Homeಕರೋನಾ ತಲ್ಲಣಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಭಾರತದಿಂದ ಬ್ರಿಟನ್‌ಗೆ ಜ.6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜ.8 ರಿಂದ ಪ್ರಾರಂಭವಾಗಲಿದೆ.

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್ ಆತಂಕದಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದ ವಿಮಾನಯಾನವನ್ನು ಜನವರಿ 6 ರಿಂದ ಪುನರಾರಂಭಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಜನವರಿ 8 ರಿಂದ ಭಾರತ ಮತ್ತು ಯುಕೆ ನಡುವೆ ವಿಮಾನಯಾನಗಳನ್ನು ಪುನರಾರಂಭಿಸಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ ಎಂದು ಶುಕ್ರವಾರ ಹೇಳಿಕೆ ನೀಡಿದ್ದ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಸ್ಪಷ್ಟೀಕರಣ ನೀಡಿದ್ದಾರೆ.

ಭಾರತದಿಂದ ಬ್ರಿಟನ್‌ಗೆ ಜನವರಿ 6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಆದರೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜನವರಿ 8 ರಿಂದ ಪ್ರಾರಂಭವಾಗಲಿದೆ. ಈ ವೇಳಾಪಟ್ಟಿ ಜನವರಿ 23 ರವರೆಗೆ ಮಾನ್ಯವಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

 

ಎರಡು ದೇಶಗಳ ನಡುವೆ ಅಲ್ಲಿಯವರೆಗೆ ಪ್ರತಿ ವಾರ 30 ವಿಮಾನಗಳು ಕಾರ್ಯನಿರ್ವಹಿಸಲಿದ್ದು, ತಲಾ 15 ವಿಮಾನಗಳು ಭಾರತ ಮತ್ತು ಬ್ರಿಟನ್ ನಡುವೆ ವಾಹಕಗಳಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿ, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 23ರ ರಿಂದ ಡಿ.31ರ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು.

ಇದನ್ನೂ ಓದಿ: ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ನಂತರ ಈ ನಿರ್ಬಂಧವನ್ನು ಜನವರಿ 7ರ ವರೆಗೆ ವಿಸ್ತರಿಸಲಾಗಿತ್ತು. ಈಗ ಈ ಕುರಿತು ಸ್ಪಷ್ಟನೆ ನೀಡಿರುವ ನಾಗರಿಕ ವಿಮಾನಯಾನ ಸಚಿವ ಜನವರಿ 6 ರಿಂದ ವಿಮಾನಯಾನ ಆರಂಭವಾಗಲಿದ್ದು, ಜನವರಿ 23 ರ ನಂತರ ಆದೇಶವನ್ನು ಪರಿಷ್ಕರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ರೂಪಾಂತರ ಕೊರೊನಾ ವೈರಸ್ ಪ್ರಕರಣಗಳು ಕಡಿಮೆ ವರದಿಯಾಗುತ್ತಿವೆ. ಇಲ್ಲಿಯವರೆಗೆ, ಭಾರತದಲ್ಲಿ 29 ಜನರು ಹೊಸ ರೂಪಾಂತರಿ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರಲ್ಲಿ ಹೊಸ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿರುವುದರಿಂದ, ಆರೋಗ್ಯ ಸಚಿವಾಲಯವು  ಪ್ರಯಾಣಿಕರಿಗೆ ವಿವರವಾದ ಮಾರ್ಗಸೂಚಿಯನ್ನು ರೂಪಿಸಿದೆ. ಎಲ್ಲಾ ಪ್ರಯಾಣಿಕರು ನಿಗದಿತ ಪ್ರಯಾಣಕ್ಕೆ ಕನಿಷ್ಠ 72 ಗಂಟೆಗಳ ಮೊದಲು ಆನ್‌ಲೈನ್ ಪೋರ್ಟಲ್ www.newdelhiairport.in ನಲ್ಲಿ ಸ್ವಯಂ ಘೋಷಣೆ ಅರ್ಜಿ ಸಲ್ಲಿಸಬೇಕು. ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕೊಂಡೊಯ್ಯುವುದು ಅತ್ಯಗತ್ಯವಾಗಿದೆ. ಜೊತೆಗೆ ಅದರ ನಕಲು ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...