Homeಮುಖಪುಟಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

ಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಈಗ ಮೂರು ಹಂತದ ಚುನಾವಣೆ ಮುಗಿದಿದೆ. ಸದ್ಯ ಇಂಟರವಲ್ ಎನ್ನುವುದಾದರೆ, ಫಸ್ಟ್ ಹಾಫ್‍ನಲ್ಲಿ ದೇಶದ ಸಮಸ್ಯೆಗಳ ಕುರಿತು ಚಕಾರ ಎತ್ತದ, ತಾವು ಕೊಟ್ಟ ಭರವಸೆ ಕುರಿತು ಮಾತೇ ಆಡದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ದಾಳಿ, ಪಾಕ್ ದ್ವೇಷ, ರಾಷ್ಟ್ರದ ಸುರಕ್ಷತೆ ಎಂದೆಲ್ಲ ಭಾಷಣ ಬಿಗಿದರಷ್ಟೆ. ಸೆಕೆಂಡ್ ಹಾಫ್‍ನಲ್ಲಿ ಹಿಂದೆಲ್ಲ ಅಡಿಯಾಳಿಗಿದ್ದ ಮಾಧ್ಯಮಗಳನ್ನೆಲ್ಲಾ ಸಾರಾಸಗಟಾಗಿ ಖರೀದಿಸಿದಂತೆ ಕಾಣುತ್ತಿದೆ.

ಮೂರು ಹಂತದ ಚುನಾವಣೆ ಮುಗಿದ ನಂತರ ಭಯ ಬಿದ್ದಂತಿರುವ ಬಿಜೆಪಿಯವರು ಬೇರೆ ಹಾದಿ ಹಿಡಿದಿದ್ದಾರೆ. ಅಲ್ಲಿ ಭಾವನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರಲು ಒದ್ದಾಡಿದ್ದಾರೆ. ಅಕ್ಷಯಕುಮಾರ್ ಸಂದರ್ಶನ ಅದರ ಭಾಗ. ಅದು ಯಾವಾಗ ಲೇವಡಿಗೆ ಒಳಗಾಯಿತೋ, ಆಗ ಅವರು ಕಾಶಿ ವಿಶ್ವನಾಥನ ಹೆಸರಲ್ಲಿ ಧಾರ್ಮಿಕವಾಗಿ ಹಿಂದೂಗಳ ಒಲವು ಪಡೆಯಲು ಎರಡು ದಿನ ‘ಹರ’ಸಾಹಸ ಮಾಡಿದ್ದಾರೆ!
ಇದೇ ವೇಳೆ, ತಾವು ಈವರೆಗೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಇಂಡಿಯಾ ಟುಡೇಯೊಂದಿಗೆ ಗಂಗಾ ನದಿಯ ತಟದಲ್ಲಿ ಒಂದೂವರೆ ತಾಸುಗಳ ಸಂದರ್ಶನ ನೀಡಿದ್ದಾರೆ. ಪ್ರಧಾನಿಯ ನಾಮಿನೇಶನ್ ನಂತರ ಅದನ್ನು ಪ್ರಮೋಟ್ ಮಾಡುತ್ತಲೇ ಇರುವ ಇಂಡಿಯಾ ಟುದೇ ಚಾನೆಲ್,‘unforgettable interview for Modi’ ಎಂದೆಲ್ಲ ಪೋಸು ಕೊಡುತ್ತಿದೆ. ಇವತ್ತು ಸಂಜೆ 7ಕ್ಕೆ ಆ ಸಂದರ್ಶನ ಪ್ರಸಾರವಾಗಲಿದ್ದು, ಅದರ ತುಣುಕುಗಳನ್ನು ಈಗ ಪ್ರದರ್ಶಿಸಲಾಗಿತ್ತಿದೆ.

