Homeಮುಖಪುಟಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

ಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಈಗ ಮೂರು ಹಂತದ ಚುನಾವಣೆ ಮುಗಿದಿದೆ. ಸದ್ಯ ಇಂಟರವಲ್ ಎನ್ನುವುದಾದರೆ, ಫಸ್ಟ್ ಹಾಫ್‍ನಲ್ಲಿ ದೇಶದ ಸಮಸ್ಯೆಗಳ ಕುರಿತು ಚಕಾರ ಎತ್ತದ, ತಾವು ಕೊಟ್ಟ ಭರವಸೆ ಕುರಿತು ಮಾತೇ ಆಡದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ದಾಳಿ, ಪಾಕ್ ದ್ವೇಷ, ರಾಷ್ಟ್ರದ ಸುರಕ್ಷತೆ ಎಂದೆಲ್ಲ ಭಾಷಣ ಬಿಗಿದರಷ್ಟೆ. ಸೆಕೆಂಡ್ ಹಾಫ್‍ನಲ್ಲಿ ಹಿಂದೆಲ್ಲ ಅಡಿಯಾಳಿಗಿದ್ದ ಮಾಧ್ಯಮಗಳನ್ನೆಲ್ಲಾ ಸಾರಾಸಗಟಾಗಿ ಖರೀದಿಸಿದಂತೆ ಕಾಣುತ್ತಿದೆ.

ಮೂರು ಹಂತದ ಚುನಾವಣೆ ಮುಗಿದ ನಂತರ ಭಯ ಬಿದ್ದಂತಿರುವ ಬಿಜೆಪಿಯವರು ಬೇರೆ ಹಾದಿ ಹಿಡಿದಿದ್ದಾರೆ. ಅಲ್ಲಿ ಭಾವನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರಲು ಒದ್ದಾಡಿದ್ದಾರೆ. ಅಕ್ಷಯಕುಮಾರ್ ಸಂದರ್ಶನ ಅದರ ಭಾಗ. ಅದು ಯಾವಾಗ ಲೇವಡಿಗೆ ಒಳಗಾಯಿತೋ, ಆಗ ಅವರು ಕಾಶಿ ವಿಶ್ವನಾಥನ ಹೆಸರಲ್ಲಿ ಧಾರ್ಮಿಕವಾಗಿ ಹಿಂದೂಗಳ ಒಲವು ಪಡೆಯಲು ಎರಡು ದಿನ ‘ಹರ’ಸಾಹಸ ಮಾಡಿದ್ದಾರೆ!
ಇದೇ ವೇಳೆ, ತಾವು ಈವರೆಗೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಇಂಡಿಯಾ ಟುಡೇಯೊಂದಿಗೆ ಗಂಗಾ ನದಿಯ ತಟದಲ್ಲಿ ಒಂದೂವರೆ ತಾಸುಗಳ ಸಂದರ್ಶನ ನೀಡಿದ್ದಾರೆ. ಪ್ರಧಾನಿಯ ನಾಮಿನೇಶನ್ ನಂತರ ಅದನ್ನು ಪ್ರಮೋಟ್ ಮಾಡುತ್ತಲೇ ಇರುವ ಇಂಡಿಯಾ ಟುದೇ ಚಾನೆಲ್,‘unforgettable interview for Modi’ ಎಂದೆಲ್ಲ ಪೋಸು ಕೊಡುತ್ತಿದೆ. ಇವತ್ತು ಸಂಜೆ 7ಕ್ಕೆ ಆ ಸಂದರ್ಶನ ಪ್ರಸಾರವಾಗಲಿದ್ದು, ಅದರ ತುಣುಕುಗಳನ್ನು ಈಗ ಪ್ರದರ್ಶಿಸಲಾಗಿತ್ತಿದೆ.

