Homeಅಂತರಾಷ್ಟ್ರೀಯಅಫ್ಘಾನಿಸ್ತಾನದ ಬಗ್ಗೆ NSA ಮಟ್ಟದ ಸಭೆ ನಡೆಸಲಿರುವ ಭಾರತ!

ಅಫ್ಘಾನಿಸ್ತಾನದ ಬಗ್ಗೆ NSA ಮಟ್ಟದ ಸಭೆ ನಡೆಸಲಿರುವ ಭಾರತ!

- Advertisement -
- Advertisement -

ದೇಶವನ್ನು ತಾಲಿಬಾನ್ ಸ್ವಾಧೀನಪಡಿಸಿಕೊಂಡ ಎರಡು ತಿಂಗಳ ನಂತರ, ಅಫ್ಘಾನಿಸ್ಥಾನದ ಬಗ್ಗೆ ನವೆಂಬರ್ 10 ರಂದು ಪ್ರಾದೇಶಿಕ ಭದ್ರತಾ ಸಂವಾದವನ್ನು ಆಯೋಜಿಸಲು ಭಾರತ ಸಜ್ಜಾಗಿದೆ. ರಾಷ್ಟ್ರೀಯ ಭದ್ರತಾ ಸಲಹೆಗಾರರ ​​(ಎನ್‌ಎಸ್‌ಎ) ಮಟ್ಟದಲ್ಲಿ ಸಭೆ ನಡೆಯಲಿದ್ದು, ದೇಶದ ಎನ್‌ಎಸ್‌ಎ ಮುಖ್ಯಸ್ಥ ಅಜಿತ್ ದೋವಲ್ ಇದರ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಭೆಗೆ ಭಾರತವು ರಷ್ಯಾ, ಇರಾನ್, ಚೀನಾ, ಪಾಕಿಸ್ತಾನ, ತಜಕಿಸ್ತಾನ್ ಮತ್ತು ಉಜ್ಬೇಕಿಸ್ತಾನ್‌ನ ಎನ್‌ಎಸ್‌ಎಗಳನ್ನು ಔಪಚಾರಿಕವಾಗಿ ಆಹ್ವಾನಿಸಿತ್ತು.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮೈತ್ರಿಗಳು: ಇಲ್ಲಿಂದ ಮುಂದೇನು?

ಭಾರತದ ಆಹ್ವಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಷ್ಯಾ ಮತ್ತು ಇರಾನ್ ಸೇರಿದಂತೆ ಹಲವಾರು ದೇಶಗಳು ಸಭೆಯಲ್ಲಿ ಭಾಗವಹಿಸುವಿಕೆಯನ್ನು ದೃಢಪಡಿಸಿವೆ. ಆದರೆ ಪಾಕಿಸ್ತಾನವು ಆಹ್ವಾನವನ್ನು ತಿರಸ್ಕರಿಸಿದ್ದು ಮತ್ತು ಚೀನಾ ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇತರ ದೇಶಗಳ ಈ ಪ್ರತಿಕ್ರಿಯೆಯು ಅಫ್ಘಾನಿಸ್ತಾನದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸುವ ಪ್ರಾದೇಶಿಕ ಪ್ರಯತ್ನಗಳಲ್ಲಿ ಭಾರತದ ಪಾತ್ರಕ್ಕೆ ಪ್ರಾಮುಖ್ಯತೆಯ ದ್ಯೋತಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸ್ವರೂಪದದ್ದೇ ಎರಡು ಸಭೆಗಳನ್ನು ಸೆಪ್ಟೆಂಬರ್ 2018 ಮತ್ತು ಡಿಸೆಂಬರ್ 2019 ರಲ್ಲಿ ಇರಾನ್‌ನಲ್ಲಿ ನಡೆಸಲಾಗಿತ್ತು. ಕೊರೊನಾದಿಂದಾಗಿ ಭಾರತದಲ್ಲಿ ಮೂರನೇ ಸಭೆಯನ್ನು ತಡವಾಗಿ ನಡೆಸಲಾಗುತ್ತಿದೆ.

ಇದನ್ನೂ ಓದಿ: ಇಸ್ಲಾಮಿಕ್ ಎಮಿರೇಟ್ಸ್ ಆಫ್ ಅಫ್ಘಾನಿಸ್ತಾನ ಮತ್ತು ಶೀತಲ ಸಮರ 2.0

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...