Homeಮುಖಪುಟಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

ಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಈಗ ಮೂರು ಹಂತದ ಚುನಾವಣೆ ಮುಗಿದಿದೆ. ಸದ್ಯ ಇಂಟರವಲ್ ಎನ್ನುವುದಾದರೆ, ಫಸ್ಟ್ ಹಾಫ್‍ನಲ್ಲಿ ದೇಶದ ಸಮಸ್ಯೆಗಳ ಕುರಿತು ಚಕಾರ ಎತ್ತದ, ತಾವು ಕೊಟ್ಟ ಭರವಸೆ ಕುರಿತು ಮಾತೇ ಆಡದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ದಾಳಿ, ಪಾಕ್ ದ್ವೇಷ, ರಾಷ್ಟ್ರದ ಸುರಕ್ಷತೆ ಎಂದೆಲ್ಲ ಭಾಷಣ ಬಿಗಿದರಷ್ಟೆ. ಸೆಕೆಂಡ್ ಹಾಫ್‍ನಲ್ಲಿ ಹಿಂದೆಲ್ಲ ಅಡಿಯಾಳಿಗಿದ್ದ ಮಾಧ್ಯಮಗಳನ್ನೆಲ್ಲಾ ಸಾರಾಸಗಟಾಗಿ ಖರೀದಿಸಿದಂತೆ ಕಾಣುತ್ತಿದೆ.

ಮೂರು ಹಂತದ ಚುನಾವಣೆ ಮುಗಿದ ನಂತರ ಭಯ ಬಿದ್ದಂತಿರುವ ಬಿಜೆಪಿಯವರು ಬೇರೆ ಹಾದಿ ಹಿಡಿದಿದ್ದಾರೆ. ಅಲ್ಲಿ ಭಾವನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರಲು ಒದ್ದಾಡಿದ್ದಾರೆ. ಅಕ್ಷಯಕುಮಾರ್ ಸಂದರ್ಶನ ಅದರ ಭಾಗ. ಅದು ಯಾವಾಗ ಲೇವಡಿಗೆ ಒಳಗಾಯಿತೋ, ಆಗ ಅವರು ಕಾಶಿ ವಿಶ್ವನಾಥನ ಹೆಸರಲ್ಲಿ ಧಾರ್ಮಿಕವಾಗಿ ಹಿಂದೂಗಳ ಒಲವು ಪಡೆಯಲು ಎರಡು ದಿನ ‘ಹರ’ಸಾಹಸ ಮಾಡಿದ್ದಾರೆ!
ಇದೇ ವೇಳೆ, ತಾವು ಈವರೆಗೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಇಂಡಿಯಾ ಟುಡೇಯೊಂದಿಗೆ ಗಂಗಾ ನದಿಯ ತಟದಲ್ಲಿ ಒಂದೂವರೆ ತಾಸುಗಳ ಸಂದರ್ಶನ ನೀಡಿದ್ದಾರೆ. ಪ್ರಧಾನಿಯ ನಾಮಿನೇಶನ್ ನಂತರ ಅದನ್ನು ಪ್ರಮೋಟ್ ಮಾಡುತ್ತಲೇ ಇರುವ ಇಂಡಿಯಾ ಟುದೇ ಚಾನೆಲ್,‘unforgettable interview for Modi’ ಎಂದೆಲ್ಲ ಪೋಸು ಕೊಡುತ್ತಿದೆ. ಇವತ್ತು ಸಂಜೆ 7ಕ್ಕೆ ಆ ಸಂದರ್ಶನ ಪ್ರಸಾರವಾಗಲಿದ್ದು, ಅದರ ತುಣುಕುಗಳನ್ನು ಈಗ ಪ್ರದರ್ಶಿಸಲಾಗಿತ್ತಿದೆ.