‘ಇಂಡಿಯಾ ಟುಡೇ’ದ ಸಂಪಾದಕನೇ ಆಗಿರುವ ರಾಹುಲ ಕನ್ವಾಲ್ ತನ್ನ ಸಹಚರರೊಂದಿಗೆ ಈ ಸಂದರ್ಶನ ಮಾಡಿದ್ದು, ‘ಮೋದಿ ಪ್ರಶ್ನೆಗೆ ಉತ್ತರಿಸಲ್ಲ, ಪ್ರೆಸ್ ಅನ್ನು ಅವಾಯ್ಡ್ ಮಾಡ್ತಾರೆ ಎಂಬುದೆಲ್ಲ ಸುಳ್ಳು, ಅವರು ನಮ್ಮ ಪ್ರಶ್ನೆ ಮತ್ತು ಕೌಂಟರ್ ಪ್ರಶ್ನೆಗೆಲ್ಲ ಉತ್ತರಿಸಿದರು’ ಎಂದೆಲ್ಲ ಹೇಳುತ್ತಾರೆ. ನ್ಯೂಸ್ ಆ್ಯಂಕರ್ ಅಂಜನಾ ಕಶ್ಯಪ್ ಸ್ಟುಡಿಯೋದಲ್ಲಿ ಪ್ರಸಾರವಾಗಲಿರುವ ಈ ಸಂದರ್ಶನದ ಬಗ್ಗೆ ಬಿಲ್ಡ್‍ಅಪ್ ಕೊಡುತ್ತಲೇ, ಗಂಗಾ ತಟದಲ್ಲಿರುವ ರಾಹುಲ್ ಕನ್ವಲ್‍ರನ್ನು ಮಾತಾಡಸಿ, ಮೋದಿ ಮನಬಿಚ್ಚಿ ಮಾತಾಡಿದರೇ ಎಂದು ನಾಟಕೀಯ ಶೈಲಿಯಲ್ಲಿ ಪ್ರಶ್ನೆ ಮಾಡುತ್ತಾರೆ! ಅದಕ್ಕೆ ಗಂಗಾ ತಟದಿಂದ ಉತ್ತರಿಸುವ ರಾಹುಲ್ ಕನ್ವಲ್, ಮೋದಿ ಬಗ್ಗೆ ತಪ್ಪು ಅಭಿಪ್ರಾಯ ಇವೆಯಲ್ಲ, ಈ ಸಂದರ್ಶನದಿಂದ ಅವೆಲ್ಲ ದೂರವಾಗಲಿವೆ, ಮೋದಿ ಪ್ರಬುದ್ಧ ನಾಯಕ ಎಂಬಂತೆ ಹೊಗಳತೊಡಗುತ್ತಾರೆ!

7ಕ್ಕೆ ಸಂದರ್ಶನ ನೋಡೋಣ!

ಅರ್ನಾಬ್ ಕೂಗಾಡಿದ್ದು ಆಯ್ತು ಕೆಲಸ ಆಗಲಿಲ್ಲ… ಅಕ್ಷಯ್ ಬಂದ, ವರ್ಕ್‍ಔಟ್ ಆಗಲಿಲ್ಲ… ಈಗ ಇದ್ದುದರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದ ‘ಇಂಡಿಯಾ ಟುಡೆ’ ಯನ್ನು ಕೂಡ ಬಲೆಗೆ ಹಾಕಲಾಗಿದೆ! ಈ ಸಂದರ್ಶನವನ್ನೂ ಎಲ್ಲ ಭಾಷೆಗಳ ಪೇಯ್ಡ್ ಚಾನೆಲ್‍ಗಳೂ ಅನುವಾದಿಸಿ (ಸಬ್ ಟೈಟಲ್ ಹಾಕಿ) ಪ್ರಸಾರ ಮಾಡುವುದಂತೂ ಗ್ಯಾರಂಟಿ! ಈಗಾಗಲೇ ಅವಕ್ಕೆ ಸಂದರ್ಶನದ ಸ್ಕ್ರಿಪ್ಟ್ ಸಿಕ್ಕಿರಬಹುದು ಅಲ್ಲವೇ?

ಮೋದಿಯವರು ಅಕ್ಷಯ್ ಕುಮಾರ್‍ಗೆ ಸಂದರ್ಶನ ಕೊಟ್ಟ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ರವೀಶ್‍ಕುಮಾರ್‍ಗೂ ಸಂದರ್ಶನ ಕೊಡುತ್ತೀರಾ ಎಂಬ ಪ್ರಶ್ನೆ ವೈರಲ್ ಆಗಿದೆ. ಚೇಂಜ್.ಆರ್ಗ್‍ನಲ್ಲಿ ಸಾವಿರಾರು ಜನ ಪಿಟಿಷನ್‍ಗೆ ಸಹಿ ಮಾಡಿ ಮೋದಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ ಅದಕ್ಕೆ ಪ್ರತಿಕ್ರಿಯಿಸದ ಮೋದಿ ಇಂಡಿಯಾ ಟುಡೇಗೆ ಸಂದರ್ಶನ ನೀಡಿ ಪಲಾಯನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಷ್ಟೇ ಸೆಕೆಂಡ್ ಹಾಫ್ ಶುರು. ಈ ಭಾಗದ ನಾಟಕದಲ್ಲಿ ಮಾಧ್ಯಮಗಳೇ ದೊಡ್ಡ ಪೇಯ್ಡ್ ಅಭಿನಯಕಾರರು ಎಂಬುದು ನಾಚಿಕೆಗೇಡಿನ ವಿಷಯ! ಆದರೂ ಪೂರ್ತಿ ಸಂದರ್ಶನ ಪ್ರಸಾರವಾಗುವವರೆಗೂ ಕಾಯೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...