ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ಎರಡು ತಿಂಗಳ ನಂತರ, ಅಫ್ಘಾನಿಸ್ಥಾನದ ಬಗ್ಗೆ ನವೆಂಬರ್ 10 ರಂದು ಪ್ರಾದೇಶಿಕ ಭದ್ರತಾ ಸಂವಾದವನ್ನು ಆಯೋಜಿಸಲು ಭಾರತ ಸಜ್ಜಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್ಎಸ್ಎ) ಮಟ್ಟದಲ್ಲಿ ಸಭೆ ನಡೆಯಲಿದ್ದು, ದೇಶದ ಎನ್ಎಸ್ಎ ಮುಖ್ಯಸ್ಥ ಅಜಿತ್ ದೋವಲ್ ಇದರ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಭೆಗೆ ಭಾರತವು ರಷ್ಯಾ, ಇರಾನ್, ಚೀನಾ, ಪಾಕಿಸ್ತಾನ, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್ನ ಎನ್ಎಸ್ಎಗಳನ್ನು ಔಪಚಾರಿಕವಾಗಿ ಆಹ್ವಾನಿಸಿತ್ತು.
ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮೈತ್ರಿಗಳು: ಇಲ್ಲಿಂದ ಮುಂದೇನು?
ಭಾರತದ ಆಹ್ವಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಷ್ಯಾ ಮತ್ತು ಇರಾನ್ ಸೇರಿದಂತೆ ಹಲವಾರು ದೇಶಗಳು ಸಭೆಯಲ್ಲಿ ಭಾಗವಹಿಸುವಿಕೆಯನ್ನು ದೃಢಪಡಿಸಿವೆ. ಆದರೆ ಪಾಕಿಸ್ತಾನವು ಆಹ್ವಾನವನ್ನು ತಿರಸ್ಕರಿಸಿದ್ದು ಮತ್ತು ಚೀನಾ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇತರ ದೇಶಗಳ ಈ ಪ್ರತಿಕ್ರಿಯೆಯು ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಪ್ರಾದೇಶಿಕ ಪ್ರಯತ್ನಗಳಲ್ಲಿ ಭಾರತದ ಪಾತ್ರಕ್ಕೆ ಪ್ರಾಮುಖ್ಯತೆಯ ದ್ಯೋತಕವಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸ್ವರೂಪದದ್ದೇ ಎರಡು ಸಭೆಗಳನ್ನು ಸೆಪ್ಟೆಂಬರ್ 2018 ಮತ್ತು ಡಿಸೆಂಬರ್ 2019 ರಲ್ಲಿ ಇರಾನ್ನಲ್ಲಿ ನಡೆಸಲಾಗಿತ್ತು. ಕೊರೊನಾದಿಂದಾಗಿ ಭಾರತದಲ್ಲಿ ಮೂರನೇ ಸಭೆಯನ್ನು ತಡವಾಗಿ ನಡೆಸಲಾಗುತ್ತಿದೆ.
ಇದನ್ನೂ ಓದಿ: ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನ ಮತ್ತು ಶೀತಲ ಸಮರ 2.0