‘ಇಂಡಿಯಾ ಟುಡೇ’ದ ಸಂಪಾದಕನೇ ಆಗಿರುವ ರಾಹುಲ ಕನ್ವಾಲ್ ತನ್ನ ಸಹಚರರೊಂದಿಗೆ ಈ ಸಂದರ್ಶನ ಮಾಡಿದ್ದು, ‘ಮೋದಿ ಪ್ರಶ್ನೆಗೆ ಉತ್ತರಿಸಲ್ಲ, ಪ್ರೆಸ್ ಅನ್ನು ಅವಾಯ್ಡ್ ಮಾಡ್ತಾರೆ ಎಂಬುದೆಲ್ಲ ಸುಳ್ಳು, ಅವರು ನಮ್ಮ ಪ್ರಶ್ನೆ ಮತ್ತು ಕೌಂಟರ್ ಪ್ರಶ್ನೆಗೆಲ್ಲ ಉತ್ತರಿಸಿದರು’ ಎಂದೆಲ್ಲ ಹೇಳುತ್ತಾರೆ. ನ್ಯೂಸ್ ಆ್ಯಂಕರ್ ಅಂಜನಾ ಕಶ್ಯಪ್ ಸ್ಟುಡಿಯೋದಲ್ಲಿ ಪ್ರಸಾರವಾಗಲಿರುವ ಈ ಸಂದರ್ಶನದ ಬಗ್ಗೆ ಬಿಲ್ಡ್‍ಅಪ್ ಕೊಡುತ್ತಲೇ, ಗಂಗಾ ತಟದಲ್ಲಿರುವ ರಾಹುಲ್ ಕನ್ವಲ್‍ರನ್ನು ಮಾತಾಡಸಿ, ಮೋದಿ ಮನಬಿಚ್ಚಿ ಮಾತಾಡಿದರೇ ಎಂದು ನಾಟಕೀಯ ಶೈಲಿಯಲ್ಲಿ ಪ್ರಶ್ನೆ ಮಾಡುತ್ತಾರೆ! ಅದಕ್ಕೆ ಗಂಗಾ ತಟದಿಂದ ಉತ್ತರಿಸುವ ರಾಹುಲ್ ಕನ್ವಲ್, ಮೋದಿ ಬಗ್ಗೆ ತಪ್ಪು ಅಭಿಪ್ರಾಯ ಇವೆಯಲ್ಲ, ಈ ಸಂದರ್ಶನದಿಂದ ಅವೆಲ್ಲ ದೂರವಾಗಲಿವೆ, ಮೋದಿ ಪ್ರಬುದ್ಧ ನಾಯಕ ಎಂಬಂತೆ ಹೊಗಳತೊಡಗುತ್ತಾರೆ!

7ಕ್ಕೆ ಸಂದರ್ಶನ ನೋಡೋಣ!

ಅರ್ನಾಬ್ ಕೂಗಾಡಿದ್ದು ಆಯ್ತು ಕೆಲಸ ಆಗಲಿಲ್ಲ… ಅಕ್ಷಯ್ ಬಂದ, ವರ್ಕ್‍ಔಟ್ ಆಗಲಿಲ್ಲ… ಈಗ ಇದ್ದುದರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದ ‘ಇಂಡಿಯಾ ಟುಡೆ’ ಯನ್ನು ಕೂಡ ಬಲೆಗೆ ಹಾಕಲಾಗಿದೆ! ಈ ಸಂದರ್ಶನವನ್ನೂ ಎಲ್ಲ ಭಾಷೆಗಳ ಪೇಯ್ಡ್ ಚಾನೆಲ್‍ಗಳೂ ಅನುವಾದಿಸಿ (ಸಬ್ ಟೈಟಲ್ ಹಾಕಿ) ಪ್ರಸಾರ ಮಾಡುವುದಂತೂ ಗ್ಯಾರಂಟಿ! ಈಗಾಗಲೇ ಅವಕ್ಕೆ ಸಂದರ್ಶನದ ಸ್ಕ್ರಿಪ್ಟ್ ಸಿಕ್ಕಿರಬಹುದು ಅಲ್ಲವೇ?

ಮೋದಿಯವರು ಅಕ್ಷಯ್ ಕುಮಾರ್‍ಗೆ ಸಂದರ್ಶನ ಕೊಟ್ಟ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ರವೀಶ್‍ಕುಮಾರ್‍ಗೂ ಸಂದರ್ಶನ ಕೊಡುತ್ತೀರಾ ಎಂಬ ಪ್ರಶ್ನೆ ವೈರಲ್ ಆಗಿದೆ. ಚೇಂಜ್.ಆರ್ಗ್‍ನಲ್ಲಿ ಸಾವಿರಾರು ಜನ ಪಿಟಿಷನ್‍ಗೆ ಸಹಿ ಮಾಡಿ ಮೋದಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ ಅದಕ್ಕೆ ಪ್ರತಿಕ್ರಿಯಿಸದ ಮೋದಿ ಇಂಡಿಯಾ ಟುಡೇಗೆ ಸಂದರ್ಶನ ನೀಡಿ ಪಲಾಯನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಷ್ಟೇ ಸೆಕೆಂಡ್ ಹಾಫ್ ಶುರು. ಈ ಭಾಗದ ನಾಟಕದಲ್ಲಿ ಮಾಧ್ಯಮಗಳೇ ದೊಡ್ಡ ಪೇಯ್ಡ್ ಅಭಿನಯಕಾರರು ಎಂಬುದು ನಾಚಿಕೆಗೇಡಿನ ವಿಷಯ! ಆದರೂ ಪೂರ್ತಿ ಸಂದರ್ಶನ ಪ್ರಸಾರವಾಗುವವರೆಗೂ ಕಾಯೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...