೂ ಕಣಕ್ಕಿಳಿದಿರಲಿಲ್ಲ. ಏಷ್ಯಾ ಕಪ್‌ನಲ್ಲಿ ಭಾರತದ ಬೌಲಿಂಗ್ ಕೊರತೆಯಿಂದಾಗಿಯೇ ಭಾರತವು ಫೈನಲ್‌ ತಲುಪಲು ಸಾಧ್ಯವಾಗಿರಲಿಲ್ಲ. ಆನಂತರ ಆಸ್ಟ್ರೇಲಿಯಾ ವಿರುದ್ಧ 2 ಪಂದ್ಯಗಳನ್ನು ಬೂಮ್ರ ಆಡಿದ್ದರು. ಯಾರ್ಕರ್‌ಗಳಿಗೆ ಖ್ಯಾತಿಯಾಗಿರುವ ಬೂಮ್ರ ಭಾರತದ ಬೌಲಿಂಗ್ ಬೆನ್ನೆಲುಬು ಆಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಿಂಚ್‌ ಅವರನ್ನು ಯಾರ್ಕರ್‌ ಬೌಲ್ ಹಾಕಿ ಬೌಲ್ಡ್ ಮಾಡಿದಾಗ ಸ್ವತಃ ಫಿಂಚ್ ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದ್ದರು.

ಅಂತಿಮ ಓವರ್‌ಗಳಲ್ಲಿ ಕಳಪೆ ಬೌಲಿಂಗ್ ಪ್ರದರ್ಶನವು ಭಾರತ ತಂಡವನ್ನು ಕಾಡುತ್ತಿದೆ. ಭುವನೇಶ್ವರ್ ಕುಮಾರ್ ಅಂತಿಮ ಓವರ್‌ಗಳಲ್ಲಿ ವಿಫಲರಾಗಿದ್ದಾರೆ. ಕೆಲವೊಮ್ಮೆ ಹರ್ಷಲ್ ಪಟೇಲ್ ಸಹ ದುಬಾರಿಯೆನಿಸಿದ್ದಾರೆ. ಇದು ತಂಡದ ನಾಯಕ ರೋಹಿತ್ ಶರ್ಮಾರನ್ನು ಚಿಂತೆಗೀಡುಮಾಡಿದೆ. ಕಳೆದ ವಿಶ್ವಕಪ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳು ವಿಫಲವಾಗಿದ್ದರೆ ಈಗ ಸದ್ಯ ಅಂತಿಮ ಓವರ್‌ಗಳ ಬೌಲಿಂಗ್ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಡುವೆಯ ಭರವಸೆಯ ಆಟಗಾರರಾದ ಜಸ್ಪ್ರಿತ್ ಬೂಮ್ರ ಮತ್ತು ದೀಪಕ್ ಚಹರ್ ಹೊರಗುಳಿದಿದ್ದಾರೆ. ಅವರ ಸ್ಥಾನವನ್ನು ಉಳಿದ ವೇಗದ ಬೌಲರ್‌ಗಳು ಹೇಗೆ ನಿಭಾಯಿಸುತ್ತಾರೆ ನೋಡಬೇಕಿದೆ.

ಇದನ್ನೂ ಓದಿ: ಕ್ರಿಕೆಟ್, ಕಾಮೆಂಟ್ರಿ ಮತ್ತು ಭಾಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...