‘ಇಂಡಿಯಾ ಟುಡೇ’ದ ಸಂಪಾದಕನೇ ಆಗಿರುವ ರಾಹುಲ ಕನ್ವಾಲ್ ತನ್ನ ಸಹಚರರೊಂದಿಗೆ ಈ ಸಂದರ್ಶನ ಮಾಡಿದ್ದು, ‘ಮೋದಿ ಪ್ರಶ್ನೆಗೆ ಉತ್ತರಿಸಲ್ಲ, ಪ್ರೆಸ್ ಅನ್ನು ಅವಾಯ್ಡ್ ಮಾಡ್ತಾರೆ ಎಂಬುದೆಲ್ಲ ಸುಳ್ಳು, ಅವರು ನಮ್ಮ ಪ್ರಶ್ನೆ ಮತ್ತು ಕೌಂಟರ್ ಪ್ರಶ್ನೆಗೆಲ್ಲ ಉತ್ತರಿಸಿದರು’ ಎಂದೆಲ್ಲ ಹೇಳುತ್ತಾರೆ. ನ್ಯೂಸ್ ಆ್ಯಂಕರ್ ಅಂಜನಾ ಕಶ್ಯಪ್ ಸ್ಟುಡಿಯೋದಲ್ಲಿ ಪ್ರಸಾರವಾಗಲಿರುವ ಈ ಸಂದರ್ಶನದ ಬಗ್ಗೆ ಬಿಲ್ಡ್‍ಅಪ್ ಕೊಡುತ್ತಲೇ, ಗಂಗಾ ತಟದಲ್ಲಿರುವ ರಾಹುಲ್ ಕನ್ವಲ್‍ರನ್ನು ಮಾತಾಡಸಿ, ಮೋದಿ ಮನಬಿಚ್ಚಿ ಮಾತಾಡಿದರೇ ಎಂದು ನಾಟಕೀಯ ಶೈಲಿಯಲ್ಲಿ ಪ್ರಶ್ನೆ ಮಾಡುತ್ತಾರೆ! ಅದಕ್ಕೆ ಗಂಗಾ ತಟದಿಂದ ಉತ್ತರಿಸುವ ರಾಹುಲ್ ಕನ್ವಲ್, ಮೋದಿ ಬಗ್ಗೆ ತಪ್ಪು ಅಭಿಪ್ರಾಯ ಇವೆಯಲ್ಲ, ಈ ಸಂದರ್ಶನದಿಂದ ಅವೆಲ್ಲ ದೂರವಾಗಲಿವೆ, ಮೋದಿ ಪ್ರಬುದ್ಧ ನಾಯಕ ಎಂಬಂತೆ ಹೊಗಳತೊಡಗುತ್ತಾರೆ!

7ಕ್ಕೆ ಸಂದರ್ಶನ ನೋಡೋಣ!

ಅರ್ನಾಬ್ ಕೂಗಾಡಿದ್ದು ಆಯ್ತು ಕೆಲಸ ಆಗಲಿಲ್ಲ… ಅಕ್ಷಯ್ ಬಂದ, ವರ್ಕ್‍ಔಟ್ ಆಗಲಿಲ್ಲ… ಈಗ ಇದ್ದುದರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದ ‘ಇಂಡಿಯಾ ಟುಡೆ’ ಯನ್ನು ಕೂಡ ಬಲೆಗೆ ಹಾಕಲಾಗಿದೆ! ಈ ಸಂದರ್ಶನವನ್ನೂ ಎಲ್ಲ ಭಾಷೆಗಳ ಪೇಯ್ಡ್ ಚಾನೆಲ್‍ಗಳೂ ಅನುವಾದಿಸಿ (ಸಬ್ ಟೈಟಲ್ ಹಾಕಿ) ಪ್ರಸಾರ ಮಾಡುವುದಂತೂ ಗ್ಯಾರಂಟಿ! ಈಗಾಗಲೇ ಅವಕ್ಕೆ ಸಂದರ್ಶನದ ಸ್ಕ್ರಿಪ್ಟ್ ಸಿಕ್ಕಿರಬಹುದು ಅಲ್ಲವೇ?

ಮೋದಿಯವರು ಅಕ್ಷಯ್ ಕುಮಾರ್‍ಗೆ ಸಂದರ್ಶನ ಕೊಟ್ಟ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ರವೀಶ್‍ಕುಮಾರ್‍ಗೂ ಸಂದರ್ಶನ ಕೊಡುತ್ತೀರಾ ಎಂಬ ಪ್ರಶ್ನೆ ವೈರಲ್ ಆಗಿದೆ. ಚೇಂಜ್.ಆರ್ಗ್‍ನಲ್ಲಿ ಸಾವಿರಾರು ಜನ ಪಿಟಿಷನ್‍ಗೆ ಸಹಿ ಮಾಡಿ ಮೋದಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ ಅದಕ್ಕೆ ಪ್ರತಿಕ್ರಿಯಿಸದ ಮೋದಿ ಇಂಡಿಯಾ ಟುಡೇಗೆ ಸಂದರ್ಶನ ನೀಡಿ ಪಲಾಯನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಷ್ಟೇ ಸೆಕೆಂಡ್ ಹಾಫ್ ಶುರು. ಈ ಭಾಗದ ನಾಟಕದಲ್ಲಿ ಮಾಧ್ಯಮಗಳೇ ದೊಡ್ಡ ಪೇಯ್ಡ್ ಅಭಿನಯಕಾರರು ಎಂಬುದು ನಾಚಿಕೆಗೇಡಿನ ವಿಷಯ! ಆದರೂ ಪೂರ್ತಿ ಸಂದರ್ಶನ ಪ್ರಸಾರವಾಗುವವರೆಗೂ ಕಾಯೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...