Homeಕರೋನಾ ತಲ್ಲಣಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಭಾರತದಿಂದ ಬ್ರಿಟನ್‌ಗೆ ಜ.6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜ.8 ರಿಂದ ಪ್ರಾರಂಭವಾಗಲಿದೆ.

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್ ಆತಂಕದಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದ ವಿಮಾನಯಾನವನ್ನು ಜನವರಿ 6 ರಿಂದ ಪುನರಾರಂಭಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಜನವರಿ 8 ರಿಂದ ಭಾರತ ಮತ್ತು ಯುಕೆ ನಡುವೆ ವಿಮಾನಯಾನಗಳನ್ನು ಪುನರಾರಂಭಿಸಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ ಎಂದು ಶುಕ್ರವಾರ ಹೇಳಿಕೆ ನೀಡಿದ್ದ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಸ್ಪಷ್ಟೀಕರಣ ನೀಡಿದ್ದಾರೆ.

ಭಾರತದಿಂದ ಬ್ರಿಟನ್‌ಗೆ ಜನವರಿ 6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಆದರೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜನವರಿ 8 ರಿಂದ ಪ್ರಾರಂಭವಾಗಲಿದೆ. ಈ ವೇಳಾಪಟ್ಟಿ ಜನವರಿ 23 ರವರೆಗೆ ಮಾನ್ಯವಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

 

ಎರಡು ದೇಶಗಳ ನಡುವೆ ಅಲ್ಲಿಯವರೆಗೆ ಪ್ರತಿ ವಾರ 30 ವಿಮಾನಗಳು ಕಾರ್ಯನಿರ್ವಹಿಸಲಿದ್ದು, ತಲಾ 15 ವಿಮಾನಗಳು ಭಾರತ ಮತ್ತು ಬ್ರಿಟನ್ ನಡುವೆ ವಾಹಕಗಳಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿ, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 23ರ ರಿಂದ ಡಿ.31ರ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು.

ಇದನ್ನೂ ಓದಿ: ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ನಂತರ ಈ ನಿರ್ಬಂಧವನ್ನು ಜನವರಿ 7ರ ವರೆಗೆ ವಿಸ್ತರಿಸಲಾಗಿತ್ತು. ಈಗ ಈ ಕುರಿತು ಸ್ಪಷ್ಟನೆ ನೀಡಿರುವ ನಾಗರಿಕ ವಿಮಾನಯಾನ ಸಚಿವ ಜನವರಿ 6 ರಿಂದ ವಿಮಾನಯಾನ ಆರಂಭವಾಗಲಿದ್ದು, ಜನವರಿ 23 ರ ನಂತರ ಆದೇಶವನ್ನು ಪರಿಷ್ಕರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ರೂಪಾಂತರ ಕೊರೊನಾ ವೈರಸ್ ಪ್ರಕರಣಗಳು ಕಡಿಮೆ ವರದಿಯಾಗುತ್ತಿವೆ. ಇಲ್ಲಿಯವರೆಗೆ, ಭಾರತದಲ್ಲಿ 29 ಜನರು ಹೊಸ ರೂಪಾಂತರಿ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರಲ್ಲಿ ಹೊಸ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿರುವುದರಿಂದ, ಆರೋಗ್ಯ ಸಚಿವಾಲಯವು  ಪ್ರಯಾಣಿಕರಿಗೆ ವಿವರವಾದ ಮಾರ್ಗಸೂಚಿಯನ್ನು ರೂಪಿಸಿದೆ. ಎಲ್ಲಾ ಪ್ರಯಾಣಿಕರು ನಿಗದಿತ ಪ್ರಯಾಣಕ್ಕೆ ಕನಿಷ್ಠ 72 ಗಂಟೆಗಳ ಮೊದಲು ಆನ್‌ಲೈನ್ ಪೋರ್ಟಲ್ www.newdelhiairport.in ನಲ್ಲಿ ಸ್ವಯಂ ಘೋಷಣೆ ಅರ್ಜಿ ಸಲ್ಲಿಸಬೇಕು. ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕೊಂಡೊಯ್ಯುವುದು ಅತ್ಯಗತ್ಯವಾಗಿದೆ. ಜೊತೆಗೆ ಅದರ ನಕಲು ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಾರೆ, ಅದಕ್ಕಾಗಿಯೇ ಅವರು ಕಾಂಗ್ರೆಸ್‌ನ್ನು ಟೀಕಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

0
'ಲೋಕಸಭೆ ಚುನಾವಣೆಯ ಮೊದಲ ಸುತ್ತಿನ ಮತದಾನ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದೃಶ್ಯ ಮತದಾರರ ಭಯವಿದೆ, ಅದಕ್ಕಾಗಿಯೇ ಅವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆ' ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಬುಧವಾರ...